Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:2 - ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿದ್ದಾಗ ಅಬ್ರಹಾಮನು ತನ್ನ ಹೆಂಡತಿ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಈ ಕಾರಣ ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಸೇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿಕೊಂಡದ್ದರಿಂದ, ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿದನಾದ್ದರಿಂದ ಗೆರಾರಿನ ಅರಸನಾದ ಅಬೀಮೆಲೆಕನು ಕರೇಕಳುಹಿಸಿ ಆಕೆಯನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಬ್ರಹಾಮನು ಗೆರಾರಿನಲ್ಲಿದ್ದಾಗ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಗೆರಾರಿನ ರಾಜನಾಗಿದ್ದ ಅಬೀಮೆಲೆಕನು ಇದನ್ನು ಕೇಳಿ ಸಾರಳನ್ನು ಪಡೆದುಕೊಳ್ಳಲು ಬಯಸಿದನು. ಬಳಿಕ ಅವನು ಕೆಲವು ಸೇವಕರನ್ನು ಕಳುಹಿಸಿ ಆಕೆಯನ್ನು ಕರೆಯಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಗೆರಾರಿನಲ್ಲಿ ಅಬ್ರಹಾಮನು ತನ್ನ ಹೆಂಡತಿ ಸಾರಳ ವಿಷಯವಾಗಿ, “ಅವಳು ನನ್ನ ತಂಗಿ,” ಎಂದು ಹೇಳಿದ್ದನು. ಆದ್ದರಿಂದ ಗೆರಾರಿನ ಅರಸ ಅಬೀಮೆಲೆಕನು ಸಾರಳನ್ನು ಕರೆಯಿಸಿ ತನ್ನ ಅರಮನೆಗೆ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:2
17 ತಿಳಿವುಗಳ ಹೋಲಿಕೆ  

ಫರೋಹನ ಪದಾಧಿಕಾರಿಗಳು ಆಕೆಯನ್ನು ನೋಡಿಬಂದು ಆಕೆಯ ಚೆಲುವನ್ನು ಅವನ ಮುಂದೆ ಹೊಗಳಿದರು.


ಅಲ್ಲಿಯ ಜನರು ಅವನ ಹೆಂಡತಿಯ ವಿಷಯವಾಗಿ ವಿಚಾರಿಸಿದರು. “ಅವಳು ನನ್ನ ತಂಗಿ”, ಎಂದು ಇಸಾಕನು ಹೇಳಿದನು. ರೆಬೆಕ್ಕಳು ಬಲು ಚೆಲುವೆಯಾಗಿದ್ದರಿಂದ ಆಕೆಯ ನಿಮಿತ್ತ ತನ್ನನ್ನು ಕೊಂದಾರು ಎಂದು ಹೆದರಿ ಹಾಗೆ ಹೇಳಿದನು.


ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ, ನಿಮ್ಮಲ್ಲಿದ್ದ ಹಳೆಯ ಸ್ವಭಾವವನ್ನೂ ಅದಕ್ಕೆ ಸಂಬಂಧಿಸಿದ ದುರಭ್ಯಾಸಗಳನ್ನೂ ತೊರೆದುಬಿಟ್ಟಿದ್ದೀರಿ.


ಆದುದರಿಂದ, ಸುಳ್ಳಾಡುವುದನ್ನು ಬಿಟ್ಟುಬಿಡಿ. ಒಬ್ಬರೊಡನೊಬ್ಬರು ಸತ್ಯವನ್ನೇ ನುಡಿಯಿರಿ. ಏಕೆಂದರೆ, ನಾವೆಲ್ಲರೂ ಒಂದೇ ಶರೀರದ ಅಂಗಗಳು.


ಪಾಪಮಾಡದೆ ಧರ್ಮವನ್ನೇ ಆಚರಿಸುವ ಸತ್ಪುರುಷ ಜಗದಲ್ಲಿ ಇಲ್ಲವೇ ಇಲ್ಲ.


ನೀತಿವಂತನು ಏಳುಸಾರಿ ಬಿದ್ದರೂ ಮತ್ತೆ ಏಳುವನು; ದುಷ್ಟನು ಕೇಡುಬಂದಾಗಲೆ ಕುಸಿದು ಬೀಳುವನು.


ಆದುದರಿಂದ ಅವನ ನಾಡಿನಲ್ಲಾದ ಅದ್ಭುತಕರವಾದ ಮಾರ್ಪಾಟುಗಳನ್ನು ಪರಿಶೀಲಿಸುವುದಕ್ಕಾಗಿ ಬಾಬಿಲೋನಿಯದ ಅಧಿಪತಿಗಳು ರಾಯಭಾರಿಗಳನ್ನು ಅವನ ಬಳಿಗೆ ಕಳುಹಿಸಿದರು. ಅವರು ಬಂದಾಗ, ಅವನನ್ನು ಪರೀಕ್ಷಿಸುವುದಕ್ಕಾಗಿ ಹಾಗು ಅವನ ಅಂತರಾಳವನ್ನು ತಿಳಿದುಕೊಳ್ಳುವುದಕ್ಕಾಗಿ ದೇವರು ಅವನನ್ನು ಕೈಬಿಟ್ಟರು.


ಅವನು ಜೆರುಸಲೇಮಿಗೆ ಬಂದಾಗ ಹನಾನೀಯನ ಮಗ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು, “ನೀವು ಕೆಟ್ಟವನಿಗೆ ಸಹಾಯಮಾಡಬಹುದೇ? ಸರ್ವೇಶ್ವರನ ಹಗೆಗಾರರನ್ನು ಪ್ರೀತಿಸಬಹುದೇ? ನೀವು ಹೀಗೆ ಮಾಡಿದ್ದರಿಂದ ಸರ್ವೇಶ್ವರನ ಕೋಪ ನಿಮ್ಮ ಮೇಲಿರುತ್ತದೆ.


ಹೀಗಿರಲಾಗಿ ಅಬೀಮೆಲೆಕನು ಇಸಾಕನಿಗೆ, “ನೀನು ನಮಗಿಂತ ಅಧಿಕ ಬಲಿಷ್ಠನಾಗಿಬಿಟ್ಟೆ; ಆದುದರಿಂದ ನಮ್ಮನ್ನು ಬಿಟ್ಟು ಹೊರಟುಹೋಗಬೇಕು” ಎಂದು ಹೇಳಿದನು.


ಹಿಂದೆ ಅಬ್ರಹಾಮನ ಕಾಲದಲ್ಲಿ ಬಂದಿದ್ದ ಬರಗಾಲವು ಮತ್ತೊಮ್ಮೆ ಕಾನಾನ್ ನಾಡಿಗೆ ಬಂದಿತು. ಇಸಾಕನು ಫಿಲಿಷ್ಟಿಯರ ಅರಸ ಅಬೀಮೆಲೆಕನನ್ನು ಕಾಣಲು ಗೆರಾರಿಗೆ ಹೋದನು.


ಅದೂ ಅಲ್ಲದೆ ಈಕೆ ನಿಜವಾಗಿಯೂ ನನ್ನ ತಂಗಿ, ನನ್ನ ತಂದೆಯ ಮಗಳು, ಆದರೆ ನನ್ನ ತಾಯಿಯ ಮಗಳಲ್ಲ; ಎಂದೇ ನನಗೆ ಹೆಂಡತಿಯಾದಳು.


ಆಗ ಮಾರೇಷಾ ಊರಿನ ದೋದಾವಾಹುವಿನ ಮಗ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧವಾಗಿ, “ನೀನು ಅಹಜ್ಯನೊಡನೆ ಒಪ್ಪಂದಮಾಡಿಕೊಂಡಿದ್ದರಿಂದ ಸರ್ವೇಶ್ವರ ನಿನ್ನ ಕೆಲಸವನ್ನು ಹಾಳುಮಾಡುವರು,” ಎಂದು ಪ್ರವಾದಿಸಿದನು. ಆ ಹಡಗುಗಳು ಒಡೆದುಹೋದುದರಿಂದ ತಾರ್ಷೀಷಿಗೆ ಹೊರಡಲೇ ಇಲ್ಲ.


ಆ ದಿನಗಳಲ್ಲಿ ಅಬೀಮೆಲೆಕನು ತನ್ನ ಸೇನಾಪತಿಯಾದ ಫೀಕೋಲನ ಸಮೇತ ಅಬ್ರಹಾಮನ ಬಳಿಗೆ ಬಂದು, “ನೀನು ಮಾಡುವ ಕೆಲಸಕಾರ್ಯಗಳಲ್ಲೆಲ್ಲಾ ದೇವರು ನಿನ್ನ ಸಂಗಡ ಇದ್ದಾರೆ.


ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು.


ಅಂತೆಯೆ ನೆರೆಯವನ ಸತಿಯನ್ನು ಕೂಡುವವನ ಗತಿಯು; ಆಕೆಯನ್ನು ಮುಟ್ಟುವವನು ತಪ್ಪಿಸಿಕೊಳ್ಳನು ದಂಡನೆಯನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು