Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:13 - ಕನ್ನಡ ಸತ್ಯವೇದವು C.L. Bible (BSI)

13 ಮನೆಯಲ್ಲಿ ಹುಟ್ಟಿದವನೇ ಆಗಿರಲಿ, ಕ್ರಯಕ್ಕೆ ಕೊಂಡುಕೊಂಡವನೇ ಆಗಿರಲಿ, ಪ್ರತಿ ಒಬ್ಬನಿಗೂ ತಪ್ಪದೆ ಸುನ್ನತಿಯಾಗಬೇಕು. ನಾನು ಮಾಡುವ ಒಡಂಬಡಿಕೆಯ ಗುರುತು ಹೀಗೆ ನಿಮ್ಮ ದೇಹದಲ್ಲಿ ಇದ್ದು ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ಮನೆಯಲ್ಲಿ ಹುಟ್ಟಿದವನಿಗೂ, ನೀನು ಕ್ರಯಕ್ಕೆ ತೆಗೆದುಕೊಂಡವನಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ಒಡಂಬಡಿಕೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು, ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನ ಮನೆಯಲ್ಲಿ ಹುಟ್ಟಿದವರಿಗೂ ನೀನು ಕ್ರಯಕ್ಕೆ ತೆಗೆದುಕೊಂಡವರಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ನಿಬಂಧನೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13-14 ಹೀಗೆ ಪ್ರತಿಯೊಬ್ಬನಿಗೂ ಸುನ್ನತಿಯಾಗಲೇಬೇಕು. ನಾನು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಶಾಶ್ವತವಾದದ್ದು ಎಂಬುದಕ್ಕೆ ಈ ಸುನ್ನತಿಯೇ ದೈಹಿಕ ಗುರುತಾಗಿದೆ. ಸುನ್ನತಿಯಾಗಿಲ್ಲದ ಪುರುಷನು ನನ್ನ ಒಡಂಬಡಿಕೆಗೆ ವಿಧೇಯನಾಗದ ಕಾರಣ ಅವನನ್ನು ಕುಲದಿಂದ ತೆಗೆದುಹಾಕಲ್ಪಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೀಗೆ ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ಕ್ರಯಕ್ಕೆ ತೆಗೆದುಕೊಂಡವನಿಗೂ ಸುನ್ನತಿಯಾಗಬೇಕು. ಈ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವುದನ್ನು ಸೂಚಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:13
15 ತಿಳಿವುಗಳ ಹೋಲಿಕೆ  

ನೀವು ಕ್ರಯಕ್ಕೆ ಕೊಂಡ ಜೀತಗಾರನು ಸುನ್ನತಿ ಮಾಡಿಸಿಕೊಂಡವನಾದರೆ ಅಂಥವನು ಅದರಲ್ಲಿ ಭಾಗವಹಿಸಬಹುದು.


“ನಾವು ನಮ್ಮಿಂದ ಆಗುವಷ್ಟು ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲಾದವರನ್ನು, ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎನ್ನಲು ಅವರು ಉತ್ತರಕೊಡದೆ ಸುಮ್ಮನೆ ಇದ್ದರು.


ಮಿದ್ಯಾನ್ಯರು ಜೋಸೆಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಫರೋಹನ ಆಸ್ಥಾನದಲ್ಲಿದ್ದ ಪೋಟೀಫರನಿಗೆ ಮಾರಿದರು; ಇವನು, ದೊಡ್ಡ ಉದ್ಯೋಗಸ್ಥನೂ ಮೈಗಾವಲಿನವರ ದಳಪತಿಯೂ ಆಗಿದ್ದನು.


ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ.


ಆ ನಮ್ಮ ಸಹೋದರರ ಕುಲಕ್ಕೂ ನಮ್ಮ ಕುಲಕ್ಕೂ ಅವರ ಮಕ್ಕಳಿಗೂ ನಮ್ಮ ಮಕ್ಕಳಿಗೂ ಏನು ಹೆಚ್ಚುಕಡಿಮೆ? ನೋಡಿ, ನಾವು ನಮ್ಮ ಗಂಡುಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು; ನಮ್ಮ ಹೆಣ್ಣುಮಕ್ಕಳಲ್ಲಿ ಕೆಲವರನ್ನು ಈಗಾಗಲೇ ಅಪಹರಿಸಿದ್ದಾರೆ; ನಮ್ಮ ಪ್ರಯತ್ನವೇನೂ ಸಾಗುವುದಿಲ್ಲ; ನಮ್ಮ ಹೊಲತೋಟಗಳು ಪರಾಧೀನವಾಗಿವೆ,” ಎಂದು ಎಲ್ಲಾ ಗೊಣಗಿದರು.


“ಒಬ್ಬನು ಮತ್ತೊಬ್ಬನನ್ನು ಕದ್ದೊಯ್ದು ಅವನನ್ನು ಮಾರಿದ್ದರೂ ಅಥವಾ ತನ್ನಲ್ಲೇ ಖೈದಿಯಾಗಿಟ್ಟುಕೊಂಡಿದ್ದರೂ ಅಂಥವನಿಗೆ ಮರಣ ದಂಡನೆಯಾಗಬೇಕು.”


ಅವನ ಯಜಮಾನ ಅವನಿಗೆ ಮದುವೆ ಮಾಡಿಸಿ ಆ ಹೆಂಡತಿಗೆ ಗಂಡು ಇಲ್ಲವೆ ಹೆಣ್ಣು ಮಕ್ಕಳಾಗಿದ್ದರೆ ಆ ಹೆಂಡತಿ ಹಾಗು ಅವಳ ಮಕ್ಕಳು ಯಜಮಾನನ ಸೊತ್ತಾಗುವರು. ಆ ಗುಲಾಮನು ಒಂಟಿಯಾಗಿಯೇ ಹೊರಟು ಹೋಗಲಿ.


ನಿಮ್ಮಲ್ಲಿ ಯಾವನಾದರು ಒಬ್ಬ ಇಬ್ರಿಯನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ ಆ ಇಬ್ರಿಯನು ಆರು ವರ್ಷ ಗುಲಾಮನಾಗಿ ದುಡಿದು ಏಳನೆಯ ವರ್ಷ ‘ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.


ಅತ್ತ ಜೋಸೆಫನನ್ನು ತೆಗೆದುಕೊಂಡುಹೋದ ಇಷ್ಮಾಯೇಲ್ಯರು ಈಜಿಪ್ಟ್ ದೇಶವನ್ನು ಸೇರಿದಾಗ ಅವನನ್ನು ಈಜಿಪ್ಟಿನ ಪೋಟೀಫರ್ ಎಂಬವನಿಗೆ ಮಾರಿಬಿಟ್ಟರು. ಪೋಟೀಫರನು ಫರೋಹನ ಆಸ್ಥಾನದ ಒಬ್ಬ ಉದ್ಯೋಗಿ ಮತ್ತು ಅಂಗರಕ್ಷಕರ ದಳಪತಿ.


ಅವನನ್ನು ಆ ಇಷ್ಮಾಯೇಲರಿಗೆ ಮಾರಿಬಿಡೋಣ, ಬನ್ನಿ; ನಾವು ಅವನ ಮೇಲೆ ಕೈ ಹಾಕಬಾರದು, ಅವನು ನಮ್ಮ ತಮ್ಮನಲ್ಲವೆ? ರಕ್ತಸಂಬಂಧಿಯಲ್ಲವೆ?” ಎಂದು ಹೇಳಿದ. ಅವನ ಆ ಮಾತಿಗೆ ಅಣ್ಣತಮ್ಮಂದಿರು ಒಪ್ಪಿದರು.


ನೀವು ನನಗೆ ಮಕ್ಕಳನ್ನು ಕೊಟ್ಟಿಲ್ಲ. ನನ್ನ ಮನೆದಾಸನೇ ನನಗೆ ಉತ್ತರಾಧಿಕಾರಿ,” ಎಂದನು.


ಅಬ್ರಾಮನು ತನ್ನ ತಮ್ಮನ ಮಗ ಸೆರೆಗೆ ಸಿಕ್ಕಿರುವುದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದು ಸುಶಿಕ್ಷಿತರಾದ 318 ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟನು. ಈ ನಾಲ್ಕು ಮಂದಿ ರಾಜರನ್ನು ದಾನೂರಿನವರೆಗೆ ಹಿಂದಟ್ಟಿದನು.


ಆ ಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲ ಜೀವಜಂತುಗಳಿಗೂ ಆದ ಶಾಶ್ವತ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುತ್ತೇನೆ,”


ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ಆದರೆ ಯಾಜಕನು ಕೊಂಡುಕೊಂಡ ಗುಲಾಮರು, ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು