Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:16 - ಕನ್ನಡ ಸತ್ಯವೇದವು C.L. Bible (BSI)

16 ಅವಳು ಆ ಮಗುವನ್ನು ಒಂದು ಗಿಡದ ನೆರಳಿನಲ್ಲಿ ಬಿಟ್ಟು ಒಂದು ಬಾಣವನ್ನೆಸೆಯುವಷ್ಟು ದೂರಹೋಗಿ ಕುಳಿತುಕೊಂಡು ಗಟ್ಟಿಯಾಗಿ ಅತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, “ಮಗುವು ಸಾಯುವುದನ್ನು ನೋಡಲಾರೆನು” ಎಂದು ಹೇಳಿ ಜೋರಾಗಿ ಅತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮಗುವು ಸಾಯುವದನ್ನು ನೋಡಲಾರೆನು ಅಂದುಕೊಂಡು ಬಿಲ್ಲೆಸುಗೆಯಷ್ಟು ದೂರ ಹೋಗಿ ಅವನೆದುರಾಗಿ ಕೂತುಕೊಂಡು ಗಟ್ಟಿಯಾಗಿ ಅತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹಾಗರಳು ಸ್ವಲ್ಪ ದೂರ ನಡೆದುಹೋಗಿ ಕುಳಿತುಕೊಂಡು ತನ್ನ ಮಗನು ಸಾಯುವುದನ್ನು ನೋಡಲಾರದೆ ಅಳತೊಡಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬಾಣವನ್ನೆಸೆಯುವಷ್ಟು ದೂರಹೋಗಿ ಕುಳಿತುಕೊಂಡು, “ಮಗುವಿನ ಸಾವನ್ನು ನಾನು ನೋಡಲಾರೆನು,” ಎಂದು ಹೇಳಿ ಸ್ವರವೆತ್ತಿ ಅತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:16
16 ತಿಳಿವುಗಳ ಹೋಲಿಕೆ  

ಹೆತ್ತ ತಾಯಿಗೆ ತನ್ನ ಕಂದನ ಪ್ರೀತಿ ಬತ್ತಿಹೋಗುವುದುಂಟೆ? ಆಕೆ ತನ್ನ ಮೊಲೆಗೂಸನು ಮರೆತುಬಿಡುವುದುಂಟೆ? ಒಂದು ವೇಳೆ ಆಕೆ ಮರೆತರೂ ನಾ ನಿನ್ನನು ಮರೆಯೆ.


ನನ್ನ ಜನರಿಗೆ ಕೇಡು ಸಂಭವಿಸುವುದನ್ನು ಕಣ್ಣಾರೆ ಕಂಡು ನಾನು ಹೇಗೆ ತಾನೆ ಸಹಿಸಲಿ? ನನ್ನ ಕುಲನಾಶವನ್ನು ಕಂಡು ಸುಮ್ಮನಿರುವುದಾದರೂ ಹೇಗೆ?” ಎಂದು ಬಿನ್ನವಿಸಿದಳು.


ಆಗ, ಜೀವದಿಂದಿದ್ದ ಕೂಸಿನ ನಿಜವಾದ ತಾಯಿಗೆ ಕೂಸಿನ ವಿಷಯದಲ್ಲಿ ಕರುಳುಕರಗಿತು; “ನನ್ನೊಡೆಯಾ, ಬೇಡಿ; ಬದುಕಿರುವ ಕೂಸನ್ನು ಅವಳಿಗೇ ಕೊಟ್ಟುಬಿಡಿ; ಅದನ್ನು ಕೊಲ್ಲಿಸಬೇಡಿ,” ಎಂದು ಬೇಡಿಕೊಂಡಳು; ಎರಡನೆಯವಳು, “ಅದು ನನಗೂ ಬೇಡ, ನಿನಗೂ ಬೇಡ, ಕಡಿಯಲಿ,” ಎಂದು ಕೂಗಿದಳು.


ಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ. “ಮಗನು ಇನ್ನೂ ಅಷ್ಟು ದೂರದಲ್ಲಿ ಇರುವಾಗಲೇ ತಂದೆ ನೋಡಿದ. ಆತನ ಹೃದಯ ಕನಿಕರದಿಂದ ಕರಗಿಹೋಯಿತು. ಓಡಿಹೋಗಿ, ಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟ.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ದುಃಖ ತಾಳಲಾಗದೆ ದೀರ್ಘಕಾಲ ಅತ್ತು ಗೋಳಾಡಿದರು.


ದಾವೀದನ ಮಾತುಗಳು ಮುಗಿದನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿಜವಾಗಿಯೂ ನಿನ್ನ ಸ್ವರವೇ?” ಎಂದು ಗಟ್ಟಿಯಾಗಿ ಅತ್ತನು.


ಸರ್ವೇಶ್ವರ ನಿಮಗೂ ಹಾಗೆಯೇ ಒಳಿತನ್ನು ಮಾಡಲಿ. ನೀವಿಬ್ಬರೂ ಪುನಃ ಮದುವೆಯಾಗಿ ಸುಖವಾಗಿರುವಂತೆ ಅನುಗ್ರಹಿಸಲಿ!” ಎಂದು ಹರಸಿ ಅವರನ್ನು ಬೀಳ್ಕೊಡುತ್ತಾ ಮುದ್ದಿಟ್ಟಳು.


ಸರ್ವೇಶ್ವರನ ದೂತನು ಹೇಳಿದ ಈ ಮಾತುಗಳನ್ನು ಕೇಳಿ ಇಸ್ರಯೇಲರೆಲ್ಲರು ಗಟ್ಟಿಯಾಗಿ ಅತ್ತರು.


ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ತಾನೆ ಹೋಗಲಾದೀತು? ತಂದೆಗೆ ಉಂಟಾಗುವ ಮನೋಯಾತನೆಯನ್ನು ನನ್ನಿಂದ ನೋಡಲಾಗದು.”


ಅನಂತರ ರಾಖೇಲಳಿಗೆ ಮುದ್ದಿಟ್ಟನು; ಸಂತೋಷ ಉಕ್ಕಿಬಂದು ಗಟ್ಟಿಯಾಗಿ ಅತ್ತನು.


“ಅಪ್ಪಾ, ನಿಮ್ಮಲ್ಲಿ ಒಂದೇ ಆಶೀರ್ವಾದ ಮಾತ್ರ ಇತ್ತೋ? ನನ್ನನ್ನು, ನನ್ನನ್ನು ಕೂಡ ಆಶೀರ್ವಾದ ಮಾಡಪ್ಪಾ,” ಎಂದು ಗೋಳಾಡುತ್ತಾ ಅತ್ತನು.


ತಿತ್ತಿಯಲ್ಲಿದ್ದ ನೀರು ಮುಗಿದುಹೋಯಿತು. ಮಗು ಸಾಯುವುದನ್ನು ನಾನು ನೋಡಲಾರೆ ಎಂದುಕೊಂಡು,


ಆಕೆ, “ನಿನ್ನ ದೇವರಾದ ಸರ್ವೇಶ್ವರನಾಣೆ, ನನ್ನ ಹತ್ತಿರ ರೊಟ್ಟಿಯಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆ, ಇವುಗಳ ಹೊರತು ಬೇರೇನೂ ಇಲ್ಲ. ಈಗ ಸೌದೆ ಆಯ್ದುಕೊಂಡು ಹೋಗಿ ನನಗೂ ನನ್ನ ಮಗನಿಗೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ,” ಎಂದು ಉತ್ತರ ಕೊಟ್ಟಳು.


ಸರ್ವೇಶ್ವರ ಜನರಿಗೆ : “ನನ್ನ ಪ್ರಜೆಯೆಂಬ ಕುವರಿಯೇ, ಗೋಣಿತಟ್ಟನ್ನು ಸುತ್ತಿಕೊ, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡವಳಂತೆ ದುಃಖಪಟ್ಟು ಘೋರವಾಗಿ ಪ್ರಲಾಪಮಾಡು. ಕೊಳ್ಳೆಗಾರ ತಟ್ಟನೆ ನಿನ್ನ ಮೇಲೆ ಬೀಳಲಿದ್ದಾನೆ ಎಂಬುದನ್ನು ಮನದಲ್ಲಿಡು.”


ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು