Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:5 - ಕನ್ನಡ ಸತ್ಯವೇದವು C.L. Bible (BSI)

5 ಆ ಮನುಷ್ಯನೇ ಈಕೆ ನನಗೆ ತಂಗಿಯಾಗಬೇಕೆಂದು ಹೇಳಿದ; ಈಕೆಯೂ ಆತನು ನನಗೆ ಅಣ್ಣನಾಗಬೇಕೆಂದು ಹೇಳಿದಳು. ಶುದ್ಧಮನಸ್ಸಿನಿಂದ ಹಾಗೂ ಶುದ್ಧಹಸ್ತದಿಂದ ಈ ಕಾರ್ಯಮಾಡಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ಹೇಳಿದನು. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯಥಾರ್ಥ ಮನಸ್ಸಿನಿಂದಲೂ, ಶುದ್ಧ ಹಸ್ತದಿಂದಲೂ ಇದನ್ನು ಮಾಡಿದೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ತಾನೇ ಹೇಳಲಿಲ್ಲವೇ. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯರ್ಥಾರ್ಥಮನಸ್ಸಿನಿಂದಲೂ ಶುದ್ಧಹಸ್ತದಿಂದಲೂ ಇದನ್ನು ಮಾಡಿದೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ‘ಈಕೆ ನನಗೆ ತಂಗಿಯಾಗಬೇಕು’ ಎಂದು ಅಬ್ರಹಾಮನೇ ಹೇಳಿದನು. ಅಲ್ಲದೆ ಈಕೆಯೂ ‘ಅವನು ನನ್ನ ಸಹೋದರ’ ಎಂದು ಹೇಳಿದಳು. ನಾನು ನಿರಪರಾಧಿ. ನಾನು ಮಾಡಲಿದ್ದ ತಪ್ಪು ನನಗೆ ತಿಳಿದಿರಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವನು ನನಗೆ, ‘ಅವಳು ನನ್ನ ತಂಗಿ,’ ಎಂದು ಹೇಳಲಿಲ್ಲವೋ? ಅವಳೇ, ‘ಅವನು ನನ್ನ ಅಣ್ಣ,’ ಎಂದು ಹೇಳಿದ್ದಾಳೆ. ಆದ್ದರಿಂದ ನಾನು ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಹಸ್ತದಿಂದಲೂ ಇದನ್ನು ಮಾಡಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:5
21 ತಿಳಿವುಗಳ ಹೋಲಿಕೆ  

ಹೇ ಪ್ರಭು, ಜಗದ ಜನಾಂಗಕೆ ನ್ಯಾಯ ದೊರಕಿಸುವವನು ನೀನು I ನನಗೂ ನ್ಯಾಯ ದೊರಕಿಸು : ನಿರಪರಾಧಿ, ನೀತಿವಂತ ನಾನು II


ನೀನು ನಿನ್ನ ತಂದೆ ದಾವೀದನಂತೆ ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡು, ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಗೊಳ್ಳುತ್ತಾ ಬಂದರೆ, ಇಸ್ರಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು;


ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆತೋರಿದರು.


ವಿಶ್ವಾಸಿಗಳಾದ ನಿಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ, ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿಯೇ.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ನನ್ನ ದೇವರು ತಮ್ಮ ದೂತನನ್ನು ಕಳಿಸಿ, ಸಿಂಹಗಳ ಬಾಯನ್ನು ಬಂಧಿಸಿದರು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆ ದೇವರ ದೃಷ್ಟಿಯಲ್ಲಿ ನಾನು ನಿರ್ಮಲನು. ರಾಜರಾದ ತಮಗೂ ನಾನು ಯಾವ ದ್ರೋಹವನ್ನೂ ಮಾಡಲಿಲ್ಲ,” ಎಂದು ಹೇಳಿದನು.


ನಿರ್ದೋಷಿಗಳಾಗಿ ನಡೆಯುತ್ತಾರೆ ನೀತಿವಂತರು; ಅವರು ಗತಿಸಿದ ಮೇಲೂ ಅವರ ಸಂತತಿಯವರು ಭಾಗ್ಯವಂತರು.


ಸಜ್ಜನರಿಗೆ ಸರಳತೆ ಮಾರ್ಗದರ್ಶನ, ದುರ್ಜನರಿಗೆ ಅವರ ವಕ್ರತೆ ಸಂಹಾರಕ.


ದಾವೀದನು ಪೋಷಿಸಿದನವರನು ನೇರ ಮನದಿಂದ I ಪರಿಪಾಲಿಸಿದನವರನು ರಾಜ್ಯಾಧಿಕಾರ ಕುಶಲತೆಯಿಂದ II


ನಾ ನಿರ್ಮಲಚಿತ್ತನಾಗಿ ಬಾಳಿದ್ದು ವ್ಯರ್ಥವೋ? I ಶುದ್ಧಹಸ್ತನಾಗಿ ನಡೆದುಕೊಂಡುದು ನಿರರ್ಥಕವೋ? II


ನಿರ್ದೋಷಿ ನಾನೆಂದು ನೀರಿನಲ್ಲಿ ಕೈತೊಳೆವೆನಯ್ಯಾ I ಪ್ರಭು, ನಿನ್ನ ಬಲಿಪೀಠದ ಪ್ರದಕ್ಷಿಣೆ ಮಾಡುವೆನಯ್ಯಾ II


ನಿರ್ದೋಷ, ನಿಷ್ಕಪಟ ನಡತೆ ನನಗೆ ರಕ್ಷೆ I ನೀನೆ ಪ್ರಭು ನನಗಿರುವ ದೃಢ ನಿರೀಕ್ಷೆ II


ಅಂಥವನಿರಬೇಕು ಶುದ್ಧಹಸ್ತನು, ಸುಮನಸ್ಕನು I ಅನಾಚಾರಕೆ, ಅಪಮಾಣಿಕತೆಗೆ ಒಲಿಯನವನು II


‘ನಾನು ಪರಿಶುದ್ಧನು, ನಿರ್ದೋಷಿ ನಾನು ನಿರ್ಮಲನು, ನಿರಪರಾಧಿ.


ನನ್ನ ದೇವರೇ, ನೀವು ಹೃದಯವನ್ನು ಪರೀಕ್ಷಿಸುವವರು ಹಾಗೂ ಯಥಾರ್ಥಚಿತ್ತರನ್ನು ಮೆಚ್ಚುವವರು ಎಂಬುವುದನ್ನು ನಾನು ಬಲ್ಲೆ. ನಾನಿದನ್ನೆಲ್ಲಾ ಅರ್ಪಿಸಿರುವುದು ಶುದ್ಧಮನಸ್ಸಿನಿಂದಲೇ, ಸ್ವಂತ ಇಷ್ಟದಿಂದಲೇ. ಇಲ್ಲಿ ಕೂಡಿರುವ ನಿಮ್ಮ ಪ್ರಜೆಗಳೂ ಸ್ವಂತ ಇಷ್ಟದಿಂದಲೇ ನಿಮಗೆ ಕಾಣಿಕೆಗಳನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


“ದೇವಾಧಿದೇವರಾದ ಸರ್ವೇಶ್ವರ ಇದಕ್ಕೆ ಸಾಕ್ಷಿ; ಆ ದೇವಾಧಿದೇವ ಸರ್ವೇಶ್ವರಸ್ವಾಮಿಗೆ ಇದು ಗೊತ್ತಿದೆ. ಇಸ್ರಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರು ಆಗಿದ್ದರೆ ಆ ಸ್ವಾಮಿ ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.


ಆದಕಾರಣ ನೀನು ನನಗೆ ತಂಗಿಯೆಂದೇ ಅವರಿಗೆ ಹೇಳು. ಆಗ ನಿನ್ನ ನಿಮಿತ್ತ ನನಗೆ ಸತ್ಕಾರ ದೊರಕುವುದು; ನಿನ್ನ ದೆಸೆಯಿಂದ ನನ್ನ ಪ್ರಾಣ ಉಳಿಯುವುದು,” ಎಂದು ತಿಳಿಸಿದನು.


ನಾನು ದೇವರ ಸಂಕಲ್ಪಕ್ಕೆ ತಲೆಬಾಗಿ, ತಂದೆಯ ಮನೆಯನ್ನು ಬಿಟ್ಟು, ದೇಶಾಂತರ ಹೋಗಲು ಹೊರಟಾಗ ಈಕೆಗೆ, ‘ನಿನ್ನಿಂದ ನನಗೊಂದು ಉಪಕಾರವಾಗಬೇಕು; ಅದೇನೆಂದರೆ, ನಾವು ಹೋದಕಡೆಯೆಲ್ಲಾ ನಾನು ನಿನಗೆ ಅಣ್ಣನಾಗಬೇಕೆಂದು ಹೇಳು,’ ಎಂದು ತಿಳಿಸಿದೆ,” ಎಂದನು.


ಸಾರಳಿಗೆ ಅವನು ಹೇಳಿದ್ದೇನೆಂದರೆ, “ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟಿದ್ದೇನೆ. ಇದರಿಂದ ನೀನು ನಿರ್ದೋಷಿಯೆಂದು ರುಜುವಾತಾಗಲಿ; ನೀನು ತಪ್ಪು ಮಾಡಿಲ್ಲವೆಂದು ಎಲ್ಲರಿಗೂ ಸ್ಪಷ್ಟವಾಗಲಿ.”


ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು