Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:11 - ಕನ್ನಡ ಸತ್ಯವೇದವು C.L. Bible (BSI)

11 ಗೆದ್ದ ಆ ನಾಲ್ಕು ರಾಜರು ಸೊದೋಮ್ ಮತ್ತು ಗೊಮೋರ ಪಟ್ಟಣಗಳನ್ನು ಸೂರೆಮಾಡಿದರು. ಅವುಗಳಲ್ಲಿದ್ದ ಆಸ್ತಿಪಾಸ್ತಿಯನ್ನೂ ದವಸಧಾನ್ಯಗಳನ್ನೂ ದೋಚಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಗೆದ್ದ ಆ ನಾಲ್ಕು ಅರಸರು ಸೊದೋಮ್ ಗೊಮೋರ ಪಟ್ಟಣಗಳನ್ನು ಸೂರೆಮಾಡಿ ಅವುಗಳಲ್ಲಿದ್ದ ಎಲ್ಲಾ ಸಂಪತ್ತನ್ನೂ ದವಸವನ್ನೂ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಗೆದ್ದವರು ಸೊದೋಮ್ ಗೊಮೋರ ಪಟ್ಟಣಗಳನ್ನು ಸೂರೆಮಾಡಿ ಅವುಗಳಲ್ಲಿದ್ದ ಎಲ್ಲಾ ಆಸ್ತಿಯನ್ನೂ ದವಸವನ್ನೂ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಗೆದ್ದವರು ಸೊದೋಮ್ ಮತ್ತು ಗೊಮೋರಗಳ ಜನರು ಹೊಂದಿದ್ದ ಎಲ್ಲಾ ವಸ್ತುಗಳನ್ನು ತೆಗೆದುಕೊಂಡರು. ಅವರು ಅವರೆಲ್ಲರ ಆಹಾರವನ್ನೂ ಬಟ್ಟೆಗಳನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಅವರು ಸೊದೋಮ್, ಗೊಮೋರಗಳ ಎಲ್ಲಾ ಸಂಪತ್ತನ್ನೂ, ಅವರ ಎಲ್ಲಾ ಆಹಾರ ಪದಾರ್ಥಗಳನ್ನೂ ತೆಗೆದುಕೊಂಡು ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:11
8 ತಿಳಿವುಗಳ ಹೋಲಿಕೆ  

ಸೊದೋಮಿನ ಅರಸನು ಅಬ್ರಾಮನಿಗೆ, “ನೀನು ಬಿಡಿಸಿ ತಂದ ಜನರನ್ನು ನನಗೆ ಕೊಡು; ಆಸ್ತಿಯನ್ನು ನೀನೇ ಇಟ್ಟುಕೊ,” ಎಂದನು.


ಆ ರಾಜರು ಅಪಹರಿಸಿದ್ದ ಎಲ್ಲ ವಸ್ತುಗಳನ್ನು ಕಿತ್ತುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನು ಬಿಡುಗಡೆಮಾಡಿದನು; ಅವನ ಆಸ್ತಿಪಾಸ್ತಿಯನ್ನು, ಸೆರೆಯಲ್ಲಿದ್ದ ಮಹಿಳೆಯರನ್ನು ಮತ್ತು ಇತರರನ್ನು ಬಿಡಿಸಿಕೊಂಡು ಹಿಂದಿರುಗಿದನು.


ಅವರು ನಿಮ್ಮ ದನಗಳನ್ನೂ ಬೆಳೆಗಳನ್ನೂ ತಿಂದುಬಿಡುವರು. ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನಕುರಿಗಳ ಸಂತಾನವನ್ನಾಗಲಿ, ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.


“ನಿಮ್ಮ ಮೊಣಕಾಲುಗಳಲ್ಲೂ ತೊಡೆಗಳಲ್ಲೂ ಮತ್ತು ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ವಾಸಿಯಾಗದ ಕೆಟ್ಟಕೆಟ್ಟ ಹುಣ್ಣುಗಳನ್ನು ಸರ್ವೇಶ್ವರ ಹುಟ್ಟಿಸಿ ಬಾಧಿಸುವರು;


ನಿಮ್ಮ ಪಶುಗಳನ್ನು ನಿಮ್ಮ ಕಣ್ಣಮುಂದೆಯೇ ಕೊಯ್ಯುವರು; ಆದರೆ ಅವುಗಳ ಮಾಂಸ ನಿಮಗೆ ಸಿಕ್ಕದು. ನಿಮ್ಮ ಕತ್ತೆಯನ್ನು ನಿಮ್ಮೆದುರಿಗೇ ಬಲಾತ್ಕಾರದಿಂದ ಹಿಡಿದುಕೊಂಡು ಹೋಗುವರು. ಆದರೆ ಅದನ್ನು ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡುಕುರಿಗಳು ಶತ್ರುಗಳ ಪಾಲಾಗುವುವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ.


ತನ್ನ ಹೆಂಡತಿ ಸಾರಯಳನ್ನು, ತನ್ನ ತಮ್ಮನ ಮಗನಾದ ಲೋಟನನ್ನು, ತಾನು ಮತ್ತು ಲೋಟನು ಹಾರಾನಿನಲ್ಲಿ ಗಳಿಸಿದ ಆಸ್ತಿಪಾಸ್ತಿಯನ್ನು ಹಾಗು ದಾಸದಾಸಿಯರನ್ನು ತೆಗೆದುಕೊಂಡು ಹೋಗಿ ಕಾನಾನ್ ನಾಡನ್ನು ಸೇರಿದನು.


ಆ ಸಿದ್ದೀಮ್ ತಗ್ಗಿನಲ್ಲಿ ಕಲ್ಲರಗಿನ ಕೆಸರುಗುಣಿಗಳು ಬಹಳವಿದ್ದವು. ಸೊದೋಮ್ ಗೊಮೋರದ ರಾಜರಕಡೆಯವರು ಹಿಮ್ಮೆಟ್ಟಿ ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು. ಉಳಿದವರು ಬೆಟ್ಟಗಳಿಗೆ ಓಡಿಹೋದರು.


ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗ ಲೋಟನನ್ನು ಅವನ ಆಸ್ತಿಪಾಸ್ತಿ ಸಹಿತ ಹಿಡಿದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು