Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:28 - ಕನ್ನಡ ಸತ್ಯವೇದವು C.L. Bible (BSI)

28 ಹಾರಾನನು, ತನ್ನ ಜನ್ಮಭೂಮಿಯಲ್ಲಿ, ಬಾಬಿಲೋನಿನ ಊರ್ ಎಂಬ ಪಟ್ಟಣದಲ್ಲಿ, ತನ್ನ ತಂದೆಯಾದ ತೆರಹನು ಜೀವದಿಂದಿರುವಾಗಲೇ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಹಾರಾನನು ತಾನು ಹುಟ್ಟಿದ ದೇಶದೊಳಗೆ ಕಲ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆಯಾದ ತೆರಹನ ಮುಂದೆಯೇ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಹಾರಾನನು ಲೋಟನನ್ನು ಪಡೆದನು. ಹಾರಾನನು ತಾನು ಹುಟ್ಟಿದ ದೇಶದೊಳಗೆ ಕಲ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆಯಾದ ತೆರಹನ ಹತ್ತಿರವೇ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಹಾರಾನನು ಬಾಬಿಲೋನಿನ ತನ್ನ ಸ್ವಂತ ಸ್ಥಳವಾದ ಊರ್ ಎಂಬಲ್ಲಿ ಸತ್ತುಹೋದನು. ಹಾರಾನನು ಸತ್ತಾಗ ಅವನ ತಂದೆ ಇನ್ನೂ ಜೀವಂತವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಸ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆ ತೆರಹನಿಗಿಂತ ಮೊದಲು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:28
5 ತಿಳಿವುಗಳ ಹೋಲಿಕೆ  

ಸವೇಶ್ವರ ಬಳಿಕ ಅಬ್ರಾಮನಿಗೆ ಇಂತೆಂದರು: “ಈ ನಾಡನ್ನು ನಿನಗೆ ಸೊತ್ತಾಗಿ ಕೊಡಬೇಕೆಂದು ಬಾಬಿಲೋನಿನಲ್ಲಿರುವ ಊರ್ ಪಟ್ಟಣದಿಂದ ನಿನ್ನನ್ನು ಬರಮಾಡಿದ ಸರ್ವೇಶ್ವರ ನಾನೇ,” ಎಂದರು.


ಸರ್ವೇಶ್ವರಾ, ಅಬ್ರಾಮನನು ನೀವು ಆರಿಸಿಕೊಂಡಿರಿ ಬಾಬಿಲೋನಿನ ‘ಊರ್’ ನಗರದಿಂದ ಆತನನು ಬರಮಾಡಿದಿರಿ ದೇವರಾದ ನೀವೇ ಆತನಿಗೆ ‘ಅಬ್ರಹಾಮ’ ಎಂದು ಹೆಸರಿಟ್ಟಿರಿ.


ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗು ತನಗೆ ಸೊಸಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಪಟ್ಟಣವನ್ನು ಬಿಟ್ಟು ಕಾನಾನ್ ನಾಡಿಗೆ ತೆರಳಿದನು. ಅವರು ಹಾರಾನ್ ಎಂಬ ಪಟ್ಟಣವನ್ನು ತಲುಪಿ ಅಲ್ಲಿ ವಾಸಮಾಡಿಕೊಂಡರು.


ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಮೇಲೆ ಬಿದ್ದು, ಒಂಟೆಗಳನ್ನು ಹೊಡೆದುಕೊಂಡುಹೋದರು. ಅಲ್ಲದೆ ಆ ಕೂಲಿ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯೊಂದಿಗೆ ನಿಮ್ಮ ಬಳಿಗೆ ಓಡಿಬಂದೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು