Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:9 - ಕನ್ನಡ ಸತ್ಯವೇದವು C.L. Bible (BSI)

9 ನಾಡೆಲ್ಲಾ ನಿನ್ನ ಕಣ್ಮುಂದಿದೆ. ದಯವಿಟ್ಟು ನನ್ನನ್ನು ಬಿಟ್ಟು ಬೇರೆ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುತ್ತೇನೆ".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇಶವೆಲ್ಲಾ ನಿನ್ನೆದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾವು ಪ್ರತ್ಯೇಕವಾಗೋಣ. ನಿನಗೆ ಬೇಕಾದ ಸ್ಥಳವನ್ನು ನೀನು ಆರಿಸಿಕೊ. ನೀನು ಎಡಗಡೆಗೆ ಹೋಗುವುದಾದರೆ, ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋಗುವುದಾದರೆ, ನಾನು ಎಡಗಡೆಗೆ ಹೋಗುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇಶವೆಲ್ಲಾ ನಿನ್ನ ಮುಂದೆ ಇರುತ್ತದೆಯಲ್ಲವೆ? ನಾವು ಪ್ರತ್ಯೇಕವಾಗೋಣ. ನೀನು ಎಡಕ್ಕೆ ಹೋದರೆ, ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ, ನಾನು ಎಡಕ್ಕೆ ಹೋಗುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:9
11 ತಿಳಿವುಗಳ ಹೋಲಿಕೆ  

ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ಇದರಲ್ಲಿ ವಾಸಿಸಿ, ವ್ಯಾಪಾರಮಾಡಿ, ನೀವು ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು,” ಎಂದು ಹೇಳಿದನು.


ಅದೂ ಅಲ್ಲದೆ, “ಇಗೋ, ನನ್ನ ನಾಡು ನಿನಗೆ ತೆರೆದಿದೆ; ಇಷ್ಟಬಂದ ಕಡೆ ಹೋಗಿ ವಾಸಮಾಡು,” ಎಂದನು.


ನಿಮ್ಮ ನಿಮ್ಮಲ್ಲಿರುವ ವ್ಯಾಜ್ಯಗಳೇ ನಿಮ್ಮ ಸೋಲಿನ ಸೂಚನೆಗಳು. ಅದಕ್ಕಿಂತ ಅನ್ಯಾಯವನ್ನು ಸಹಿಸಿಕೊಳ್ಳುವುದು ಒಳ್ಳೆಯದಲ್ಲವೇ? ಸುಲಿಗೆಗೆ ತುತ್ತಾದರೂ ಸಾವಧಾನದಿಂದ ಇರುವುದು ಒಳಿತಲ್ಲವೇ?


ಸಾಧ್ಯವಾದ ಮಟ್ಟಿಗೆ ಸರ್ವರೊಂದಿಗೂ ಸಮಾಧಾನದಿಂದ ಬಾಳಿರಿ.


ಶಾಂತಿಪರ ಮಾತು ನನ್ನದು I ಸಮರದ ಕಾತರ ಅವರದು II


ಆದುದರಿಂದ ಅಬ್ರಾಮನು ಲೋಟನಿಗೆ ಹೀಗೆಂದನು: “ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು. ನಾವು ಬಳಗದವರು.


ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.


ನೋಡು, ನಿನ್ನ ಕೈಗೆ ಹಾಕಿದ್ದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸಿದ್ದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದಿದ್ದರೆ ಬರಬೇಕಾಗಿಲ್ಲ. ಇಗೋ ದೇಶವೆಲ್ಲ ನಿನ್ನ ಕಣ್ಣೆದುರಿಗಿದೆ. ನಿನಗೆ ಯಾವ ಕಡೆಗೆ ಹೋಗುವುದು ಸರಿಯೆಂದು, ಒಳ್ಳೆಯದೆಂದು ತೋರುತ್ತದೋ ಆ ಕಡೆಗೆ ಹೋಗು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು