Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:19 - ಕನ್ನಡ ಸತ್ಯವೇದವು C.L. Bible (BSI)

19 ನಿಮ್ಮ ದಾಸನ ಮೇಲೆ ಮರುಕವಿಟ್ಟು, ಪ್ರಾಣ ಉಳಿಸಿದ್ದೇನೋ ಮಹಾ ಉಪಕಾರ ಆಯಿತು; ಆದರೆ ಗುಡ್ಡಗಾಡಿಗೆ ಓಡಿಹೋಗಲು ನನ್ನಿಂದಾಗದು, ಅಲ್ಲಿಗೆ ಸೇರುವುದಕ್ಕೆ ಮುಂಚೆಯೇ ಈ ವಿಪತ್ತಿಗೆ ಸಿಕ್ಕಿ ಸತ್ತೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀನು ನಿನ್ನ ದಾಸನ ಮೇಲೆ ದಯವಿಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿಹೋಗಲಾರೆನು: ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಿಮ್ಮ ಸೇವಕನಾದ ನನಗೆ ಮಹಾಕರುಣೆಯನ್ನು ತೋರಿ ನನ್ನನ್ನು ಕಾಪಾಡಿದ್ದೀರಿ. ಆದರೆ ನಾನು ಬೆಟ್ಟಗಳವರೆಗೂ ಓಡಿಹೋಗಲಾರೆ. ನಾನು ನಿಧಾನವಾಗಿ ಹೋಗುವುದಾದರೆ ಕೇಡು ಸಂಭವಿಸಿ ಕೊಲ್ಲಲ್ಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ದಯೆ ದೊಡ್ಡದು. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಓಡಿಹೋಗಲಾರೆನು, ನನಗೆ ವಿಪತ್ತು ಉಂಟಾಗಿ ಸತ್ತೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:19
20 ತಿಳಿವುಗಳ ಹೋಲಿಕೆ  

ಆಗ ಅವರಿಗೆ, ‘ಈ ನಾಡಿನವರು ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಬರಮಾಡಿದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಸರ್ವೇಶ್ವರ ಈ ಎಲ್ಲಾ ಆಪತ್ತು-ವಿಪತ್ತುಗಳನ್ನು ಬರಮಾಡಿದ್ದಾರೆ’ ಎಂಬ ಉತ್ತರಸಿಕ್ಕುವುದು,” ಎಂದರು.


ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.


ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು.


ಆದಕಾರಣ ನೀನು ನನಗೆ ತಂಗಿಯೆಂದೇ ಅವರಿಗೆ ಹೇಳು. ಆಗ ನಿನ್ನ ನಿಮಿತ್ತ ನನಗೆ ಸತ್ಕಾರ ದೊರಕುವುದು; ನಿನ್ನ ದೆಸೆಯಿಂದ ನನ್ನ ಪ್ರಾಣ ಉಳಿಯುವುದು,” ಎಂದು ತಿಳಿಸಿದನು.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಇದನ್ನು ಕೇಳಿ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟು ಕಾಲ ನಿಮ್ಮೊಂದಿಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ಸರ್ವೇಶ್ವರ ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು.


ಆದರೆ ನೋಹನ ವಿಷಯದಲ್ಲಿ ಸರ್ವೇಶ್ವರ ಸ್ವಾಮಿಗೆ ಮೆಚ್ಚುಗೆಯಿತ್ತು.


ಅದಕ್ಕೆ ಲೋಟನು, “ಸ್ವಾಮೀ ಅದು ನನ್ನಿಂದಾಗದು;


ಆದುದರಿಂದ ಅಗೋ, ಅಲ್ಲಿ ಊರೊಂದು ಕಾಣಿಸುತ್ತಿದೆ; ಅದು ಅಷ್ಟೇನು ದೂರವಲ್ಲ, ಚಿಕ್ಕ ಊರು, ಹೌದಲ್ಲವೆ? ಅಲ್ಲಿಗಾದರೂ ಹೋಗಲು ಅಪ್ಪಣೆಯಾದರೆ ಪ್ರಾಣ ಉಳಿಯುತ್ತದೆ,” ಎಂದನು.


ಲೋಟನು ಚೋಗರಿನಲ್ಲಿ ಮನೆ ಮಾಡುವುದಕ್ಕೆ ಅಂಜಿದನು. ಈ ಕಾರಣ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕರೆದುಕೊಂಡು ಗುಡ್ಡಗಾಡನ್ನು ಹತ್ತಿ ಅಲ್ಲಿದ್ದ ಒಂದು ಗವಿಯಲ್ಲಿ ವಾಸಮಾಡಿದನು.


ಜೋಸೆಫ್ ಅವನ ಕೃಪೆಗೆ ಪಾತ್ರನಾದ. ದಣಿ ಅವನನ್ನು ತನ್ನ ಆಪ್ತಸೇವಕನನ್ನಾಗಿ ನೇಮಿಸಿಕೊಂಡ. ಅದು ಮಾತ್ರವಲ್ಲ, ತನ್ನ ಮನೆಯಲ್ಲೇ ಮೇಲ್ವಿಚಾರಕನನ್ನಾಗಿ ಮಾಡಿ, ತನ್ನ ಆಸ್ತಿಪಾಸ್ತಿಯನ್ನೆಲ್ಲ ಅವನ ವಶಕ್ಕೆ ಒಪ್ಪಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು