Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:10 - ಕನ್ನಡ ಸತ್ಯವೇದವು C.L. Bible (BSI)

10 ನೀನೂ ನಿನ್ನ ಸಂತತಿಯವರೂ ಕೈಗೊಳ್ಳಬೇಕಾದ ನನ್ನ ಒಡಂಬಡಿಕೆ ಇದು: ನಿಮ್ಮಲ್ಲಿ ಪ್ರತಿಯೊಬ್ಬ ಗಂಡಸಿಗೂ ಸುನ್ನತಿಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನೂ ನಿನ್ನ ಸಂತತಿಯುವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ, ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನೂ ನಿನ್ನ ಹಿಂದೆ ಬರುವ ಸಂತತಿಯವರೂ ಕೈಕೊಳ್ಳಬೇಕಾದ ನನ್ನ ನಿಬಂಧನೆಯು ಯಾವದಂದರೆ - ನಿಮ್ಮಲ್ಲಿ ಪ್ರತಿಯೊಬ್ಬ ಗಂಡಸಿಗೂ ಸುನ್ನತಿಯಾಗಬೇಕೆಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನೂ ಮತ್ತು ನಿನ್ನ ಎಲ್ಲಾ ಸಂತತಿಯವರು ಕೈಕೊಳ್ಳಬೇಕಾದ ನಿಬಂಧನೆಯೇನೆಂದರೆ, ನಿಮ್ಮಲ್ಲಿ ಹುಟ್ಟಿದ ಪ್ರತಿಯೊಂದು ಗಂಡುಮಗುವಿಗೂ ಸುನ್ನತಿ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀನೂ, ನಿನ್ನ ತರುವಾಯ ನಿನ್ನ ಸಂತತಿಯವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ: ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:10
29 ತಿಳಿವುಗಳ ಹೋಲಿಕೆ  

ಆಮೇಲೆ ದೇವರು ಅಬ್ರಹಾಮನೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಆ ಒಡಂಬಡಿಕೆಯ ಚಿಹ್ನೆಯನ್ನಾಗಿ ಸುನ್ನತಿಯನ್ನು ವಿಧಿಸಿದರು.ಅದರಂತೆ ಅಬ್ರಹಾಮನು ತನ್ನ ಮಗ ಇಸಾಕನಿಗೆ ಹುಟ್ಟಿದ ಎಂಟನೆಯ ದಿನ ಸುನ್ನತಿಯನ್ನು ಮಾಡಿದನು. ಇಸಾಕನು ತನ್ನ ಮಗ ಯಕೋಬನಿಗೂ, ಯಕೋಬನು ತನ್ನ ಹನ್ನೆರಡು ಮಕ್ಕಳಾದ ನಮ್ಮ ಪಿತಾಮಹರಿಗೂ ಹಾಗೆಯೇ ಮಾಡಿದನು.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ಯೆಹೂದ್ಯರನ್ನು ಅವರ ವಿಶ್ವಾಸದ ಆಧಾರದ ಮೇಲೂ ಇತರರನ್ನು ಅವರ ವಿಶ್ವಾಸದ ಮೂಲಕವೂ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವ ದೇವರು ಒಬ್ಬರೇ.


ಆಗ ಸರ್ವೇಶ್ವರ ಯೆಹೋಶುವನಿಗೆ, “ನೀನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಇಸ್ರಯೇಲರಿಗೆ ಸುನ್ನತಿ ಮಾಡು,” ಎಂದು ಹೇಳಿದರು.


ನೀವು ನಿಮ್ಮ ಜನನಾಂಗದ ಮುಂದೊಗಲನ್ನು ಸುನ್ನತಿಮಾಡಿಸಿಕೊಳ್ಳಬೇಕು. ಅದೇ ನಿಮಗೂ ನನಗೂ ಆದ ಒಡಂಬಡಿಕೆಯ ಗುರುತು.


ಹಿಂದೊಮ್ಮೆ ನೀವು ಅನ್ಯಜನರಾಗಿದ್ದಿರಿ ಎಂಬುದು ನಿಮ್ಮ ನೆನಪಿನಲ್ಲಿರಲಿ; ಆಗ ಶಾರೀರಿಕ ಸುನ್ನತಿ ಪಡೆದವರು ನಿಮ್ಮನ್ನು ‘ಸುನ್ನತಿಯಿಲ್ಲದವರು’ ಎಂದು ತುಚ್ಛೀಕರಿಸಿ ಕರೆಯುತ್ತಿದ್ದರು.


ಬಾಹ್ಯಾಚಾರಗಳಿಂದ ತಾವು ಒಳ್ಳೆಯವರು ಎನಿಸಿಕೊಳ್ಳಬೇಕೆನ್ನುವವರು ನೀವು ಸುನ್ನತಿಮಾಡಿಸಿಕೊಳ್ಳಬೇಕೆಂದು ಬಲಾತ್ಕಾರ ಮಾಡುತ್ತಿದ್ದಾರೆ. ಕ್ರಿಸ್ತಯೇಸುವಿನ ಶಿಲುಬೆಯ ನಿಮಿತ್ತ ತಮಗೆ ಹಿಂಸೆಬಾಧೆಗಳು ಉಂಟಾಗಬಾರದು ಎಂಬುದೇ ಅವರ ಉದ್ದೇಶವಾಗಿದೆ.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮತ್ತು ನಿಮ್ಮ ಸಂತತಿಯವರ ಅಂತರಂಗಕ್ಕೇ ಸುನ್ನತಿ ಮಾಡುವರು. ಆಗ ನೀವು ಅವರನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಬಾಳುವಿರಿ.


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ಮಾನವನಿಗೆ ದೇವರೊಡನೆ ಸತ್ಸಂಬಂಧ ದೊರಕುವುದು ಧರ್ಮಶಾಸ್ತ್ರಗಳ ನೇಮನಿಯಮಗಳನ್ನು ಪಾಲಿಸುವುದರಿಂದ ಅಲ್ಲ, ವಿಶ್ವಾಸದಿಂದಲೇ ಎಂಬುದು ನಮ್ಮ ಸಿದ್ಧಾಂತ.


ಪೂರ್ವಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ವಿಶ್ವಾಸವುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತರು ರಕ್ತಧಾರೆ ಎರೆಯುವಂತೆ ಮಾಡಿದರು. ತಾವು ನೀತಿಸ್ವರೂಪರೆಂದು ತೋರಿಸುವುದಕ್ಕಾಗಿ ಹೀಗೆ ಮಾಡಿದರು.


ಬಾಹ್ಯಾಚರಣೆಯಲ್ಲಿ ಮಾತ್ರ ಯೆಹೂದ್ಯನಾಗಿರುವವನು ನಿಜವಾದ ಯೆಹೂದ್ಯನಲ್ಲ. ಅಂತೆಯೇ, ನಿಜವಾದ ಸುನ್ನತಿಯು ಕೇವಲ ಬಾಹ್ಯಲಕ್ಷಣವುಳ್ಳ ಶಾರೀರಿಕ ಪದ್ಧತಿಯಲ್ಲ.


ಸುನ್ನತಿಯನ್ನು ಆಚರಿಸಬೇಕೆಂದು ನಿಯಮಿಸಿದವನು ಮೋಶೆ. (ವಾಸ್ತವವಾಗಿ ಅದು ಮೋಶೆಯ ಕಾಲದಿಂದಲ್ಲ, ಪೂರ್ವಜರ ಕಾಲದಿಂದಲೂ ರೂಢಿಯಲ್ಲಿತ್ತು). ಸಬ್ಬತ್ ದಿನದಲ್ಲಿಯೂ ನೀವು ಸುನ್ನತಿಯನ್ನು ಮಾಡುವುದುಂಟು.


ಜುದೇಯದವರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನಾದ ನನಗಾಗಿ ಸುನ್ನತಿಯಾಗಿರಿ. ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲವಾದರೆ ನಿಮ್ಮ ಪಾಪಾಕ್ರಮಗಳ ನಿಮಿತ್ತ ನನ್ನ ಕೋಪಾಗ್ನಿಯು ಭುಗಿಲೆದ್ದು ಆರಿಸಲಾಗದಷ್ಟು ಧಗಧಗಿಸುವುದು.”


ಹೀಗೆ ಯೆಹೋಶುವನು ಸುನ್ನತಿ ಮಾಡುವುದಕ್ಕೆ ಕಾರಣ ಏನೆಂದರೆ - ಈಜಿಪ್ಟಿನಿಂದ ಹೊರಟುಬಂದ ಗಂಡಸರಲ್ಲಿ ಯುದ್ಧವೀರರೆಲ್ಲರು ಆ ದೇಶವನ್ನು ಬಿಟ್ಟು, ಅನಂತರ ಅರಣ್ಯದಲ್ಲಿ ಸತ್ತುಹೋದರು.


ಆದುದರಿಂದ ಅವರ ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿ.


ನಿಮ್ಮ ಬಳಿ ವಾಸವಾಗಿರುವ ವಿದೇಶೀಯನೊಬ್ಬನು ಸರ್ವೇಶ್ವರನಿಗೆ ಈ ಪಾಸ್ಕಹಬ್ಬವನ್ನು ಕೊಂಡಾಡಬೇಕೆಂಬ ಆಸೆಯಿದ್ದರೆ ಅವನೂ ಅವನ ಕುಟುಂಬಕ್ಕೆ ಸೇರಿದ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ಬಳಿಕ ಅವನು ಬಂದು ಈ ಹಬ್ಬವನ್ನು ಆಚರಿಸಬಹುದು. ಅಂಥವನು ಸ್ವದೇಶದವನಂತೆ ಆಗುತ್ತಾನೆ. ಆದರೆ ಸುನ್ನತಿ ಮಾಡಿಸಿಕೊಳ್ಳದ ಯಾವನೂ ಆ ಭೋಜನದಲ್ಲಿ ಭಾಗಿ ಆಗಕೂಡದು.


ಆಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ ಮೋಶೆಗೆ, “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗ,” ಎಂದು ಹೇಳಿ


ನಿಮ್ಮಲ್ಲಿ ಗಂಡಸರೆಲ್ಲರು ಸುನ್ನತಿಮಾಡಿಸಿಕೊಂಡು ನಮ್ಮಂತೆ ಆಗಬೇಕು.


ಅದೇ ದಿನದಂದು ಅಬ್ರಹಾಮನು ದೇವರ ಅಪ್ಪಣೆಯ ಪ್ರಕಾರ ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲ ಗಂಡಸರಿಗೂ ಮನೆಯಲ್ಲಿ ಹುಟ್ಟಿದ ಹಾಗು ತಾನು ಕ್ರಯಕ್ಕೆ ಕೊಂಡುಕೊಂಡ ಜೀತದಾರರಿಗೂ ಸುನ್ನತಿಮಾಡಿಸಿದನು.


ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ಹಾಗೂ ಅನ್ಯರಿಂದ ಕ್ರಯಕ್ಕೆ ಕೊಂಡುಕೊಂಡಿದ್ದ ಜೀತದಾರರಿಗೂ ಅವನೊಂದಿಗೆ ಸುನ್ನತಿಯಾಯಿತು.


ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಅವನಿಗೆ ಸುನ್ನತಿ ಮಾಡಿದನು.


ಆದರೆ ಅವರು ಸುನ್ನತಿಮಾಡಿಕೊಂಡವರು. ಆದ್ದರಿಂದ ನಮ್ಮಲ್ಲಿಯೂ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು ಎನ್ನುತ್ತಾರೆ. ಹಾಗೆ ಮಾಡಿಸಿಕೊಂಡರೆ ಮಾತ್ರ ಇವರು ನಮ್ಮಲ್ಲಿ ವಾಸಮಾಡುವುದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವುದಕ್ಕೂ ಒಪ್ಪುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು