Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:28 - ಕನ್ನಡ ಸತ್ಯವೇದವು C.L. Bible (BSI)

28 ಸೊದೋಮ್ - ಗೊಮೋರ ಹಾಗೂ ಆ ಬಯಲುಸೀಮೆಯತ್ತ ಅವನು ಕಣ್ಣುಹಾಯಿಸಿದಾಗ, ಇಗೋ, ಆ ಪ್ರದೇಶದಿಂದ ಹೊಗೆ, ದೊಡ್ಡ ಆವಿಗೆಯ ಹೊಗೆಯಂತೆ ಭುಗಿಲೇರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಸೊದೋಮ್ ಗೊಮೋರದ ಸುತ್ತಲಿನ ಎಲ್ಲಾ ದಿಕ್ಕುಗಳ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಮೇಲಕ್ಕೇರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಸೊದೋಮ್ ಗೊಮೋರಗಳ ಕಡೆಗೂ ಆ ಎಲ್ಲಾ ಸೀಮೆಯ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಏರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅಬ್ರಹಾಮನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಕಡೆಗೂ ಕಣಿವೆ ಪ್ರದೇಶದ ಕಡೆಗೂ ನೋಡಿದಾಗ ಆ ಪ್ರದೇಶದಿಂದ ಹೊಗೆ ಮೇಲೇರುತ್ತಿರುವುದನ್ನು ಕಂಡನು; ಧಗಧಗಿಸುವ ಬೆಂಕಿಯಿಂದ ಬರುವ ಹೊಗೆಯಂತೆ ಅದು ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವನು ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶಗಳ ಕಡೆಗೂ ನೋಡಿದನು. ಆ ಪ್ರದೇಶದಿಂದ ಹೊಗೆಯು ಕುಲುಮೆಯ ಹೊಗೆಯಂತೆ ಏರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:28
11 ತಿಳಿವುಗಳ ಹೋಲಿಕೆ  

ಅವಳೊಡನೆ ವ್ಯಭಿಚಾರಮಾಡಿದ ಹಾಗೂ ಭೋಗವಿಲಾಸದಿಂದ ಬಾಳಿದ ಭೂರಾಜರು ಅವಳನ್ನು ದಹಿಸುವ ಚಿತೆಯಿಂದ ಮೇಲೇರುವ ದಟ್ಟ ಹೊಗೆಯನ್ನು ದಿಟ್ಟಿಸಿ ನೋಡಿ ಶೋಕಿಸುವರು.


ಅವನು ಆ ಕೂಪದ ಮುಚ್ಚಳವನ್ನು ತೆರೆದನು. ಅದರೊಳಗಿಂದ ದಟ್ಟಹೊಗೆ ದೊಡ್ಡ ಕುಲುಮೆ ಒಂದರಿಂದ ಬರುತ್ತಿರುವಂತೆ ಮೇಲೇರಿತು. ಇದರಿಂದಾಗಿ ಸೂರ್ಯನೂ ವಾಯುಮಂಡಲವೂ ಕಪ್ಪಾದವು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಅವರು ಅವಳನ್ನು ದಹಿಸಿದ ಬೆಂಕಿಯ ದಟ್ಟ ಹೊಗೆಯನ್ನು ಕಂಡು, “ಈ ಮಹಾನಗರಿಗೆ ಸರಿಸಮನಾದ ನಗರವೊಂದುಂಟೇ?” ಎಂದು ಉದ್ಗರಿಸಿದರು.


ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.


ಅವರು ಮತ್ತೊಮ್ಮೆ, “ಅಲ್ಲೆಲೂಯ ! ಅವಳ ದಹನದಿಂದ ಹೊಗೆ ಸತತ ಮೇಲೇರುತಿಹುದು ಒಂದೇಸಮನೆ,” ಎಂದು ಕೂಗಿದರು.


ಆದರೆ, ಆ ದುರ್ಜನರ ಅನೈತಿಕ ನಡವಳಿಕೆಯನ್ನು ಕಂಡು ಅತಿಯಾಗಿ ಮನನೊಂದಿದ್ದ ಲೋತ ಎಂಬ ಸತ್ಪುರುಷನನ್ನು ಸಂರಕ್ಷಿಸಿದರು.


ಒಣನೆಲವಾಗಿಸಿದನಾತ ಬುಗ್ಗೆಗಳನು I ಉಪ್ಪುನೆಲವಾಗಿಸಿದ ಫಲಭೂಮಿಯನು II


ಸೀನಾಯಿ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರ ಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದುಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು.


“ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು? ಆತನ ದರ್ಶನವನ್ನು ಪಡೆದು ಬದುಕಬಲ್ಲವನು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು