ಆದಿಕಾಂಡ 18:19 - ಕನ್ನಡ ಸತ್ಯವೇದವು C.L. Bible (BSI)19 ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ". ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು. ಅಧ್ಯಾಯವನ್ನು ನೋಡಿ |
ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;