Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:15 - ಕನ್ನಡ ಸತ್ಯವೇದವು C.L. Bible (BSI)

15 ಆಗ ಸಾರಳು ಭಯದಿಂದ, “ನಾನು ನಗಲಿಲ್ಲ” ಎಂದು ನಿರಾಕರಿಸಿದಳು. ಸರ್ವೇಶ್ವರ, "ಹಾಗನ್ನಬೇಡಮ್ಮಾ, 'ನೀನು ನಕ್ಕದ್ದು ನಿಜ' ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಎಂದು ಸುಳ್ಳಾಡಿದಾಗ, ಆತನು ಅದಕ್ಕೆ, “ಹಾಗಲ್ಲ, ನೀನು ನಕ್ಕಿದ್ದುಂಟು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಸಾರಳು ಭಯಪಟ್ಟು - ನಾನು ನಗಲಿಲ್ಲ ಎಂದು ಬೊಂಕಲು ಆತನು- ಹಾಗನ್ನಬೇಡಮ್ಮಾ, ನೀನು ನಕ್ಕದ್ದುಂಟು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಅಂದಳು. ಅದಕ್ಕೆ ಯೆಹೋವನು, “ಇಲ್ಲ, ನೀನು ನಕ್ಕಿದ್ದು ನಿಜ!” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಸಾರಳು ಭಯಪಟ್ಟು, “ನಾನು ನಗಲಿಲ್ಲ,” ಎಂದು ಹೇಳಿ ಸುಳ್ಳಾಡಿದಾಗ, ದೇವರು, “ನೀನು ನಕ್ಕದ್ದು ನಿಜ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:15
17 ತಿಳಿವುಗಳ ಹೋಲಿಕೆ  

ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿಕೊಂಡರೆ, ನಮ್ಮನ್ನು ನಾವೇ ವಂಚಿಸಿಕೊಳ್ಳುತ್ತೇವೆ ಮತ್ತು ಸತ್ಯವೆಂಬುದೇ ನಮ್ಮಲ್ಲಿ ಇರುವುದಿಲ್ಲ.


ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ನಿಮ್ಮ ಹೃನ್ಮನಗಳು ನವೀಕೃತವಾಗಲಿ.


ದೇವಾ, ನಿನಗದು ಬಯಲಾಗದಿರುತ್ತಿತ್ತೆ? I ನಮ್ಮೆದೆ ಗುಟ್ಟು ನಿನಗೆ ತಿಳಿಯದಿರುತ್ತಿತ್ತೆ? II


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ಆ ದ್ವಾರಪಾಲಕಿಯು ಪೇತ್ರನನ್ನು ನೋಡಿ, “ನೀನೂ ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೆ?” ಎಂದು ಕೇಳಿದಳು. ಅದಕ್ಕೆ ಪೇತ್ರನು, “ಇಲ್ಲ, ನಾನಲ್ಲ,” ಎಂದುಬಿಟ್ಟನು.


ಜನರನ್ನು ಕುರಿತು ಯಾರೂ ಅವರಿಗೆ ತಿಳಿಸಬೇಕಾದ ಪ್ರಮೇಯವಿರಲಿಲ್ಲ. ಮಾನವನ ಅಂತರಂಗ ಅವರಿಗೆ ಬಹಿರಂಗವಾಗಿತ್ತು.


ಅವರು ಹೀಗೆ ಯೋಚಿಸುತ್ತಿರುವುದನ್ನು ಯೇಸು ತಕ್ಷಣ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುತ್ತಿರುವುದು ಏಕೆ?


ಸತ್ಯವಾದಿಯ ಮಾತು ಶಾಶ್ವತ; ಮಿಥ್ಯವಾದಿಯ ಮಾತು ಕ್ಷಣಿಕ.


ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.


ಆದಕಾರಣ ನೀನು ನನಗೆ ತಂಗಿಯೆಂದೇ ಅವರಿಗೆ ಹೇಳು. ಆಗ ನಿನ್ನ ನಿಮಿತ್ತ ನನಗೆ ಸತ್ಕಾರ ದೊರಕುವುದು; ನಿನ್ನ ದೆಸೆಯಿಂದ ನನ್ನ ಪ್ರಾಣ ಉಳಿಯುವುದು,” ಎಂದು ತಿಳಿಸಿದನು.


“ನಿನ್ನ ತಮ್ಮನೆಲ್ಲಿ?" ಎಂದು ಸರ್ವೇಶ್ವರ ಕೇಳಿದಾಗ “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ” ಎಂದು ಕಾಯಿನನು ಉತ್ತರ ಕೊಟ್ಟನು.


ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ, ನಿಮ್ಮಲ್ಲಿದ್ದ ಹಳೆಯ ಸ್ವಭಾವವನ್ನೂ ಅದಕ್ಕೆ ಸಂಬಂಧಿಸಿದ ದುರಭ್ಯಾಸಗಳನ್ನೂ ತೊರೆದುಬಿಟ್ಟಿದ್ದೀರಿ.


ಸರ್ವೇಶ್ವರನಿಗೆ ಅಸಾಧ್ಯವಾದುದು ಯಾವುದು? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುತ್ತಾನೆ” ಎಂದು ಹೇಳಿದರು.


ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮ್ ಕಾಣಿಸುತ್ತಿದ್ದ ಒಂದು ಸ್ಥಳಕ್ಕೆ ಬಂದರು. ಅವರನ್ನು ಸಾಗಕಳುಹಿಸುತ್ತಾ ಅಬ್ರಹಾಮನೂ ಅವರ ಜೊತೆಯಲ್ಲೇ ಅಲ್ಲಿಗೆ ಬಂದನು.


ಎಣಿಕೆಯಾಗಿಹೆವು ಕೊಯ್ಗುರಿಗಳಂತೆ ನಾವೆಲ್ಲ I ಬಲಿಯಾಗುತಿಹೆವು ನಿನ್ನ ನಿಮಿತ್ತವೆ ದಿನವೆಲ್ಲ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು