Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:17 - ಕನ್ನಡ ಸತ್ಯವೇದವು C.L. Bible (BSI)

17 ಹೊತ್ತು ಮುಳುಗಿ ಕಾರ್ಗತ್ತಲಾದಾಗ ಇಗೋ, ಹೊಗೆಯಾಡುವ ಒಲೆಯೊಂದು ಹಾಗು ಉರಿಯುವ ದೀವಿಟಿಗೆಯೊಂದು ಕಾಣಿಸಿಕೊಂಡು ಆ ತುಂಡುಗಳ ನಡುವೆ ಹಾದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೊತ್ತು ಮುಳುಗಿ ಕಾರ್ಗತ್ತಲಾದಾಗ, ಇಗೋ, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಕಾಣಿಸಿ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೊತ್ತು ಮುಣುಗಿ ಕಾರ್ಗತ್ತಲಾದಾಗ ಇಗೋ ಹೊಗೆಹಾಯುವ ಒಲೆಯೂ ಉರಿಯುವ ದೀವಟಿಗೆಯೂ ಕಾಣಿಸಿ ಆ ತುಂಡುಗಳ ನಡುವೆ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸೂರ್ಯನು ಮುಳುಗಿದ ಮೇಲೆ ತುಂಬ ಕತ್ತಲಾಯಿತು. ಕಡಿದುಹಾಕಿದ್ದ ಪ್ರತಿಯೊಂದು ಪ್ರಾಣಿಗಳ ದೇಹದ ಎರಡೆರಡು ಹೋಳುಗಳು ಇನ್ನೂ ನೆಲದ ಮೇಲೆ ಇದ್ದವು. ಆ ಸಮಯದಲ್ಲಿ ಇದ್ದಕ್ಕಿದ್ದಂತೆ ಹೊಗೆ ಮತ್ತು ಬೆಂಕಿಗಳಿಂದ ಕೂಡಿದ ದೀವಿಟಿಗೆಯು ಈ ತುಂಡುಗಳ ನಡುವೆ ಹಾದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇದಾದ ಮೇಲೆ ಹೊತ್ತು ಮುಳುಗಿ ಕತ್ತಲಾಗುತ್ತಿರಲು, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:17
13 ತಿಳಿವುಗಳ ಹೋಲಿಕೆ  

ಅನಂತರ ಸರ್ವೇಶ್ವರನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು. ಸರ್ವೇಶ್ವರನ ದೂತನು ಅದೃಶ್ಯನಾದನು.


ಅಲ್ಲಿ ಸರ್ವೇಶ್ವರಸ್ವಾಮಿಗಾಗಿ ಬಲಿಪೀಠವನ್ನು ಕಟ್ಟಿಸಿದನು. ಅದರ ಮೇಲೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಿ ಸರ್ವೇಶ್ವರನನ್ನು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಮೊರೆಯನ್ನು ಆಲಿಸಿ, ಆಕಾಶದಿಂದ ಬಲಿಪೀಠದ ಮೇಲೆ ಬೆಂಕಿಯನ್ನು ಬರಮಾಡಿ,


ಸಿಯೋನಿನ ಸದ್ಧರ್ಮವು ಪ್ರಕಾಶಗೊಳ್ಳುವತನಕ ಜೆರುಸಲೇಮಿನ ಉದ್ಧಾರ ದೀಪವು ಬೆಳಗುವತನಕ ಸುಮ್ಮನಿರೆನು ನಾನು ಸಿಯೋನಿನ ಹಿತವನ್ನು ಲಕ್ಷಿಸದೆ, ಮೌನವಿರೆನು ಜೆರುಸಲೇಮಿನ ಸುಕ್ಷೇಮವನು ಚಿಂತಿಸದೆ.


ಹೊರಬಂದಿತು ಹೊಗೆ ಆತನ ಮೂಗಿನಿಂದ ಹೊರಟಿತು ಅಗ್ನಿಜ್ವಾಲೆ ಆತನ ಬಾಯಿಂದ ಕಾದುಕೆಂಡವಾಯಿತು ಅದಕ್ಕೆದುರಿಗೆ ಸಿಕ್ಕಿದುದೆಲ್ಲ.


ಅದೇನೆಂದರೆ ಬಲಿಪೀಠದಿಂದ ಆಕಾಶಕ್ಕೆ ಹೋಗುತ್ತಿದ್ದ ಅಗ್ನಿಜ್ವಾಲೆಯೊಳಗೆ ಅವನು ಮೇಲಕ್ಕೇರಿಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲಾಗಿ ಬಿದ್ದರು.


ಆದರೆ ನಿಮ್ಮನ್ನು ತಮ್ಮ ಸ್ವಕೀಯ ಜನರನ್ನಾಗಿಸಿಕೊಳ್ಳಲು ಸಂಕಲ್ಪಿಸಿ ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಆ ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆದುತಂದು ಇದ್ದಾರೆ ಆ ಸರ್ವೇಶ್ವರ. ಅಂತೆಯೇ ನೀವು ಇಂದಿಗೂ ಅವರ ಸ್ವಂತ ಜನರಾಗಿದ್ದೀರಿ.


ಅಬ್ರಾಮನು ಅವುಗಳನ್ನೆಲ್ಲಾ ತೆಗೆದುಕೊಂಡು ಬಂದು ಆ ಪ್ರಾಣಿಗಳನ್ನು ಕಡಿದು, ಎರಡೆರಡು ಹೋಳುಮಾಡಿ, ತುಂಡಿಗೆ ತುಂಡನ್ನು ಎದುರಾಗಿಟ್ಟನು. ಪಕ್ಷಿಗಳನ್ನು ಮಾತ್ರ ಕಡಿಯಲಿಲ್ಲ.


ಸೀನಾಯಿ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರ ಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದುಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು.


ಕೂಡಲೆ ಸರ್ವೇಶ್ವರನ ಕಡೆಯಿಂದ ಬೆಂಕಿ ಇಳಿದುಬಂದು ಬಲಿಮಾಂಸವನ್ನೂ ಕಟ್ಟಿಗೆ ಕಲ್ಲುಮಣ್ಣುಗಳನ್ನೂ ದಹಿಸಿಬಿಟ್ಟಿತು. ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.


ಆ ಗುಡುಗು ಮಿಂಚನ್ನು, ತುತೂರಿ ಧ್ವನಿಯನ್ನು ಹಾಗು ಬೆಟ್ಟದಿಂದ ಹೊರಡುತ್ತಿದ್ದ ಹೊಗೆಯನ್ನು ಜನರೆಲ್ಲರು ನೋಡಿದರು. ನೋಡಿ ನಡುಗುತ್ತಾ ದೂರದಲ್ಲೇ ನಿಂತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು