Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:7 - ಕನ್ನಡ ಸತ್ಯವೇದವು C.L. Bible (BSI)

7 ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:7
55 ತಿಳಿವುಗಳ ಹೋಲಿಕೆ  

ಹಾಗೆಯೇ, ದೇವರು ಅಬ್ರಹಾಮನಿಗೂ ಆತನ ಸಂತತಿಗೂ ವಾಗ್ದಾನಗಳನ್ನು ಮಾಡಿದರು. "ನಿನ್ನ ಸಂತತಿಗಳಿಗೆ" ಎಂದು ಹೇಳಿ ಅನೇಕರನ್ನು ಸೂಚಿಸದೆ “ನಿನ್ನ ಸಂತತಿಗೆ” ಎಂದು ಹೇಳಿ ಒಬ್ಬ ವ್ಯಕ್ತಿಯನ್ನೇ ಆ ವಾಗ್ದಾನದಲ್ಲಿ ಸೂಚಿಸಿದರು. ಆ ವ್ಯಕ್ತಿಯೇ ಕ್ರಿಸ್ತಯೇಸು.


ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.”


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ಒಂದು ದಿನ ಅಬ್ರಹಾಮನು ಉರಿಬಿಸಿಲ ವೇಳೆಯಲ್ಲಿ ಮಮ್ರೋತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿದ್ದನು. ಆಗ ಅವನಿಗೆ ಸರ್ವೇಶ್ವರ ಸ್ವಾಮಿಯ ದರ್ಶನವಾಯಿತು.


ನಿನ್ನ ಕಣ್ಣಿಗೆ ಕಾಣಿಸುವ ಈ ಪ್ರಾಂತ್ಯವನ್ನೆಲ್ಲಾ ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾಗಿ ಕೊಡುತ್ತೇನೆ.


ಬೇತೇಲಿಗೂ ಆಯಿ ಎಂಬ ಊರಿಗೂ ನಡುವೆ ತಾನು ಹಿಂದೆ ಗುಡಾರ ಹಾಕಿ ಬಲಿಪೀಠವನ್ನು ಕಟ್ಟಿದ ಕ್ಷೇತ್ರವನ್ನು ತಲುಪಿದನು. ಅಲ್ಲಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ ಆರಾಧಿಸಿದನು.


ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರ ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆವೃಕ್ಷಗಳ ತೋಪಿಗೆ ಬಂದು ವಾಸಮಾಡಿದನು. ಸರ್ವೇಶ್ವರ ಸ್ವಾಮಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಮೋಶೆಗೆ ಸರ್ವೇಶ್ವರ ಸ್ವಾಮಿ ಹೇಳಿದ ಮಾತುಗಳಿವು: “ನೀನು ಈಜಿಪ್ಟಿನಿಂದ ಕರೆದುತಂದ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳಬಿಟ್ಟು ತೆರಳು. ನಾನು ಅಬ್ರಹಾಮ್, ಇಸಾಕ್, ಯಕೋಬ್ ಎಂಬುವರೊಡನೆ ಅವನ ಸಂತತಿಯವರಿಗೆ ಕೊಡುವುದಾಗಿ ಪ್ರಮಾಣ ಮಾಡಿದ ನಾಡಿಗೆ ಹೊರಟುಹೋಗು.


ಯಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ಕಂಡಿದ್ದರೂ ಪ್ರಾಣಸಹಿತ ಉಳಿದಿದ್ದೇನಲ್ಲಾ!” ಎಂದುಕೊಂಡು ಆ ಸ್ಥಳಕ್ಕೆ ‘ಪೆನೀಯೇಲ್’ ಎಂದು ಹೆಸರಿಟ್ಟನು.


ಇಸಾಕನು ಒಂದು ಬಲಿಪೀಠವನ್ನು ಕಟ್ಟಿಸಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ ಆರಾಧಿಸಿ, ಅಲ್ಲಿ ಗುಡಾರ ಹಾಕಿಸಿಕೊಂಡನು. ಅವನ ಕೆಲಸಗಾರರು ಅಲ್ಲಿಯೂ ಒಂದು ಬಾವಿಯನ್ನು ತೋಡಿದರು.


‘ಈಜಿಪ್ಟ್ ದೇಶದಿಂದ ಹೊರಬಂದ ಈ ಜನರಲ್ಲಿ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಮತ್ತು ನೂನನ ಮಗ ಯೆಹೋಶುವನು ಇವರಿಬ್ಬರೇ ಹೊರತಾಗಿ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದರು.


ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆಮಾಡಿ ಆರಾಧಿಸಿದನು.


ಇವರೆಲ್ಲರೂ ವಿಶ್ವಾಸವುಳ್ಳವರಾಗಿಯೇ ಮೃತರಾದರು. ದೇವರು ವಾಗ್ದಾನಮಾಡಿದವುಗಳನ್ನು ಪಡೆಯದಿದ್ದರೂ ಅವುಗಳನ್ನು ದೂರದಿಂದಲೇ ನೋಡಿ ಸ್ವಾಗತಿಸಿ ಸಂತೋಷಪಟ್ಟರು; ತಾವು ಜಗತ್ತಿನಲ್ಲಿ ಕೇವಲ ಪರದೇಶಿಗಳೂ ಪ್ರವಾಸಿಗರೂ ಎಂಬುದನ್ನು ಒಪ್ಪಿಕೊಂಡರು.


ಈ ಮಾತಿನ ಅರ್ಥವೇನೆಂದರೆ: ಶರೀರ ಸಂಬಂಧದಿಂದ ಹುಟ್ಟಿದವರೆಲ್ಲರೂ ದೇವರ ಮಕ್ಕಳಾಗುವುದಿಲ್ಲ; ದೈವವಾಗ್ದಾನದ ಪರಿಣಾಮವಾಗಿ ಹುಟ್ಟಿದವರೇ ನಿಜವಾಗಿಯೂ ಅಬ್ರಹಾಮನ ಸಂತತಿ ಎನಿಸಿಕೊಳ್ಳುವರು.


ದೇವರು ಹೇಳಿದ ಸ್ಥಳಕ್ಕೆ ಬಂದು ಸೇರಿದಾಗ ಅಬ್ರಹಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿದ. ಕಟ್ಟಿಗೆಯನ್ನು ಅದರ ಮೇಲೆ ಒಟ್ಟಿ, ಮಗ ಇಸಾಕನ ಕೈಕಾಲುಗಳನ್ನು ಬಿಗಿದು, ಕಟ್ಟಿಗೆಗಳ ಮೇಲೆ ಅವನನ್ನು ಕೆಡವಿದ.


ಅಬ್ರಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು.


ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ಆದ್ದರಿಂದ ಪ್ರಿಯ ಸಹೋದರರೇ, ನೀವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳು.


ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.”


“ನಿನ್ನ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ನಿನ್ನ ದೇವರಾದ ಸರ್ವೇಶ್ವರ ಪ್ರಮಾಣಮಾಡಿದ ನಾಡಿಗೆ ನಿನ್ನನ್ನು ಸೇರಿಸಿದಾಗ,


ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


“ನಾನು ಸರ್ವೇಶ್ವರ, ಅಬ್ರಹಾಮ, ಇಸಾಕ ಹಾಗು ಯಕೋಬರಿಗೆ ನಾನು ‘ಸರ್ವಶಕ್ತನಾದ ದೇವರು ಎಂಬ ಹೆಸರುಳ್ಳವನಾಗಿ ಕಾಣಿಸಿಕೊಂಡನೇ ಹೊರತು ‘ಸರ್ವೇಶ್ವರ’ ಎಂಬ ನನ್ನ ಹೆಸರಿನಿಂದ ಅವರಿಗೆ ಗೋಚರವಾಗಲಿಲ್ಲ.


ಅಲ್ಲೇ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ 'ಏಲ್ - ಏಲೋಹೆ - ಇಸ್ರಯೇಲ್’ ಎಂದು ಹೆಸರಿಟ್ಟನು.


ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ನೋಹನು ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿದನು. ಶುದ್ಧವಾದ ಎಲ್ಲ ಪ್ರಾಣಿಪಕ್ಷಿಗಳಿಂದ ಆಯ್ದು ಆ ಪೀಠದ ಮೇಲೆ ದಹನಬಲಿಯನ್ನು ಅರ್ಪಿಸಿದನು.


ಆಗ ಇಲ್ಲಿ ಕಾಲಿಡುವಷ್ಟು ನೆಲವನ್ನು ಕೂಡ ದೇವರು ಅವನಿಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ. ಸ್ವಂತ ಸೊತ್ತಾಗಿ ಅವನಿಗೂ ಅವನ ಬಳಿಕ ಅವನ ಸಂತತಿಗೂ ಕೊಡುವುದಾಗಿ ವಾಗ್ದಾನಮಾಡಿದರಷ್ಟೆ. ಆಗ ಅಬ್ರಹಾಮನಿಗೆ ಮಕ್ಕಳೇ ಇರಲಿಲ್ಲ.


ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು.


ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ನಾಡಿನಿಂದಲೂ ನನ್ನನ್ನು ಇಲ್ಲಿಗೆ ಕರೆತಂದು, ‘ನಿನ್ನ ಸಂತತಿಗೆ ಈ ನಾಡನ್ನು ಕೊಡುತ್ತೇನೆ,’ ಎಂದು ಪರಲೋಕ ದೇವರಾದ ಸರ್ವೇಶ್ವರ ಸ್ವಾಮಿ ಪ್ರಮಾಣಮಾಡಿ ಹೇಳಿದ್ದಾರೆ. ಅವರೇ ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೆ ಹೆಣ್ಣು ತರುವುದಕ್ಕೆ ಅನುಕೂಲ ಮಾಡಿಕೊಡುವರು.


ಅಲ್ಲದೆ ಅವರು ಪ್ರವಾಸಿಗಳಾಗಿ ತಂಗಿದ್ದ ಕಾನಾನ್ ನಾಡನ್ನು ಅವರಿಗೆ ಸ್ವಂತ ನಾಡಾಗಿ ಕೊಡುವೆನೆಂದು ದೃಢವಾಗ್ದಾನ ಮಾಡಿದವನು ನಾನೇ.


ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.


ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.


ಅನಂತರ, “ನಾನು ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನ ಮಾಡಿದ ನಾಡು ಇದೇ; ಇದನ್ನು ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿದಾಟಿ ಅಲ್ಲಿಗೆ ಹೋಗಕೂಡದು,” ಎಂದು ಹೇಳಿದರು.


ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I ಇಸಾಕನಿಗೆ ಆಣೆಯಿಟ್ಟು ಆತನು ಹೇಳಿದುದನು II


ನೀನೆದ್ದು ಈ ನಾಡಿನ ಉದ್ದಗಲಕ್ಕೂ ತಿರುಗಾಡು; ಇದನ್ನು ನಾನು ನಿನಗೆ ಕೊಡುತ್ತೇನೆ, ಎಂದು ಹೇಳಿದರು.


ದೇವರು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಡಲಿ; ನೀನು ಪ್ರವಾಸಿಯಾಗಿರುವ ಈ ನಾಡನ್ನು, ಅಂದರೆ ಅಬ್ರಹಾಮನಿಗೆ ದೇವರು ವಾಗ್ದಾನಮಾಡಿದ್ದ ಈ ನಾಡನ್ನು, ನೀನು ಸ್ವಂತ ಸೊತ್ತಾಗಿಸಿಕೊಳ್ಳುವಂತಾಗಲಿ!” ಎಂದು ಹರಸಿ ಕಳುಹಿಸಿಬಿಟ್ಟನು.


ಯಕೋಬನು ತನ್ನ ಅಣ್ಣನ ಬಳಿಯಿಂದ ಓಡಿಹೋಗುವಾಗ ದೇವರು ಅವನಿಗೆ ಪ್ರತ್ಯಕ್ಷವಾದುದು ಅಲ್ಲಿಯೇ. ಎಂದೇ ಅವನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿ, ಆ ಸ್ಥಳಕ್ಕೆ ‘ಏಲ್ ಬೇತೇಲ್’ ಎಂದು ಹೆಸರಿಟ್ಟನು.


ನಾನು ಅಬ್ರಹಾಮ್, ಇಸಾಕರಿಗೆ ವಾಗ್ಡಾನ ಮಾಡಿದ ನಾಡನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೂ ಕೊಡುವೆನು,” ಎಂದು ಹೇಳಿದರು.


ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.


ಆ ಸ್ಥಳದಲ್ಲಿ ಮೋಶೆ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ‘ಯಾವ್ವೆನಿಸ್ಸಿ’ ಎಂದು ಹೆಸರಿಟ್ಟನು.


ಮೋಶೆ ಸರ್ವೇಶ್ವರನ ಆಜ್ಞೆಗಳನ್ನೆಲ್ಲ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದಡಿಯಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಇಸ್ರಯೇಲರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿದನು.


“ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ನಾಡನ್ನು ಸ್ವಂತ ನಾಡಾಗಿ ಹಂಚಿಕೊಡು.


“ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಜರಿಗೆ ಪ್ರಮಾಣ ಮಾಡಿಕೊಟ್ಟ ನಾಡನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.


ಸರ್ವೇಶ್ವರನ ದಾಸ ಮೋಶೆ ಇಸ್ರಯೇಲರಿಗೆ ಆಜ್ಞಾಪಿಸಿದ್ದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಯಾವ ಕಬ್ಬಿಣವೂ ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು.


ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಕುಲದ ಅರ್ಧಜನರು ಕಾನಾನ್ ನಾಡಿನಲ್ಲಿರುವ ಜೋರ್ಡನ್ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ಮಹಾಬಲಿಪೀಠವನ್ನು ಕಟ್ಟಿದರು.


ಗಿದ್ಯೋನನು ಅಲ್ಲೇ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿ ಅದಕ್ಕೆ ‘ಯೆಹೋವ ಷಾಲೋಮ್’ ಎಂದು ಹೆಸರಿಟ್ಟನು; ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.


ಅಲ್ಲಿ ಅವನ ಸ್ವಂತ ಮನೆ ಇದ್ದುದರಿಂದ ಅಲ್ಲಿಯೇ ಸರ್ವೇಶ್ವರನಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಇಸ್ರಯೇಲರನ್ನು ಪಾಲಿಸುತ್ತಿದ್ದನು.


ಅಲ್ಲಿ ಸರ್ವೇಶ್ವರನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಅವರಿಗೆ ದಹನಬಲಿಗಳನ್ನು ಹಾಗು ಶಾಂತಿಸಮಾಧಾನದ ಬಲಿಗಳನ್ನು ಅರ್ಪಿಸಿದನು. ಹೀಗೆ ನಾಡಿನ ಮೇಲಿದ್ದ ಸರ್ವೇಶ್ವರನ ಕೋಪ ಶಮನವಾಯಿತು. ಇಸ್ರಯೇಲರಲ್ಲಿದ್ದ ಆ ಸಂಹಾರಕವ್ಯಾಧಿ ನಿಂತುಹೋಯಿತು.


ಸರ್ವೇಶ್ವರನ ಹೆಸರಿಗಾಗಿ ಒಂದು ಪೀಠವನ್ನು ಕಟ್ಟಿಸಿದನು. ಅದರ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗಿಸಿ ಕಾಲುವೆ ಮಾಡಿಸಿದನು.


“ನಾ ಕೊಡುವೆನು ಕಾನಾನ್ ನಾಡನು ನಿಮಗೆ I ಸ್ವಾಸ್ತ್ಯವಾಗುವುದಿದು ನಿಮ್ಮ ಸಂತತಿಗೆ” II


ನಮ್ಮ ದೇವರಾದ ನೀವು ನಿಮ್ಮ ಪ್ರಜೆಗಳಾದ ಇಸ್ರಯೇಲರ ಎದುರಿನಿಂದ ಈ ನಾಡಿನ ನಿವಾಸಿಗಳನ್ನು ಹೊರದೂಡಿಸಿ, ಇದನ್ನು ಮಿತ್ರ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸೊತ್ತಾಗಿ ಕೊಟ್ಟಿರಲ್ಲವೆ?


ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀವು ನಮಗೆ ಅನುಗ್ರಹಿಸಿದ ಸೊತ್ತಿನಿಂದ ನಮ್ಮನ್ನು ಹೊರತಳ್ಳುವುದಕ್ಕಾಗಿ, ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.


ದೈವಪುರುಷ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ದಹನಬಲಿಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗ ಯೇಷೊವನೂ ಯಾಜಕರಾದ ಅವನ ಬಂಧುಗಳೂ ಹಾಗು ಶೆಯಲ್ತೀಯೇಲನ ಮಗ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಯೇಲ್ ದೇವರ ಬಲಿಪೀಠವನ್ನು ಪುನಃ ಕಟ್ಟುವುದಕ್ಕೆ ಆಗ ಆರಂಭಿಸಿದರು.


ಆ ಕಾಲದಲ್ಲಿ ಜುದೇಯ ವಂಶವು ಇಸ್ರಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತ್ಯವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು