Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:13 - ಕನ್ನಡ ಸತ್ಯವೇದವು C.L. Bible (BSI)

13 ಹಾಗರಳು, “ನನ್ನನ್ನು ನೋಡುವಾತ ದೇವರನ್ನು ನಾನಿಲ್ಲೇ ನೋಡಿಬಿಟ್ಟೆನಲ್ಲಾ!” ಎಂದುಕೊಂಡು ತನ್ನ ಸಂಗಡ ಮಾತನಾಡಿದ ಸರ್ವೇಶ್ವರ ಸ್ವಾಮಿಗೆ, “ಎಲ್ಲವನ್ನು ನೋಡುವಾತ ದೇವರು" ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, “ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವಳು - ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡಿದ್ದೇನಲ್ಲಾ ಅಂದುಕೊಂಡು ತನ್ನ ಸಂಗಡ ಮಾತಾಡಿದ್ದ ಯೆಹೋವನಿಗೆ [ಎಲ್ಲವನ್ನೂ] ನೋಡುವ ದೇವರೆಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ತನ್ನೊಡನೆ ಮಾತಾಡಿದ್ದರಿಂದ ಹಾಗರಳು, “ಈ ಸ್ಥಳದಲ್ಲಿಯೂ ದೇವರು ನನ್ನನ್ನು ನೋಡಿ ನನಗಾಗಿ ಚಿಂತಿಸುತ್ತಾನೆ ಎಂದುಕೊಂಡು ಆತನಿಗೆ ‘ನನ್ನನ್ನು ನೋಡುವ ದೇವರು’” ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವ ದೇವರಿಗೆ, “ನೀವು ನನ್ನನ್ನು ನೋಡುವ ದೇವರು,” ಎಂದು ಹೆಸರಿಟ್ಟಳು. ಏಕೆಂದರೆ, “ನನ್ನನ್ನು ನೋಡುವ ದೇವರನ್ನು ನಾನು ಇಲ್ಲಿ ನೋಡಿದೆ,” ಎಂದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:13
14 ತಿಳಿವುಗಳ ಹೋಲಿಕೆ  

ಯಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ಕಂಡಿದ್ದರೂ ಪ್ರಾಣಸಹಿತ ಉಳಿದಿದ್ದೇನಲ್ಲಾ!” ಎಂದುಕೊಂಡು ಆ ಸ್ಥಳಕ್ಕೆ ‘ಪೆನೀಯೇಲ್’ ಎಂದು ಹೆಸರಿಟ್ಟನು.


ನರನ ಮಾರ್ಗ ಸರ್ವೇಶ್ವರನ ಕಣ್ಣಿಗೆ ಮರೆಯಲ್ಲ; ಆತ ವೀಕ್ಷಿಸುತ್ತಾನೆ ಮನುಷ್ಯನ ನಡತೆಯನ್ನೆಲ್ಲಾ.


ಸರ್ವೇಶ್ವರನ ದೃಷ್ಟಿ ಸರ್ವವ್ಯಾಪ್ತ; ಕೆಟ್ಟವರ ಮೇಲೂ ಒಳ್ಳೆಯವರ ಮೇಲೂ ಆತನ ನೋಟ.


ನನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ಆಗಿರುವಂಥವರು ನನ್ನ ಕಡೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀವು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿರಿ. ದೇವರು ನನ್ನ ಕಷ್ಟದುಃಖವನ್ನೂ ನಾನು ಪಟ್ಟ ಪ್ರಯಾಸವನ್ನೂ ಗಮನಿಸಿದ್ದಾರೆ. ಆದ್ದರಿಂದಲೇ ನಿನ್ನೆಯ ರಾತ್ರಿ ನಿಮಗೆ ಎಚ್ಚರಿಕೆ ನೀಡಿದ್ದಾರೆ,” ಎಂದನು.


ಮರಳುಗಾಡಿನಲ್ಲಿ ಶೂರಿಗೆ ಹೋಗುವ ಹಾದಿಪಕ್ಕದಲ್ಲಿದ್ದ ಒಂದು ಒರತೆಯ ಬಳಿ ಸ್ವಾಮಿಯ ದೂತನು ಅವಳನ್ನು ಕಂಡನು.


ಆ ಸ್ಥಳಕ್ಕೆ “ಯೆಹೋವ ಯೀರೆ" ಎಂದು ಹೆಸರಿಟ್ಟ.


ಅಲ್ಲದೆ ಭಯಭಕ್ತಿಯಿಂದ, “ಇದು ಮಹಾಗಂಭೀರವಾದ ಸ್ಥಳ; ದೇವರ ಸ್ಥಾನವೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು!” ಎಂದನು.


ಗಿದ್ಯೋನನು ಅಲ್ಲೇ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿ ಅದಕ್ಕೆ ‘ಯೆಹೋವ ಷಾಲೋಮ್’ ಎಂದು ಹೆಸರಿಟ್ಟನು; ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.


ಅವರು ಇಸ್ರಯೇಲರ ಮುಖಂಡರಿಗೆ ಯಾವ ಹಾನಿಯನ್ನೂ ಮಾಡಲಿಲ್ಲ. ಆ ಮುಖಂಡರು ದೇವರನ್ನು ಸಂದರ್ಶಿಸಿದರು; ಬಳಿಕ ಅನ್ನಪಾನಗಳನ್ನು ತೆಗೆದುಕೊಂಡರು.


ಅವನು ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯ ಆಯಿತು; ಕೀಲು ಕಳಚಿದ ತೊಡೆಯ ನಿಮಿತ್ತ ಅವನು ಕುಂಟುಕೊಂಡೇ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು