Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:25 - ಕನ್ನಡ ಸತ್ಯವೇದವು C.L. Bible (BSI)

25 ಆ ಸ್ತ್ರೀಪುರುಷರಿಬ್ಬರೂ ಬೆತ್ತಲೆ ಆಗಿದ್ದರೂ ನಾಚಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಮನುಷ್ಯನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆ ಸ್ತ್ರೀಪುರುಷರಿಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಪುರುಷನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದಾಮನೂ ಅವನ ಹೆಂಡತಿಯೂ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:25
15 ತಿಳಿವುಗಳ ಹೋಲಿಕೆ  

ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆ ಆಗಿದ್ದೇವೆಂದು ತಿಳಿದು ಅವರು ಅಂಜೂರದ ಎಲೆಗಳನ್ನು ಹೊಲಿದು ಉಟ್ಟುಕೊಂಡರು.


ಏಕೆಂದರೆ, “ಅವರಲ್ಲಿ ವಿಶ್ವಾಸ ಇಡುವ ಯಾರಿಗೂ ಆಶಾಭಂಗವಾಗುವುದಿಲ್ಲ,” ಎಂದು ಪವಿತ್ರಗ್ರಂಥದಲ್ಲೇ ಹೇಳಲಾಗಿದೆ.


ನೀವು ಹೊಟ್ಟೆತುಂಬ ಊಟಮಾಡಿ ತೃಪ್ತರಾಗುವಿರಿ; ನಿಮಗಾಗಿ ಮಹತ್ಕಾರ್ಯಗಳನ್ನು ಎಸಗಿದ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಕೊಂಡಾಡುವಿರಿ; ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.


ಸ್ವಾಮಿ ಸರ್ವೇಶ್ವರಾ, ನೀವು ಇಸ್ರಯೇಲರ ಆಶ್ರಯ ! ನಿಮ್ಮನ್ನು ಬಿಟ್ಟುಹೋಗುವವರು ಆಶಾಭಂಗಪಡುವರು ಅವರು ಜೀವಜಲದ ಬುಗ್ಗೆಯನ್ನೆ ತೊರೆದವರು ತಮ್ಮ ಹೆಸರನ್ನು ಧೂಳಿನಲ್ಲಿ ಬರೆಸಿಕೊಂಡವರು.


ಮುಯ್ಯಿ ತೀರಿಸುವೆನು ಯಾರನ್ನೂ ಕರುಣಿಸದೆ ಬೀದಿಪಾಲಾಗುವೆ ನೀನು ಲಜ್ಜೆಗೆಟ್ಟು, ಮಾನವಿಲ್ಲದೆ.”


ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ, ತನ್ನ ಪಿತನ ಹಾಗೂ ದೇವದೂತರ ಪ್ರಭಾವದೊಡನೆ ಬರುವಾಗ, ನಾಚಿಕೆಪಡುವನು.


ಇದಕ್ಕನುಸಾರ ನಾನು ಕುವರಿಯನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವರು. ಆಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಸಿಕೊಂಡು ನಾಚಿಕೆಪಡುವೆ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.


ಅಂಜಬೇಡ, ನಿನಗಾಗುವುದಿಲ್ಲ ಅವಮಾನ ನಾಚಬೇಡ, ನಿನಗಾಗದು ಆಶಾಭಂಗ. ಮರೆವೆ ಯೌವನದಲ್ಲಿ ನಿನಗಾದ ಅವಮಾನವನು ವೈಧವ್ಯದಲ್ಲಾದ ನಿಂದೆ ನೆನಪಿಗೆ ಬಾರದಿನ್ನು.


ಆಗಲಿ ಆಶಾಭಂಗ ನಿನ್ನೆದುರಾಳಿಗಳಿಗೆ I ಹಾಗಾಗದಿರಲಿ ನಿನ್ನ ನಿರೀಕ್ಷಿಸುವವರಿಗೆ II


ಇಸ್ರಯೇಲರು ಅಂಕೆಮೀರಿ ಇಷ್ಟಬಂದಂತೆ ನಡೆದುಕೊಳ್ಳಲು ಆರೋನನು ಬಿಟ್ಟುಬಿಟ್ಟಿದ್ದನು. ಈ ಕಾರಣ ಅವರು ವಿರೋಧಿಗಳ ಅಪಹಾಸ್ಯಕ್ಕೆ ಗುರಿಯಾಗಿದ್ದರು.


ದೈವನಿಷ್ಠೆಯಿಲ್ಲದ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ ತನ್ನ ಪಿತನ ಪ್ರಭಾವದೊಡನೆ ದೇವದೂತರ ಪರಿವಾರ ಸಮೇತನಾಗಿ ಬರುವಾಗ, ನಾಚಿಕೆಪಡುವನು,” ಎಂದರು.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಅವರಿಗೆ ಲಜ್ಜೆಯ ಗಂಧವೂ ಇಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದರು.


ವಿಗ್ರಹಗಳನ್ನು ಕೆತ್ತುವವರೆಲ್ಲರು ನಿರರ್ಥಕರು; ಅವರ ಇಷ್ಟಬೊಂಬೆಗಳು ಏತಕ್ಕೂ ಬಾರವು; ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು.


ನಿನಗೆ ಮೊರೆಯಿಡುವೆ, ನನಗಾಗದಿರಲಿ ಹೇ ಪ್ರಭು, ಮಾನಭಂಗ I ದುರುಳರಿಗಾಗಲೀ ಆಶಾಭಂಗ, ಮೂಕರಾಗವರು ಸೇರಲಿ ನರಕ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು