Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:23 - ಕನ್ನಡ ಸತ್ಯವೇದವು C.L. Bible (BSI)

23 ಅದೇ ದಿನದಂದು ಅಬ್ರಹಾಮನು ದೇವರ ಅಪ್ಪಣೆಯ ಪ್ರಕಾರ ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲ ಗಂಡಸರಿಗೂ ಮನೆಯಲ್ಲಿ ಹುಟ್ಟಿದ ಹಾಗು ತಾನು ಕ್ರಯಕ್ಕೆ ಕೊಂಡುಕೊಂಡ ಜೀತದಾರರಿಗೂ ಸುನ್ನತಿಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅದೇ ದಿನದಲ್ಲಿ ಅಬ್ರಹಾಮನು ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಸೇವಕರಿಗೆ ಹುಟ್ಟಿದ ಗಂಡುಮಕ್ಕಳಿಗೂ ಪರದೇಶಿಯರಿಂದ ಕೊಂಡುತಂದಿದ್ದ ಸೇವಕರಿಗೂ ದೇವರು ಹೇಳಿದಂತೆಯೇ ಸುನ್ನತಿ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅಬ್ರಹಾಮನು ತನ್ನ ಮಗ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರಿಗೂ ತಾನು ಕ್ರಯಕ್ಕೆ ತೆಗೆದುಕೊಂಡವರೆಲ್ಲರಿಗೂ ಹೀಗೆ ತನ್ನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ದೇವರು ತನಗೆ ಹೇಳಿದ ಹಾಗೆ, ಆ ದಿನವೇ ಸುನ್ನತಿ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:23
16 ತಿಳಿವುಗಳ ಹೋಲಿಕೆ  

ನಾಳೆ ಕುರಿತು ಕೊಚ್ಚಿಕೊಳ್ಳಬೇಡ; ಇಂದು ಒದಗಲಿರುವುದೇ ನಿನಗೆ ತಿಳಿದಿಲ್ಲ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ನಿನ್ನ ಆಜ್ಞೆಯನು ನಾನು ಅನುಸರಿಸುವಲ್ಲಿ I ಆಲಸಿಯಲ್ಲ, ಆಸಕ್ತ ನಾನು ಅದರಲ್ಲಿ II


ಹಮೋರನ ಮತ್ತು ಅವನ ಮಗ ಶೆಕೆಮನ ಈ ಮಾತಿಗೆ ಊರಿನವರೆಲ್ಲರು ಸಮ್ಮತಿಸಿದರು. ಅಂತೆಯೇ ಅವರಲ್ಲಿದ್ದ ಗಂಡಸರೆಲ್ಲರು ಸುನ್ನತಿಮಾಡಿಸಿಕೊಂಡರು.


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ಸುನ್ನತಿ ಮಾಡಿಸಿಕೊಳ್ಳುವುದೋ, ಮಾಡಿಸಿಕೊಳ್ಳದಿರುವುದೋ ಮಹತ್ತಾದುದಲ್ಲ. ಹೊಸ ಸೃಷ್ಟಿಯಾಗುವುದೇ ಮಹತ್ತರವಾದುದು.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಪೌಲನು ತಿಮೊಥೇಯನನ್ನು ತನ್ನೊಡನೆ ಕರೆದುಕೊಂಡು ಹೋಗಲು ಅಪೇಕ್ಷಿಸಿದನು. ಆ ಪ್ರದೇಶಗಳಲ್ಲಿದ್ದ ಯೆಹೂದ್ಯರಿಗೆ ತಿಮೊಥೇಯನ ತಂದೆ ಗ್ರೀಕನೆಂದು ತಿಳಿದಿದ್ದುದರಿಂದ ಅವನಿಗೆ ಸುನ್ನತಿಮಾಡಿಸಿದನು.


ಅಬ್ರಾಮನು ತನ್ನ ತಮ್ಮನ ಮಗ ಸೆರೆಗೆ ಸಿಕ್ಕಿರುವುದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದು ಸುಶಿಕ್ಷಿತರಾದ 318 ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟನು. ಈ ನಾಲ್ಕು ಮಂದಿ ರಾಜರನ್ನು ದಾನೂರಿನವರೆಗೆ ಹಿಂದಟ್ಟಿದನು.


ಇದಲ್ಲದೆ ದೇವರು ಅಬ್ರಹಾಮನಿಗೆ ಹೀಗೆಂದು ಹೇಳಿದರು: “ನೀನು ಕೂಡ ನನ್ನ ಒಡಂಬಡಿಕೆಯನ್ನು ಕೈಗೊಂಡು ನಡೆಯಬೇಕು ನೀನು ಮಾತ್ರವಲ್ಲ, ನಿನ್ನ ಸಂತತಿಯವರು ತಲತಲಾಂತರಕ್ಕೂ ಅದನ್ನು ಕೈಗೊಂಡು ನಡೆಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು