Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:1 - ಕನ್ನಡ ಸತ್ಯವೇದವು C.L. Bible (BSI)

1 ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:1
45 ತಿಳಿವುಗಳ ಹೋಲಿಕೆ  

ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ನಮ್ಮಲ್ಲಿ ಕಾರ್ಯಸಾಧಿಸುವ ಹಾಗೂ ನಮ್ಮ ಆಶೆ-ಆಕಾಂಕ್ಷೆಗಿಂತಲೂ ಬೇಡಿಕೆ-ಕೋರಿಕೆಗಿಂತಲೂ ಅಧಿಕವಾದುದನ್ನು ಮಾಡಲು ದೇವರು ಶಕ್ತರು. ಅವರಿಗೆ ಧರ್ಮಸಭೆಯಲ್ಲೂ ಕ್ರಿಸ್ತಯೇಸುವಿನಲ್ಲೂ ಯುಗಯುಗಾಂತರಕ್ಕೂ ತಲತಲಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ನೋಹನ ಚರಿತ್ರೆಯಿದು: ಆತ ಸತ್ಪುರುಷ, ಅವನಂಥ ನಿರ್ದೋಷಿ ಆ ಕಾಲದಲ್ಲಿ ಯಾರೂ ಇರಲಿಲ್ಲ. ದೇವರೊಡನೆ ಆತ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಿದ್ದ.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ಎಂದೇ ನಡೆವೆನು ನಾನು ಪ್ರಭುವಿನ ಕಣ್ಮುಂದೆ I ಅಂತೆಯೇ ಬಾಳುವೆ ಜೀವಲೋಕದೊಳಿದ್ದೇ II


ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”


“ಸರ್ವೇಶ್ವರಾ, ನಿಮಗೆ ಶ್ರದ್ಧೆಯಿಂದಲೂ, ಪ್ರಾಮಾಣಿಕತೆಯಿಂದಲೂ ಸೇವೆಮಾಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಂಡಿದ್ದೇನೆ. ಇದನ್ನು ದಯೆಯಿಂದ ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥನೆ ಮಾಡಿದನು.


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ಸರ್ವೇಶ್ವರನಿಗೆ ಅಸಾಧ್ಯವಾದುದು ಯಾವುದು? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುತ್ತಾನೆ” ಎಂದು ಹೇಳಿದರು.


ನೀವು ನಿಮ್ಮ ದೇವರಾದ ಸರ್ವೇಶ್ವರನ ಸೇವೆಯ ವಿಷಯದಲ್ಲಿ ಸದಾಚಾರವುಳ್ಳವರು ಆಗಿರಬೇಕು.


ಯೇಸು ಅವರನ್ನು ನಿಟ್ಟಿಸಿ ನೋಡುತ್ತಾ, “ಮನುಷ್ಯರಿಗಿದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದರು.


“ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


“ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಲಿ; ನಿನಗೆ ಬಹಳ ಸಂತತಿಯನ್ನು ಕೊಡಲಿ; ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ;


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


ಸೊಲೊಮೋನನು, “ನಿಮಗೆ ಪ್ರಾಮಾಣಿಕನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನೀವು ಮಹಾಕೃಪೆಯನ್ನು ತೋರಿಸಿದಿರಿ; ಆ ಕೃಪೆಯನ್ನು ಮುಂದುವರಿಸುತ್ತಾ ಈಗ ಅವರ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿ ಅದನ್ನು ಸಂಪೂರ್ಣಗೊಳಿಸಿದ್ದೀರಿ.


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ಇದಲ್ಲದೆ ಅವನಿಗೆ ದೇವರು, “ನಾನೇ ಸರ್ವವಲ್ಲಭನಾದ ದೇವರು; ನೀನು ವೃದ್ಧಿಯಾಗಿ ಬಹುಸಂತಾನವುಳ್ಳವನಾಗು. ನಿನ್ನಿಂದ ರಾಷ್ಟ್ರವೊಂದು ಉಂಟಾಗುವುದು, ಅನೇಕ ರಾಷ್ಟ್ರಗಳೂ ರಾಜರುಗಳೂ ನಿನ್ನಿಂದ ಹುಟ್ಟುವರು.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಆದ್ದರಿಂದ ಯಾರಿಂದಲೂ ಕದಲಿಸಲಾಗದ ಸಾಮ್ರಾಜ್ಯವನ್ನು ಪಡೆದಿರುವ ನಾವು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸೋಣ. ಅವರಿಗೆ ಚಿರಋಣಿಗಳಾಗಿದ್ದು, ಭಯಭಕ್ತಿಯಿಂದ ಸಮರ್ಪಕ ಆರಾಧನೆಯನ್ನು ಸಲ್ಲಿಸೋಣ.


ಅಂತೆಯೇ, ದೇವರ ಹಾಗೂ ಮಾನವರ ಮುಂದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ಬಾಳಲು ಪ್ರಯತ್ನಿಸುತ್ತಿದ್ದೇನೆ.


ಜೋಸೆಫನನ್ನು ಹೀಗೆಂದು ಆಶೀರ್ವದಿಸಿದನು: “ನನ್ನ ಪಿತೃಗಳಾದ ಅಬ್ರಹಾಮ್, ಇಸಾಕರು ಯಾವ ದೇವರ ಸಮ್ಮುಖದಲ್ಲಿ ನಡೆದುಕೊಂಡರೋ ಆ ದೇವರು, ಚಿಕ್ಕಂದಿನಿಂದ ಇಂದಿನವರೆಗೆ ನನ್ನನ್ನು ಪರಿಪಾಲಿಸಿಕೊಂಡು ಬಂದ ಆ ದೇವರು,


ಸರ್ವೇಶ್ವರ‍ಸ್ವಾಮಿ ಅಬ್ರಾಮನಿಗೆ ಹೀಗೆಂದರು - “ನೀನು ನಿನ್ನ ಸ್ವಂತ ನಾಡನ್ನೂ ಬಂಧುಬಳಗದವರನ್ನೂ ತವರು ಮನೆಯನ್ನೂ ಬಿಟ್ಟು ನಾನು ತೋರಿಸುವ ನಾಡಿಗೆ ಹೊರಟುಹೋಗು.


ಹನೋಕ ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇದ್ದಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾದನು.


ಪೌಲನು ಆ ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ಬಂಧುಭಾಂದವರೇ, ಈ ದಿನದವರೆಗೂ ನಾನು ದೇವರ ಸಮ್ಮುಖದಲ್ಲಿ ನನ್ನ ಮನಸ್ಸಾಕ್ಷಿಯ ಪ್ರಕಾರ ಬಾಳಿದ್ದೇನೆ,” ಎಂದನು.


ಪರದಲ್ಲಿಹನು ನಮ್ಮ ದೇವನು I ಗೈವನು ತನಗಿಷ್ಟ ಬಂದುದನು II


ನೀನು ಕಂಡುಕೊಳ್ಳಬಲ್ಲೆಯಾ ದೇವರ ಅಂತರಾಳವನ್ನು? ಗ್ರಹಿಸಿಕೊಳ್ಳಬಲ್ಲೆಯಾ ಸರ್ವಶಕ್ತನ ಇತಿಮಿತಿಯನ್ನು?


ಇದಲ್ಲದೆ ಸರ್ವೇಶ್ವರ, ‘ನಿನ್ನ ಸಂತಾನದವರು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಂಬಿಗಸ್ತರಾಗಿ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿದ್ದರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು,’ ಎಂದು ನನಗೆ ಮಾಡಿದ ವಾಗ್ದಾನವನ್ನು ಅವರು ಸ್ಥಿರಪಡಿಸುವರು.


ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು, ಸರ್ವೇಶ್ವರಾಧಿ ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ, ಲಂಚ ತೆಗೆದುಕೊಳ್ಳುವವರಲ್ಲ.


ಸರ್ವೇಶ್ವರ ಅವನಿಗೆ, “ಸರ್ವೇಶ್ವರನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನೇ ನೋಡುವೆ” ಎಂದರು.


“ನಾನು ಸರ್ವೇಶ್ವರ, ಅಬ್ರಹಾಮ, ಇಸಾಕ ಹಾಗು ಯಕೋಬರಿಗೆ ನಾನು ‘ಸರ್ವಶಕ್ತನಾದ ದೇವರು ಎಂಬ ಹೆಸರುಳ್ಳವನಾಗಿ ಕಾಣಿಸಿಕೊಂಡನೇ ಹೊರತು ‘ಸರ್ವೇಶ್ವರ’ ಎಂಬ ನನ್ನ ಹೆಸರಿನಿಂದ ಅವರಿಗೆ ಗೋಚರವಾಗಲಿಲ್ಲ.


ಒಂದು ದಿನ ಅಬ್ರಹಾಮನು ಉರಿಬಿಸಿಲ ವೇಳೆಯಲ್ಲಿ ಮಮ್ರೋತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿದ್ದನು. ಆಗ ಅವನಿಗೆ ಸರ್ವೇಶ್ವರ ಸ್ವಾಮಿಯ ದರ್ಶನವಾಯಿತು.


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ಇಸ್ರಯೇಲ್ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ, ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವುದು ತಪ್ಪದು; ಎಂಬುದಾಗಿ ವಾಗ್ದಾನಮಾಡಿದ್ದೀರಿ; ಅದನ್ನು ನೆರವೇರಿಸಿರಿ.


ಆಗ ಅಬ್ರಾಮನಿಗೆ ಎಂಬತ್ತಾರು ವರ್ಷವಾಗಿತ್ತು.


ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರಲ್ಲಿ ಅನ್ಯೋನ್ಯತೆಯಿಂದ 300 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.


ಅದಕ್ಕೆ ಅವರು, ‘ಯಾವ ಸರ್ವೇಶ್ವರ ಸ್ವಾಮಿಗೆ ನಾನು ವಿಧೇಯನಾಗಿ ನಡೆದುಕೊಂಡೆನೋ ಅವರು ತಮ್ಮ ದೂತನನ್ನು ನಿನ್ನೊಂದಿಗೆ ಕಳುಹಿಸುವರು. ನನ್ನ ತಂದೆಯ ಮನೆತನಕ್ಕೆ ಸೇರಿದ ಬಂಧುಬಳಗದವರಿಂದಲೇ ನನ್ನ ಮಗನಿಗೆ ಹೆಣ್ಣು ತರಲು ನಿನಗೆ ಅನುಕೂಲ ಮಾಡಿಕೊಡುವರು.


ಅಲ್ಲಿ ಸರ್ವೇಶ್ವರ ಸ್ವಾಮಿ ಇಸಾಕನಿಗೆ ದರ್ಶನ ಕೊಟ್ಟು ಇಂತೆಂದರು: “ನೀನು ಈಜಿಪ್ಟಿಗೆ ಹೋಗಬೇಡ;


ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಬಿಡುವಂತೆ ಸರ್ವವಲ್ಲಭರಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಬೇಕಾದರೆ ಹಾಗೆಯೇ ಆಗಲಿ!” ಎಂದನು.


ಆಗ ದೇವರು, “ನಾನೇ ದೇವರು, ನಿನ್ನ ತಂದೆ ಆರಾಧಿಸಿದ ದೇವರು, ನೀನು ಈಜಿಪ್ಟ್ ದೇಶಕ್ಕೆ ಹೋಗಲು ಅಂಜಬೇಡ; ಅಲ್ಲಿ ನಿನ್ನಿಂದ ಮಹಾಜನಾಂಗ ಉತ್ಪನ್ನವಾಗುವಂತೆ ಮಾಡುವೆನು;


ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.”


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ಅವನು ಜೋಸೆಫನಿಗೆ, “ಸರ್ವವಲ್ಲಭರಾದ ದೇವರು ಕಾನಾನ್ ನಾಡಿನ ಲೂಜಿನಲ್ಲಿ ನನಗೆ ದರ್ಶನಕೊಟ್ಟು, ಆಶೀರ್ವದಿಸಿ -


ಮನೋದೃಷ್ಟಿಯಿಂದ ನೋಡುವ ಪುರುಷನ ವಾಣಿ ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರಾತ್ಪರನ ಜ್ಞಾನವನ್ನು ಪಡೆದವನ ವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದವನ ಭವಿಷ್ಯವಾಣಿ:


ನಿರ್ದೋಷಿ ನಡೆಯುವನು ನಿರ್ಭಯನಾಗಿ; ವಕ್ರಮಾರ್ಗಿ ಸಿಕ್ಕಿಬಿಡುವನು ಬಟ್ಟಬಯಲಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು