Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:13 - ಕನ್ನಡ ಸತ್ಯವೇದವು C.L. Bible (BSI)

13 ಆದಕಾರಣ ನೀನು ನನಗೆ ತಂಗಿಯೆಂದೇ ಅವರಿಗೆ ಹೇಳು. ಆಗ ನಿನ್ನ ನಿಮಿತ್ತ ನನಗೆ ಸತ್ಕಾರ ದೊರಕುವುದು; ನಿನ್ನ ದೆಸೆಯಿಂದ ನನ್ನ ಪ್ರಾಣ ಉಳಿಯುವುದು,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿಮಿತ್ತ ನನಗೆ ಹಿತವಾಗುವುದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿವಿುತ್ತ ನನಗೆ ಹಿತವಾಗುವದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ನೀನು ನನಗೆ ತಂಗಿಯಾಗಬೇಕೆಂದು ಜನರಿಗೆ ಹೇಳು. ಆಗ ಅವರು ನನ್ನನ್ನು ನಿನ್ನ ಸಹೋದರನೆಂದು ಭಾವಿಸಿ ನನ್ನನ್ನು ಕೊಲ್ಲದೆ ನನಗೆ ದಯೆತೋರುವರು. ಹೀಗೆ ನೀನು ನನ್ನ ಪ್ರಾಣ ಉಳಿಸುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ, ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ದಯಮಾಡಿ ಹೇಳಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:13
18 ತಿಳಿವುಗಳ ಹೋಲಿಕೆ  

ಅಲ್ಲಿಯ ಜನರು ಅವನ ಹೆಂಡತಿಯ ವಿಷಯವಾಗಿ ವಿಚಾರಿಸಿದರು. “ಅವಳು ನನ್ನ ತಂಗಿ”, ಎಂದು ಇಸಾಕನು ಹೇಳಿದನು. ರೆಬೆಕ್ಕಳು ಬಲು ಚೆಲುವೆಯಾಗಿದ್ದರಿಂದ ಆಕೆಯ ನಿಮಿತ್ತ ತನ್ನನ್ನು ಕೊಂದಾರು ಎಂದು ಹೆದರಿ ಹಾಗೆ ಹೇಳಿದನು.


ಅಲ್ಲಿದ್ದಾಗ ಅಬ್ರಹಾಮನು ತನ್ನ ಹೆಂಡತಿ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಈ ಕಾರಣ ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಸೇರಿಸಿಕೊಂಡನು.


ಆ ಮನುಷ್ಯನೇ ಈಕೆ ನನಗೆ ತಂಗಿಯಾಗಬೇಕೆಂದು ಹೇಳಿದ; ಈಕೆಯೂ ಆತನು ನನಗೆ ಅಣ್ಣನಾಗಬೇಕೆಂದು ಹೇಳಿದಳು. ಶುದ್ಧಮನಸ್ಸಿನಿಂದ ಹಾಗೂ ಶುದ್ಧಹಸ್ತದಿಂದ ಈ ಕಾರ್ಯಮಾಡಿದೆ,” ಎಂದನು.


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ಅಬ್ರಾಮನು ಮತ್ತು ನಾಹೋರನು ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆ ಹಾರಾನನ ಮಗಳು; ಹಾರಾನನು ಮಿಲ್ಕಳಿಗು ಹಾಗೂ ಇಸ್ಕಳಿಗು ತಂದೆ.


ಇಂಥವುಗಳಿಗೆ ಈಡಾಗುವ ದುಷ್ಕರ್ಮಿಗಳು ದೇವರ ಕೋಪಾಗ್ನಿಗೆ ಗುರಿಯಾಗುತ್ತಾರೆ.


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಅಬ್ರಾಮನು ಈಜಿಪ್ಟಿಗೆ ಬಂದಾಗ ಈಜಿಪ್ಟಿನವರು ಅವನ ಸಂಗಡ ಇದ್ದ ಹೆಣ್ಣು ಬಹಳ ಚೆಲುವೆಯೆಂದುಕೊಂಡರು


ಆಗ ಯೆರೆಮೀಯನು, “ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲರ ದೇವರೂ ಆದ ಸ್ವಾಮಿ ಹೀಗೆನ್ನುತ್ತಾರೆ: ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳ ಮೊರೆಹೊಕ್ಕರೆ ತಮ್ಮ ಪ್ರಾಣ ಉಳಿಯುವುದು. ಈ ನಗರ ಬೆಂಕಿ ಇಂದ ಸುಟ್ಟುಹೋಗದು, ತಾವೂ ತಮ್ಮ ಮನೆಯವರೂ ಮನೆತನದವರೂ ಬದುಕುವಿರಿ.


ಇದನ್ನು ಕೇಳಿದ ಯೆರೆಮೀಯನು, “ಇಲ್ಲ, ತಮ್ಮನ್ನು ಅವರ ಕೈಗೆ ಒಪ್ಪಿಸುವುದಿಲ್ಲ. ದಯವಿಟ್ಟು ನಾನು ತಮಗೆ ಹೇಳಿರುವ ಸರ್ವೇಶ್ವರನ ವಾಕ್ಯದಂತೆ ನಡೆದುಕೊಳ್ಳಿ. ನಡೆದುಕೊಂಡರೆ ತಮ್ಮ ಪ್ರಾಣ ಉಳಿಯುವುದು, ಒಳ್ಳೆಯದಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು