Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:9 - ಕನ್ನಡ ಸತ್ಯವೇದವು C.L. Bible (BSI)

9 ಅವರಾದರೋ, “ಬಿಡು ದಾರಿ, ಪ್ರವಾಸಿಯಾಗಿ ಬಂದ ಇವನು ನಮಗೆ ನ್ಯಾಯಹೇಳುವವನಾಗಿಬಿಟ್ಟ! ದಾರಿ ಬಿಡದಿದ್ದರೆ ಆ ಮನುಷ್ಯರಿಗಿಂತ ನಿನಗೇ ಹೆಚ್ಚು ಕೇಡಾದೀತು,” ಎಂದು ಹೇಳಿ ಲೋಟನ ಮೇಲೆ ಬಿದ್ದು ತುಳಿದು ಬಾಗಿಲನ್ನು ಒಡೆದುಹಾಕುವುದರಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ದಾರಿ ಬಿಡು ಎಂದು ಹೇಳಿ, “ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ” ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದಾರಿ ಬಿಡು ಎಂದು ಹೇಳಿ - ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯ ಹೇಳುವವನಾಗಬೇಕೋ; ಆ ಮನುಷ್ಯರಿಗೆ ಕೇಡು ಮಾಡುವದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ಇರುಕಿಸಿ ಕದವನ್ನು ಒಡೆದು ಬಿಡಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮನೆಯ ಸುತ್ತಲೂ ನಿಂತುಕೊಂಡಿದ್ದ ಗಂಡಸರು ಅವನಿಗೆ, “ದಾರಿಬಿಡು” ಎಂದು ಕೂಗಿದರು. ಆಮೇಲೆ ಅವರು ತಮ್ಮೊಳಗೆ, “ಈ ಲೋಟನು ನಮ್ಮ ನಗರಕ್ಕೆ ಪ್ರವಾಸಿಗನಂತೆ ಬಂದು ಈಗ ನಮಗೇ ನ್ಯಾಯವನ್ನು ಹೇಳಿಕೊಡುತ್ತಿದ್ದಾನೆ” ಎಂದು ಮಾತಾಡಿಕೊಂಡರು. ಆಮೇಲೆ ಅವರು ಲೋಟನಿಗೆ, “ನಾವು ಆ ಪುರುಷರಿಗೆ ಮಾಡುವುದಕ್ಕಿಂತ ನಿನಗೇ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ” ಎಂದು ಕೂಗಿಹೇಳಿ ಲೋಟನ ಸಮೀಪಕ್ಕೆ ಬಂದು ಬಾಗಿಲನ್ನು ಮುರಿದುಹಾಕಲು ಸಿದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಅವರು, “ಹಿಂದಕ್ಕೆ ಸರಿ,” ಎಂದು ಹೇಳಿ, “ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿಯಾಗಲು ಯತ್ನಿಸುತ್ತಿದ್ದಾನೆ. ಈಗ ನಿನಗೆ ಅವರಿಗಿಂತ ಹೆಚ್ಚು ಕೇಡು ಮಾಡುತ್ತೇವೆ,” ಎಂದರು. ಅವರು ಲೋಟನನ್ನು ಬಲವಾಗಿ ತುಳಿದು, ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:9
21 ತಿಳಿವುಗಳ ಹೋಲಿಕೆ  

ಅದಕ್ಕೆ ಅವನು, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿ ಹಾಗೂ ನ್ಯಾಯಾಧಿಪತಿಯನ್ನಾಗಿ ನೇಮಿಸಿದವರು ಯಾರು? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನು ಕೊಂದುಹಾಕಬೇಕೆಂದಿರುವೆಯಾ?” ಎಂದನು. ಈ ಮಾತನ್ನು ಕೇಳಿದ್ದೇ ಮೋಶೆ, “ನಾನು ಮಾಡಿದ ಕಾರ್ಯ ಬಯಲಾಗಿಬಿಟ್ಟಿತಲ್ಲಾ!” ಎಂದು ಅಂಜಿದನು.


ಅಬ್ರಾಮನು ಕಾನಾನ್ ನಾಡಿನಲ್ಲೇ ವಾಸಮಾಡಿದನು. ಲೋಟನು ಜೋರ್ಡನ್ ನದಿಯ ಸುತ್ತಣ ಊರುಗಳಲ್ಲಿ ವಾಸಮಾಡುತ್ತಾ ಸೋದೋಮ್‍ಗೆ ಸಮೀಪದಲ್ಲಿ ಗುಡಾರಹಾಕಿದನು.


“ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಲಜ್ಜೆಯ ಗಂಧವೂ ಅವರಿಗಿಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಅವರಿಗೆ ಲಜ್ಜೆಯ ಗಂಧವೂ ಇಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದರು.


ಆದಕಾರಣವೇ ಹದಮಳೆಗೆ ಅಡ್ಡಿಯಾಯಿತು. ವಸಂತಕಾಲದ ಮಳೆ ಬರದೆಹೋಯಿತು. ಇನ್ನೂ ನೀನು ವೇಶ್ಯೆ ಮುಖದವಳು, ಲಜ್ಜೆಗೆಟ್ಟವಳು !


ಬೇರೆಯವರಿಗೆ, ‘ಅಲ್ಲೇ ನಿಲ್ಲು, ಹತ್ತಿರ ಬರಬೇಡ; ನಿನಗಿಂತ ನಾನು ಮಡಿವಂತ’ ಎನ್ನುತ್ತಾರೆ. ಹೀಗೆ ಇವರು ನನಗೆ ಉಸಿರುಕಟ್ಟುವ ಹೊಗೆಯಾಗಿದ್ದಾರೆ; ದಿನವೆಲ್ಲ ಉರಿಯುವ ಬೆಂಕಿಯಾಗಿದ್ದಾರೆ.


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕ ವ್ಯವಹಾರಗಳಲ್ಲೆಲ್ಲಾ ಸೇರಿಕೊಂಡಿದೆ. ಇದಲ್ಲದೆ, ನರಮಾನವರ ಎದೆಯಲ್ಲಿ ಕೆಟ್ಟತನ ತುಂಬಿದೆ; ಅವರು ಬದುಕಿರುವ ತನಕ ಮರುಳುತನ ಅವರ ಮನಸ್ಸನ್ನು ಸೆರೆಹಿಡಿದಿರುತ್ತದೆ. ಅನಂತರ ಸತ್ತವರನ್ನು ಸೇರಿಕೊಳ್ಳುತ್ತಾರೆ.


ಕಲ್ಲು ಭಾರ, ಮರಳು ಭಾರ, ಮೂಢನ ರೇಗಾಟ ಇವೆರಡಕ್ಕೂ ಬಲುಭಾರ.


ಮೂರ್ಖತನದಲ್ಲಿ ಮುಳುಗಿರುವ ಮೂಢನಿಗೆ ಎದುರಾಗುವುದಕ್ಕಿಂತಲು ಮರಿಗಳನ್ನು ಕಳೆದುಕೊಂಡ ಕರಡಿಗೆ ಎದುರಾಗುವುದು ಲೇಸು.


ಬುದ್ಧಿವಂತನು ಕೇಡಿಗೆ ಅಂಜಿ ಓರೆಯಾಗುವನು; ಬುದ್ಧಿಹೀನನು ಸೊಕ್ಕಿನಿಂದ ಅದರತ್ತ ಧಾವಿಸುವನು.


ಈಗ ಮಾಡಬೇಕಾದುದ್ದನ್ನು ನೀವೇ ಆಲೋಚಿಸಿ ತೀರ್ಮಾನಿಸಿ. ನಮ್ಮ ಯಜಮಾನರಿಗೂ ಅವರ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮಂದಮತಿಯಾದ ಅವರೊಡನೆ ಮಾತಾಡುವುದು ಅಸಾಧ್ಯ,” ಎಂದು ಹೇಳಿದನು.


“ಇಲ್ಲಿ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೆ, ಕಾಡಿನ ಮೃಗಗಳಿಗೆ ಹಂಚಿಕೊಡುತ್ತೇನೆ,” ಎಂದನು.


ನೋಡಿದ ಮೇಲೆ, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಇದು ಇವರು ಕೈಗೊಂಡಿರುವ ಕಾರ್ಯದ ಪ್ರಾರಂಭ ಮಾತ್ರ. ಮುಂದಕ್ಕೆ ಇವರು ಏನು ಬೇಕಾದರೂ ಮಾಡಿಯಾರು!


ಬಲಿಯರ್ಪಿಸುತ್ತಿದ್ದವನು ಅವನಿಗೆ, “ಮೊದಲು ಕೊಬ್ಬನ್ನು ಹೋಮಮಾಡೋಣ; ಅನಂತರ ನಿನಗೆ ಬೇಕಾದುದನ್ನು ತೆಗೆದುಕೊಳ್ಳುವಿಯಂತೆ,” ಎಂದು ಹೇಳಿದಾಗ, “ಕೂಡದು, ಈಗಲೇ ಬೇಕು; ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುತ್ತೇನೆ,” ಎಂದು ಪೀಡಿಸುತ್ತಿದ್ದನು.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಗರ್ವಪಡುವುದು, ಹೊಟ್ಟೆ ತುಂಬಿಸಿಕೊಳ್ಳುವುದು, ಸ್ವಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಆಕೆಯ ಕುವರಿಯರಲ್ಲೂ ಇದ್ದವು. ಅಲ್ಲದೆ ಅವರು ದೀನದಲಿತರಿಗೆ ಬೆಂಬಲವಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು