Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:23 - ಕನ್ನಡ ಸತ್ಯವೇದವು C.L. Bible (BSI)

23 ಆದುದರಿಂದ ನೀನು ಈ ಸ್ಥಳದಲ್ಲಿ ನನ್ನೊಂದಿಗೆ ಒಂದು ಒಪ್ಪಂದಕ್ಕೆ ಬರಬೇಕು: ಅದೇನೆಂದರೆ - ನನಗಾಗಲಿ ನನ್ನ ಪುತ್ರಪೌತ್ರರಿಗಾಗಲಿ ಏನೂ ಅನ್ಯಾಯ ಮಾಡಬಾರದು; ನಾನು ನಿನಗೆ ಒಳ್ಳೆಯದನ್ನೇ ಮಾಡಿದಂತೆ ನನಗೂ, ನೀನು ವಾಸಮಾಡುತ್ತಿರುವ ಈ ನಾಡಿಗೂ ಒಳ್ಳೆಯದನ್ನೇ ಮಾಡಬೇಕು. ಹೀಗೆ ಮಾಡುವುದಾಗಿ ದೇವರ ಮೇಲೆ ಪ್ರಮಾಣಮಾಡಬೇಕು,” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದುದರಿಂದ ನೀನು ನನಗೂ, ನನ್ನ ಮಕ್ಕಳಿಗೂ, ನನ್ನ ಸಂತತಿಗೂ ಅನ್ಯಾಯ ಮಾಡದೆ, ನಾನು ನಿನಗೆ ಹಿತವನ್ನು ಮಾಡಿದಂತೆಯೇ, ನನಗೂ, ನೀನು ವಾಸಿಸುವ ಈ ದೇಶಕ್ಕೂ ಹಿತವನ್ನು ಮಾಡುವುದಾಗಿ ದೇವರ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀನು ಈ ಸ್ಥಳದಲ್ಲಿ ನನ್ನೊಂದಿಗೆ [ಒಡಂಬಡಿಕೆಮಾಡಿಕೊಂಡು] ನೀನು ನನಗಾಗಲಿ ನನ್ನ ಪುತ್ರಪೌತ್ರರಿಗಾಗಲಿ ಏನೂ ಅನ್ಯಾಯ ಮಾಡದೆ ನಾನು ನಿನಗೆ ಹಿತವನ್ನು ಮಾಡಿದಂತೆಯೇ ನನಗೂ ನೀನು ಇಳುಕೊಂಡಿರುವ ಈ ದೇಶಕ್ಕೂ ಹಿತವನ್ನು ಮಾಡುವದಾಗಿ ದೇವರ ಮೇಲೆ ಪ್ರಮಾಣಮಾಡಬೇಕೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದ್ದರಿಂದ ನೀನು ನನ್ನೊಡನೆ ಮತ್ತು ನನ್ನ ಮಕ್ಕಳೊಡನೆ ನ್ಯಾಯವಾಗಿ ನಡೆದುಕೊಳ್ಳುವುದಾಗಿ ದೇವರ ಮೇಲೆ ಪ್ರಮಾಣಮಾಡು. ನನಗೂ ಮತ್ತು ನೀನು ವಾಸಿಸುತ್ತಿರುವ ಈ ನಾಡಿಗೂ ದಯೆತೋರುವುದಾಗಿ ನೀನು ಪ್ರಮಾಣಮಾಡು. ನಾನು ನಿನಗೆ ದಯೆತೋರಿದಂತೆ ನೀನೂ ನನಗೆ ದಯೆತೋರುವುದಾಗಿ ಪ್ರಮಾಣಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದ್ದರಿಂದ ನೀನು ನನಗೂ, ನನ್ನ ಮಗನಿಗೂ, ನನ್ನ ಮೊಮ್ಮಗನಿಗೂ ವಂಚನೆ ಮಾಡುವುದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣಮಾಡು. ನಾನು ನಿನಗೆ ಒಳ್ಳೆಯದನ್ನೇ ಮಾಡಿದ ಪ್ರಕಾರ, ನೀನು ನನಗೂ, ನೀನು ವಾಸಮಾಡುತ್ತಿರುವ ಈ ದೇಶಕ್ಕೂ ಒಳ್ಳೆಯದನ್ನೇ ಮಾಡಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:23
19 ತಿಳಿವುಗಳ ಹೋಲಿಕೆ  

ಆದುದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತನ್ನು ಕೊಡಬೇಕು. ನಾನು ನಿಮಗೆ ದಯೆ ತೋರಿದಂತೆ ನೀವೂ ನನ್ನ ತಂದೆಯ ಮನೆಯವರಿಗೆ ದಯೆ ತೋರಬೇಕು.


ಆಗ ಅಬೀಮೆಲೆಕನು ಅಬ್ರಹಾಮನಿಗೆ ದನಕುರಿಗಳನ್ನೂ ದಾಸದಾಸಿಯರನ್ನೂ ಕೊಟ್ಟು ಅವನ ಹೆಂಡತಿ ಸಾರಳನ್ನು ಅವನಿಗೆ ಒಪ್ಪಿಸಿದನು.


ಮನುಷ್ಯರು ತಮಗಿಂತಲೂ ಹೆಚ್ಚಿನವರ ಮೇಲೆ ಆಣೆಯಿಡುವುದು ವಾಡಿಕೆ. ಹೀಗೆ ಆಣೆಯಿಟ್ಟು ಪ್ರಮಾಣಮಾಡಿದರೆ ಎಲ್ಲ ವಿವಾದಗಳು ಕೊನೆಗೊಳ್ಳುತ್ತವೆ.


ನಿಮಗೆ ತೊಂದರೆ ಆಗಬಾರದೆಂದು ನಾನು ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.


‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”


ಅನಂತರ ದಾವೀದನು, “ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯಾ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ನನ್ನ ಯಜಮಾನನ ಕೈಗೆ ಒಪ್ಪಿಸುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣಮಾಡಿದರೆ ನಿನ್ನನ್ನು, ಆ ಗುಂಪಿನವರ ಬಳಿಗೆ ಕರೆದುಕೊಂಡು ಹೋಗುವೆನು,” ಎಂದನು.


ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು; ನಾವು ಸರ್ವೇಶ್ವರನ ಹೆಸರಿನಲ್ಲಿ ಆಣೆಯಿಟ್ಟು ಒಪ್ಪಂದಮಾಡಿಕೊಂಡಿದ್ದೇವಲ್ಲವೆ? ಅವರೇ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಂಬಂಧಸಾಕ್ಷಿಯಾಗಿರಲಿ,” ಎಂದು ಹೇಳಿದನು. ಬಳಿಕ ದಾವೀದನು ಹೊರಟುಹೋದನು. ಇತ್ತ ಯೋನಾತಾನನು ಊರಿಗೆ ಹಿಂದಿರುಗಿದನು.


ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಾ ಇದ್ದುದರಿಂದ, ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣಮಾಡಿಸಿದನು.


ನನ್ನ ತಂದೆ ನಿನಗೆ ಕೇಡುಮಾಡಲು ಮನಸ್ಸುಮಾಡಿದ್ದಾರೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ ನೀನು ತಪ್ಪಿಸಿಕೊಂಡು ಸುರಕ್ಷಿತನಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ, ಸರ್ವೇಶ್ವರ ನನಗೆ ಏನು ಬೇಕಾದರೂ ಮಾಡಲಿ. ಅವರು ನನ್ನ ತಂದೆಯೊಂದಿಗೆ ಇದ್ದಹಾಗೆ ನಿನ್ನೊಂದಿಗೂ ಇರಲಿ.


ನಿನ್ನ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರು; ಅವರಿಗೇ ಸೇವೆಮಾಡು; ಅವರ ಹೆಸರು ಹೇಳಿ ಪ್ರಮಾಣಮಾಡು.


ಅಬ್ರಹಾಮನ ದೇವರು. ನಾಹೋರನ ದೇವರು, ಅವರ ತಂದೆಗಳ ದೇವರು ನಿನಗೂ ನನಗೂ ನ್ಯಾಯ ತೀರಿಸಲಿ,” ಎಂದನು. ಅದೇ ಮೇರೆಗೆ ಯಕೋಬನು, ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.


ಬಾ, ನಾನೂ ನೀನೂ ಒಂದು ಒಪ್ಪಂದ ಮಾಡಿಕೊಳ್ಳೋಣ; ಅದು ನನಗೂ ನಿನಗೂ ಸಾಕ್ಷಿಯಾಗಿರಲಿ,” ಎಂದು ಹೇಳಿದನು.


ಅದಕ್ಕೆ ಅವರು, “ಸರ್ವೇಶ್ವರ ನಿನ್ನ ಸಂಗಡ ಇದ್ದಾರೆಂಬುದು ನಮಗೆ ಚೆನ್ನಾಗಿ ಕಂಡುಬಂದಿದೆ. ನೀನೂ ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾದ ಒಪ್ಪಂದ ಮಾಡಿಕೊಳ್ಳಬೇಕೆಂದು ತೀರ್ಮಾನಿಸಿದ್ದೇವೆ.


“ನನ್ನ ಮಗ ಇಸಾಕನಿಗೆ ಹೆಣ್ಣನ್ನು ನಾನು ವಾಸಮಾಡುತ್ತಿರುವ ಕಾನಾನ್ಯರಿಂದ ತರಬಾರದು;


ಅದಕ್ಕೆ ಅಬ್ರಹಾಮನು, “ಹಾಗೆಯೇ ಪ್ರಮಾಣಮಾಡುತ್ತೇನೆ,” ಎಂದನು.


ಆಗ ಯಕೋಬನು ಆ ಹಾಸಿಗೆಯ ತಲೆಭಾಗದ ಕಡೆ ಬಾಗಿ ಸ್ತೋತ್ರ ಮಾಡಿದನು.


ಜೋಸೆಫನ ಸಂಗಡ ಸರ್ವೇಶ್ವರ ಇದ್ದು ಅವನು ಮಾಡುವ ಕೆಲಸವನ್ನೆಲ್ಲ ಫಲಕಾರಿಯಾಗಿ ಮಾಡುತ್ತಾರೆಂಬುದು ಅವನ ದಣಿಗೆ ತಿಳಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು