Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:11 - ಕನ್ನಡ ಸತ್ಯವೇದವು C.L. Bible (BSI)

11 ಆದುದರಿಂದ ಲೋಟನು ಜೋರ್ಡನ್ ನದಿಯ ಸುತ್ತಲಿನ ಪ್ರದೇಶವನ್ನು ಆರಿಸಿಕೊಂಡು ಪೂರ್ವದಿಕ್ಕಿನ ಕಡೆಗೆ ಹೊರಟನು. ಹೀಗೆ ಅವರಿಬ್ಬರೂ ಬೇರೆ ಬೇರೆ ಆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದುದರಿಂದ ಲೋಟನು ಯೊರ್ದನ್ ಹೊಳೆಯ ಸುತ್ತಣ ಪ್ರದೇಶವನ್ನು ಆರಿಸಿಕೊಂಡು ಮೂಡಣ ಕಡೆಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದದರಿಂದ ಲೋಟನು ಯೊರ್ದನ್ ಹೊಳೆಯ ಸುತ್ತಣ ಪ್ರದೇಶವನ್ನು ಆದುಕೊಂಡು ಮೂಡಣ ಕಡೆಗೆ ಹೊರಟನು. ಹೀಗೆ ಅವರಿಬ್ಬರೂ ಪ್ರತ್ಯೇಕವಾದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ಲೋಟನು ಜೋರ್ಡನ್ ಕಣಿವೆಯನ್ನೆಲ್ಲಾ ತನಗಾಗಿ ಆರಿಸಿಕೊಂಡನು. ಅವರಿಬ್ಬರೂ ಪ್ರತ್ಯೇಕವಾದರು. ಲೋಟನು ಪೂರ್ವದ ಕಡೆಗೆ ಪ್ರಯಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದುದರಿಂದ ಲೋಟನು ಯೊರ್ದನಿನ ಕಣಿವೆಯನ್ನೆಲ್ಲಾ ತನಗಾಗಿ ಆರಿಸಿಕೊಂಡನು. ಲೋಟನು ಪೂರ್ವದಿಕ್ಕಿನ ಕಡೆಗೆ ಹೊರಟಿದ್ದರಿಂದ, ಅವರು ಒಬ್ಬರಿಂದೊಬ್ಬರು ಪ್ರತ್ಯೇಕವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:11
11 ತಿಳಿವುಗಳ ಹೋಲಿಕೆ  

ನಾಡೆಲ್ಲಾ ನಿನ್ನ ಕಣ್ಮುಂದಿದೆ. ದಯವಿಟ್ಟು ನನ್ನನ್ನು ಬಿಟ್ಟು ಬೇರೆ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುತ್ತೇನೆ".


ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.


ಸಭೆ ಸೇರುವ ರೂಢಿಯನ್ನು ಕೆಲವರು ಕೈಬಿಟ್ಟಿದ್ದಾರೆ. ನಾವು ಹಾಗೆ ಮಾಡದಿರೋಣ. ನಿಮಗೆ ತಿಳಿದಿರುವಂತೆ ಪ್ರಭು ಪ್ರತ್ಯಕ್ಷರಾಗುವ ದಿನವು ಸಮೀಪಿಸುತ್ತಿರುವುದರಿಂದ ಮತ್ತಷ್ಟು ಹೆಚ್ಚಾಗಿ ಒಬ್ಬರನ್ನೊಬ್ಬರು ಪ್ರೋತ್ಸಾಹಿಸೋಣ.


ನಿನಗೂ ನಿನ್ನ ಹೆತ್ತವನಿಗೂ ಮಿತ್ರನಾದವನನ್ನು ಬಿಡಬೇಡ; ಇಕ್ಕಟ್ಟಿನ ದಿನದಲ್ಲಿ ಒಡಹುಟ್ಟಿದವರನ್ನು ಆಶ್ರಯಿಸಬೇಡ; ದೂರವಿರುವ ಅಣ್ಣನಿಗಿಂತ ಹತ್ತಿರವಿರುವ ನೆರೆಯವನೆ ಲೇಸು.


ಗೆಳೆಯ ನಾನು ನಿನ್ನಲಿ ಭಯಭಕ್ತಿಯುಳ್ಳವರಿಗೆ I ನಿನ್ನ ನಿಯಮಗಳ ಕೈಗೊಂಡು ನಡೆಯುವವರಿಗೆ II


ಸಂತರು ನಾಡಿಗೆ ತಿಲಕವು I ಅವರಲ್ಲಿದೆ ಎನಗೆ ಒಲವು II


ಲೋಟನು ಅಬ್ರಾಮನನ್ನು ಬಿಟ್ಟುಹೋದ ಬಳಿಕ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ, “ನೀನು ಇರುವ ಸ್ಥಳದಿಂದಲೇ ದಕ್ಷಿಣೋತ್ತರ ಪೂರ್ವಪಶ್ಚಿಮಗಳ ಕಡೆಗೆ ಕಣ್ಣೆತ್ತಿ ನೋಡು.


ಊರ ಹೊರಗೆ ಬಿಟ್ಟಾದ ಮೇಲೆ ಆ ಇಬ್ಬರಲ್ಲಿ ಒಬ್ಬನು, “ಪ್ರಾಣ ಉಳಿಸಿಕೊಳ್ಳಬೇಕಾದರೆ ಓಡಬೇಕು, ಹಿಂದಕ್ಕೆ ನೋಡಬಾರದು; ಬಯಲುಸೀಮೆಯಲ್ಲೂ ನಿಲ್ಲದೆ ಗುಡ್ಡಗಾಡಿಗೆ ಓಡಬೇಕು, ಇಲ್ಲವಾದರೆ ನಾಶವಾದೀತು!” ಎಂದು ಎಚ್ಚರಿಸಿದನು.


ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.


ಅಬ್ರಾಮನು ಕಾನಾನ್ ನಾಡಿನಲ್ಲೇ ವಾಸಮಾಡಿದನು. ಲೋಟನು ಜೋರ್ಡನ್ ನದಿಯ ಸುತ್ತಣ ಊರುಗಳಲ್ಲಿ ವಾಸಮಾಡುತ್ತಾ ಸೋದೋಮ್‍ಗೆ ಸಮೀಪದಲ್ಲಿ ಗುಡಾರಹಾಕಿದನು.


“ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಯೇಲ್ ನಾಡಿಗೂ ಮಧ್ಯೆ ಜೋರ್ಡನ್ ಹೊಳೆ ಎಲ್ಲೆಯಾಗಿರುವುದು; ಉತ್ತರದ ಮೇರೆಯಿಂದ ಪೂರ್ವದ ಸಮುದ್ರದವರೆಗೆ ನೀವು ಗುರುತುಹಾಕಿಕೊಳ್ಳಬೇಕು. ಇದು ಪೂರ್ವದಿಕ್ಕಿನ ಮೇರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು