Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:5 - ಕನ್ನಡ ಸತ್ಯವೇದವು C.L. Bible (BSI)

5 ಅಲ್ಲದೆ ಲೋಟನಿಗೆ, "ಈ ರಾತ್ರಿ ತಂಗಲು ನಿನ್ನ ಬಳಿಗೆ ಬಂದ ಆ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ಸಂಭೋಗಿಸಬೇಕು,” ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಲೋಟನಿಗೆ, “ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು” ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ತೆಗೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನಿನ್ನ ಮನೆಗೆ ಬಂದ ಆ ಇಬ್ಬರು ಪುರುಷರು ಎಲ್ಲಿದ್ದಾರೆ? ಅವರನ್ನು ಹೊರಗೆ ಕಳುಹಿಸು. ನಾವು ಅವರನ್ನು ಸಂಭೋಗಿಸಬೇಕು” ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಲೋಟನನ್ನು ಕರೆದು, “ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಕರೆದುಕೊಂಡು ಬಾ, ಅವರೊಡನೆ ಸಂಭೋಗಿಸಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:5
23 ತಿಳಿವುಗಳ ಹೋಲಿಕೆ  

ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚ ಜನರು ಬಂದು, ಆ ಮನೆಯನ್ನು ಸುತ್ತಿಕೊಂಡು, ಕದಗಳನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು,” ಎಂದು ಕೂಗಿದರು.


ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.


ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.


ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಹೇಸಿಗೆಯಾದುದು.


ಅಂತೆಯೇ, ಕಾಮುಕರಿಗೆ, ಸಲಿಂಗ ಪ್ರೇಮಿಗಳಿಗೆ, ನರಚೋರರಿಗೆ, ಸುಳ್ಳುಸಾಕ್ಷಿಗಳಿಗೆ ಸುಳ್ಳಾಣೆ ಇಡುವವರಿಗೆ ಮತ್ತು ಸದ್ಧರ್ಮ ವಿರೋಧಿಗಳಿಗೆ ಮುಂತಾದವರಿಗೆ ಈ ನಿರ್ಬಂಧನೆಗಳು ನೇಮಕವಾಗಿವೆ.


ಅಧರ್ಮಿಗಳು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲವೆಂದು ನೀವು ಬಲ್ಲಿರಿ. ನಿಮ್ಮನ್ನು ನೀವೇ ವಂಚಿಸಿಕೊಳ್ಳಬೇಡಿ. ದುರಾಚಾರಿಗಳು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


“ಸಮಾರಿಯ ಎಂಬಾಕೆ ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕ ಅಸಹ್ಯಕಾರ್ಯಗಳನ್ನು ನಡೆಸಿರುವೆ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.


ದುಷ್ಕರ್ಮಿಗಳು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನೇದಿನೇ ಅಧೋಗತಿಗಿಳಿಯುತ್ತಾರೆ.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಗರ್ವಪಡುವುದು, ಹೊಟ್ಟೆ ತುಂಬಿಸಿಕೊಳ್ಳುವುದು, ಸ್ವಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಆಕೆಯ ಕುವರಿಯರಲ್ಲೂ ಇದ್ದವು. ಅಲ್ಲದೆ ಅವರು ದೀನದಲಿತರಿಗೆ ಬೆಂಬಲವಾಗಿರಲಿಲ್ಲ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಅವರಿಗೆ ಲಜ್ಜೆಯ ಗಂಧವೂ ಇಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದರು.


ಆದಕಾರಣವೇ ಹದಮಳೆಗೆ ಅಡ್ಡಿಯಾಯಿತು. ವಸಂತಕಾಲದ ಮಳೆ ಬರದೆಹೋಯಿತು. ಇನ್ನೂ ನೀನು ವೇಶ್ಯೆ ಮುಖದವಳು, ಲಜ್ಜೆಗೆಟ್ಟವಳು !


ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ಯಾವನಾದರು ಸ್ತ್ರೀಯನ್ನು ಸಂಭೋಗಿಸುವಂತೆ ಪುರುಷನನ್ನು ಸಂಭೋಗಿಸಿದರೆ ಅವರಿಬ್ಬರೂ ಹೇಸಿಗೆಯ ಕೃತ್ಯ ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.


ಇಷ್ಟಾದರೂ ಅವರ ಅನೈತಿಕಮಾರ್ಗವನ್ನೇ ಅನೇಕರು ಅನುಸರಿಸುವರು. ಅವರ ದೆಸೆಯಿಂದ ಇತರರು ಸತ್ಯಮಾರ್ಗವನ್ನು ಅವಹೇಳನ ಮಾಡುವರು.


ಆದರೆ, ಆ ದುರ್ಜನರ ಅನೈತಿಕ ನಡವಳಿಕೆಯನ್ನು ಕಂಡು ಅತಿಯಾಗಿ ಮನನೊಂದಿದ್ದ ಲೋತ ಎಂಬ ಸತ್ಪುರುಷನನ್ನು ಸಂರಕ್ಷಿಸಿದರು.


ಲೋಟನು, ತನ್ನ ಹಿಂದೆ ಬಾಗಿಲು ಹಾಕಿಕೊಂಡು, ಹೊರಕ್ಕೆ ಬಂದು,


“ಇಸ್ರಯೇಲರಲ್ಲಿ ಯಾವ ಸ್ತ್ರೀಯೂ ಗುಡಿವೇಶ್ಯೆಯಾಗಬಾರದು; ಅಂತೆಯೇ ಯಾವ ಪುರುಷನೂ ಅಂಥ ವೇಶ್ಯೆತನಕ್ಕೆ ಇಳಿಯಬಾರದು.


ಇದಲ್ಲದೆ, ಅವರ ನಾಡಿನಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿದ್ದ ಗಂಡಸರೂ ಹೆಂಗಸರೂ ಇದ್ದರು. ಅವರ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಅನ್ಯಜನಾಂಗಗಳ ದುರಾಚಾರಗಳನ್ನೆಲ್ಲಾ ಅವರೂ ನಡೆಸುತ್ತಿದ್ದರು.


ಇವನು ತನ್ನ ತಂದೆ ಆಸನ ಕಾಲದಲ್ಲಿ ತಪ್ಪಿಸಿಕೊಂಡ ಹೆಣ್ಣು-ಗಂಡು ವೇಶ್ಯೆಯರನ್ನು ನಾಡಿನಿಂದ ತೆಗೆದುಹಾಕಿದನು.


ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು