Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:13 - ಕನ್ನಡ ಸತ್ಯವೇದವು C.L. Bible (BSI)

13 ಅವರೆಲ್ಲರ ಮುಂದೆ ಎಫ್ರೋನನನ್ನು ಉದ್ದೇಶಿಸಿ, “ಕೊಡಲು ಇಷ್ಟವಿದ್ದರೆ ದಯವಿಟ್ಟು ನಾನು ಅರಿಕೆ ಮಾಡುವುದನ್ನು ಕೇಳು; ಆ ಜಮೀನಿಗೆ ಕ್ರಯ ಕೊಡುತ್ತೇನೆ; ಆ ಕ್ರಯವನ್ನು ತೆಗೆದುಕೊಳ್ಳಲು ಸಮ್ಮತಿಸಿದರೆ ನನ್ನ ಪತ್ನಿಯನ್ನು ಅಲ್ಲಿ ಸಮಾಧಿ ಮಾಡುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಫ್ರೋನನಿಗೆ, “ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವುದನ್ನು ಕೇಳು; ಆ ಭೂಮಿಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿ ಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವದನ್ನು ಕೇಳು; ಆ ಭೂವಿುಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿಮಾಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಬ್ರಹಾಮನು ಜನರೆಲ್ಲರ ಎದುರಿನಲ್ಲಿ ಎಫ್ರೋನನಿಗೆ, “ಆ ಸ್ಥಳಕ್ಕಾಗುವ ಪೂರ್ತಿ ಬೆಲೆಯನ್ನು ನಾನು ನಿನಗೆ ಕೊಡುತ್ತೇನೆ; ನೀನು ಹಣವನ್ನು ತೆಗೆದುಕೊಳ್ಳುವುದಾದರೆ, ನನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇಶದ ಜನರು ಕೇಳುವಂತೆ ಎಫ್ರೋನನಿಗೆ, “ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು. ನಾನು ಹೊಲದ ಕ್ರಯವನ್ನು ಕೊಡುತ್ತೇನೆ. ಅದನ್ನು ನನ್ನಿಂದ ತೆಗೆದುಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಳಿಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:13
10 ತಿಳಿವುಗಳ ಹೋಲಿಕೆ  

ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ನೆರೆಯವರ ವಿಷಯದಲ್ಲಿ ಜಾಣತನದಿಂದ ವರ್ತಿಸಿರಿ. ನಿಮಗಿರುವ ಸಮಯ ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳಿರಿ.


ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ವಿಧವಾದ ಋಣವೂ ನಿಮಗಿರಬಾರದು. ಏಕೆಂದರೆ ಪರರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನು ಪೂರ್ಣವಾಗಿ ನೆರವೇರಿಸಿದವನು.


ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”


ಅರಸರು ಅರೌನನಿಗೆ, “ಹಾಗಲ್ಲ, ನಾನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಸರ್ವೇಶ್ವರನಿಗೆ ಸುಮ್ಮನೆ ಸಿಕ್ಕಿದ್ದನ್ನು ಬಲಿದಾನವಾಗಿ ಅರ್ಪಿಸಲೊಲ್ಲೆನು,” ಎಂದು ಹೇಳಿ ಆ ಕಣವನ್ನೂ ಹೋರಿಗಳನ್ನೂ ಐವತ್ತು ಬೆಳ್ಳಿ ನಾಣ್ಯಕ್ಕೆ ಕೊಂಡುಕೊಂಡನು.


ಅಬ್ರಹಾಮನು ಆ ನಾಡಿಗರಿಗೆ ಬಾಗಿ ವಂದಿಸಿದನು.


ಅದಕ್ಕೆ ಎಫ್ರೋನನು, “ಒಡೆಯಾ, ನನ್ನ ಮಾತನ್ನು ಆಲಿಸು; ಕೇವಲ ನಾನೂರು ಬೆಳ್ಳಿ ನಾಣ್ಯ ಬಾಳುವ ಆ ಜಮೀನಿನ ವಿಷಯದಲ್ಲಿ ನಿಮಗೂ ನನಗೂ ವಾದವೇತಕ್ಕೆ? ಸಮಾಧಿ ಮಾಡಬಹುದು,” ಎಂದನು.


ಗುಡಾರ ಹಾಕಿಸಿದ ಭೂಮಿಯನ್ನು, ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಗೆ ನೂರು ವರಹಗಳನ್ನು ಕೊಟ್ಟು ಅವರಿಂದ ಕೊಂಡುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು