Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:21 - ಕನ್ನಡ ಸತ್ಯವೇದವು C.L. Bible (BSI)

21 ಅದಕ್ಕಾತನು, “ಸರಿ, ಹಾಗೆಯೇ ಆಗಲಿ, ಈ ನಿನ್ನ ಕೋರಿಕೆಯನ್ನೂ ನೆರವೇರಿಸುತ್ತೇನೆ, ನೀನು ಹೇಳಿದ ಆ ಊರನ್ನು ಹಾಳುಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಕ್ಕಾತನು, “ಈ ವಿಷಯದಲ್ಲಿಯೂ ನಿನ್ನ ಬೇಡಿಕೆಯನ್ನು ಅನುಗ್ರಹಿಸಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡವಿ ಹಾಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದಕ್ಕಾತನು - ಈ ವಿಷಯದಲ್ಲಿಯೂ ನಿನಗೆ ಅನುಗ್ರಹಮಾಡಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡಹುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಪುರುಷನು ಲೋಟನಿಗೆ, “ಆಗಲಿ, ನಿನಗೆ ಅಪ್ಪಣೆ ಕೊಟ್ಟಿದ್ದೇನೆ. ನಾನು ಆ ಊರನ್ನು ನಾಶಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೂತನು ಅವನಿಗೆ, “ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ. ನೋಡು, ನೀನು ಹೇಳಿದ ಆ ಊರನ್ನು ನಾನು ಕೆಡವಿ ಹಾಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:21
16 ತಿಳಿವುಗಳ ಹೋಲಿಕೆ  

ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ I ಯಥಾರ್ಥವಾಗಿ ಆತನನು ಅರಸುವವರಿಗೆ II


ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I ನೆರವೇರಿಸದೆ ಬಿಡನು ಅವರ ಕೋರಿಕೆಯನು II


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.


ಆದರೂ, ತನ್ನ ಗೆಳೆಯ ಇವನು ಎಂದು ಎದ್ದುಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದುಬಂದು ಕೇಳಿದಷ್ಟನ್ನು ಕೊಡುತ್ತಾನೆಂಬುದು ನಿಜ.


ಮುರಿದ ಜೊಂಡಿನಂತಹ ದುರ್ಬಲರಿಗೀತ ದೀನಬಂಧು ನಂದಿಹೋಗುತಿಹ ದೀನದಲಿತರಿಗೆ ಕೃಪಾಸಿಂಧು ನ್ಯಾಯನೀತಿಗೆ ಜಯ ದೊರಕಿಸದೆ ಬಿಡನಿವನು.


ಒಂದು ವೇಳೆ ಆ ಊರೊಳಗೆ ಐವತ್ತು ಮಂದಿ ಸಜ್ಜನರಿದ್ದಾರು. ಅದರಲ್ಲಿ ಐವತ್ತು ಮಂದಿ ಸಜ್ಜನರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿರೋ?


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ನೀನು ಒಳಿತನ್ನು ಮಾಡಿದ್ದರೆ ತಲೆ ಎತ್ತುತ್ತಿದ್ದೆ; ಕೆಡುಕನ್ನು ಮಾಡಿದ್ದರಿಂದ ಪಾಪವು ಹೊಸ್ತಿಲಲ್ಲಿ ಹೊಂಚುಹಾಕುತ್ತಿದೆ; ಅದು ನಿನ್ನನ್ನು ಬಯಸುತ್ತಿದೆ. ನೀನು ಅದನ್ನು ಜಯಿಸಬೇಕು,” ಎಂದರು.


ಈ ಜನರನ್ನು ಕುರಿತು ಸರ್ವೇಶ್ವರ ನನಗೆ ಹೇಳಿದ ಮಾತುಗಳು : “ಇವರು ಅಲೆದಾಡಲು ಇಷ್ಟಪಡುವ ಜನರು. ತಮ್ಮ ಕಾಲಿನ ಮೇಲೆ ಹತೋಟಿಯಿಲ್ಲದವರು. ಆದಕಾರಣ ಸರ್ವೇಶ್ವರನಾದ ನಾನು ಇವರನ್ನು ಕರುಣೆಯಿಂದ ನೋಡುವುದಿಲ್ಲ. ಇದೀಗಲೆ ಇವರ ಅಪರಾಧಗಳನ್ನು ನೆನಪಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು.”


ಆದುದರಿಂದ ಅಗೋ, ಅಲ್ಲಿ ಊರೊಂದು ಕಾಣಿಸುತ್ತಿದೆ; ಅದು ಅಷ್ಟೇನು ದೂರವಲ್ಲ, ಚಿಕ್ಕ ಊರು, ಹೌದಲ್ಲವೆ? ಅಲ್ಲಿಗಾದರೂ ಹೋಗಲು ಅಪ್ಪಣೆಯಾದರೆ ಪ್ರಾಣ ಉಳಿಯುತ್ತದೆ,” ಎಂದನು.


ಬೇಗನೆ ಅಲ್ಲಿಗೆ ಹೋಗಿ ಸುರಕ್ಷಿತವಾಗಿರು, ನೀನು ಅಲ್ಲಿಗೆ ಮುಟ್ಟುವ ತನಕ ನಾನು ಏನನ್ನೂ ಮಾಡಲಿಕ್ಕಾಗುವುದಿಲ್ಲ,” ಎಂದನು. ಲೋಟನು ಆ ಊರನ್ನು ಚಿಕ್ಕದು ಎಂದು ಕರೆದುದಕ್ಕಾಗಿ ಅದಕ್ಕೆ “ಚೋಗರ್” ಎಂದು ಹೆಸರಾಯಿತು.


ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ, “ಸಮಾಧಾನದಿಂದ ಮನೆಗೆ ಹೋಗು; ನಿನ್ನನ್ನು ಕಟಾಕ್ಷಿಸಿ, ನಿನ್ನ ವಿಜ್ಞಾಪನೆಯನ್ನು ಆಲಿಸಿದ್ದೇನೆ,” ಎಂದನು.


ಅದಕ್ಕೆ ಸರ್ವೇಶ್ವರ, “ನಿನ್ನ ಕೋರಿಕೆಯಂತೆ ಮಾಡುವೆನು. ಏಕೆಂದರೆ ನೀನು ನನ್ನ ಅನುಗ್ರಹಕ್ಕೆ ಪಾತ್ರನು; ನಿನ್ನನ್ನು ಹೆಸರಿಡಿದು ಗುರುತಿಸಿದ್ದೇನೆ,” ಎಂದು ಮೋಶೆಗೆ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು