Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:20 - ಕನ್ನಡ ಸತ್ಯವೇದವು C.L. Bible (BSI)

20 ಕೆಲವು ಕಾಲವಾದ ಮೇಲೆ ಅಬ್ರಹಾಮನಿಗೆ ತನ್ನ ತಮ್ಮನಾದ ನಾಹೋರನಿಗೆ ಮಿಲ್ಕಳಿಂದ ಮಕ್ಕಳಾದುವೆಂಬ ಸಮಾಚಾರ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಬ್ರಹಾಮನು ತನ್ನ ತಮ್ಮನಾದ ನಾಹೋರನಿಗೆ ಮಿಲ್ಕಳಲ್ಲಿ ಮಕ್ಕಳು ಹುಟ್ಟಿದ್ದಾರೆ ಎಂಬ ವರ್ತಮಾನವನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇವುಗಳಾದ ಮೇಲೆ ಅಬ್ರಹಾಮನು ತನ್ನ ತಮ್ಮನಾದ ನಾಹೋರನಿಗೆ ವಿುಲ್ಕಳಲ್ಲಿ ಮಕ್ಕಳು ಹುಟ್ಟಿದರೆಂದು ವರ್ತಮಾನವನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಈ ಸಂಗತಿಗಳೆಲ್ಲ ನಡೆದ ಮೇಲೆ ಅಬ್ರಹಾಮನಿಗೆ ಒಂದು ಸಂದೇಶ ಬಂದಿತು. ಆ ಸಂದೇಶವು ಹೀಗಿತ್ತು: “ನಿನ್ನ ತಮ್ಮನಾದ ನಾಹೋರ ಮತ್ತು ಅವನ ಹೆಂಡತಿಯಾದ ಮಿಲ್ಕ ಈಗ ಮಕ್ಕಳನ್ನು ಹೊಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕೆಲ ಸಮಯದ ನಂತರ ಕೆಲವರು ಅಬ್ರಹಾಮನಿಗೆ, “ಮಿಲ್ಕಾಳು ತಾಯಾಗಿದ್ದಾಳೆ. ನಿನ್ನ ಸಹೋದರ ನಾಹೋರನಿಗೆ ಅವಳು ಮಕ್ಕಳನ್ನು ಹೆತ್ತಿದ್ದಾಳೆ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:20
10 ತಿಳಿವುಗಳ ಹೋಲಿಕೆ  

ಅಬ್ರಾಮನು ಮತ್ತು ನಾಹೋರನು ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆ ಹಾರಾನನ ಮಗಳು; ಹಾರಾನನು ಮಿಲ್ಕಳಿಗು ಹಾಗೂ ಇಸ್ಕಳಿಗು ತಂದೆ.


ಅದಕ್ಕೆ ಆಕೆ, “ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು.


ದೂರನಾಡಿನಿಂದ ಬಂದ ಶುಭವರದಿ, ದಣಿದ ಪ್ರಾಣಕ್ಕೆ ತಣ್ಣೀರ ತೃಪ್ತಿ.


ಅಬ್ರಹಾಮನ ದೇವರು. ನಾಹೋರನ ದೇವರು, ಅವರ ತಂದೆಗಳ ದೇವರು ನಿನಗೂ ನನಗೂ ನ್ಯಾಯ ತೀರಿಸಲಿ,” ಎಂದನು. ಅದೇ ಮೇರೆಗೆ ಯಕೋಬನು, ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.


ಆತನು ಹೀಗೆ ಹೇಳಿಕೊಳ್ಳುತ್ತಿರುವಾಗಲೇ ರೆಬೆಕ್ಕಳು ಹೆಗಲ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು. ಆಕೆ, ಅಬ್ರಹಾಮನ ತಮ್ಮನಾದ ನಾಹೋರನಿಗೆ ಹೆಂಡತಿಯಾಗಿದ್ದ ಮಿಲ್ಕಳ ಮಗ ಬೆತೂವೇಲನ ಮಗಳು.


ತರುವಾಯ ಆ ಸೇವಕ ತನ್ನ ಒಡೆಯನ ಒಂಟೆಗಳಲ್ಲಿ ಹತ್ತನ್ನು ಸಿದ್ಧಮಾಡಿಕೊಂಡು, ಅವನ ಆಸ್ತಿಯಿಂದ ಶ್ರೇಷ್ಠವಾದ ಒಡವೆಗಳನ್ನು ತೆಗೆದುಕೊಂಡು ಹೊರಟನು. ಎರಡು ನದಿಗಳ ಮಧ್ಯೆ ಇರುವ ಉತ್ತರ ಮೆಸಪೊಟೇಮಿಯಾ ನಾಡಿಗೆ ಬಂದನು. ಅಲ್ಲಿಂದ ನಾಹೋರನು ವಾಸಿಸಿದ್ದ ಊರನ್ನು ಮುಟ್ಟಿದನು.


ಎಪ್ಪತ್ತು ವರ್ಷದವನಾದ ತೆರಹನಿಗೆ ಅಬ್ರಾಮ, ನಾಹೋರ ಮತ್ತು ಹಾರಾನ ಎಂಬ ಮಕ್ಕಳು ಹುಟ್ಟಿದರು.


ಅವರುಗಳ ಹೆಸರು ಇವು - ಚೊಚ್ಚಲವಾದ ಊಚ್, ಇವನ ತಮ್ಮ ಬೂಚ್, (ಆರಾಮನ ತಂದೆಯಾದ) ಕೆಮೂವೇಲ್,


ತೆರಹನ ವಂಶವೃಕ್ಷ: ತೆರಹನಿಗೆ ಅಬ್ರಾಮ, ನಾಹೋರ, ಹಾರಾನ ಇವರು ಹುಟ್ಟಿದರು. ಹಾರಾನನಿಗೆ ಲೋಟನು ಹುಟ್ಟಿದನು.


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು