Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:19 - ಕನ್ನಡ ಸತ್ಯವೇದವು C.L. Bible (BSI)

19 ಇದಾದ ಮೇಲೆ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಜಮೀನಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್ ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂಮಿಯಲ್ಲಿರುವ ಗವಿಯೊಳಗೆ ಹೂಣಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್‍ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂವಿುಯಲ್ಲಿರುವ ಗವಿಯೊಳಗೆ ಹೂಣಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬಳಿಕ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳನ್ನು ಮಮ್ರೆಗೆ ಸಮೀಪದಲ್ಲಿದ್ದ ಜಮೀನಿನ ಗವಿಯಲ್ಲಿ ಸಮಾಧಿಮಾಡಿದನು. (ಅದು ಕಾನಾನ್ ದೇಶದ ಹೆಬ್ರೋನ್).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಳಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:19
14 ತಿಳಿವುಗಳ ಹೋಲಿಕೆ  

ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ದಾರಿಯಲ್ಲಿ ನಡೆವುದು ಅಪಾಯಕರವಾಗಿರುವುದು; ಹೂಬಿಟ್ಟ ಬಾದಾಮಿ ಮರದಂತೆ ತಲೆಗೂದಲು ನರೆತುಬಿಡುವುದು, ಮಿಡತೆಯು ಕೂಡ ಭಾರವಾಗುವುದು; ಆಸೆ ಕುಂದಿಹೋಗುವುದು. ನಿನ್ನ ನಿತ್ಯಗೃಹಕ್ಕೆ ತೆರಳಿರುವೆ, ಗೋಳಾಟದವರು ಬೀದಿಯಲ್ಲಿ ಕಾಣಿಸಿಕೊಳ್ಳುವರು.


ಒಬ್ಬನು ನೂರಾರು ಮಕ್ಕಳನ್ನು ಪಡೆಯಬಹುದು, ಹಣ್ಣುಹಣ್ಣು ಮುದುಕನಾಗುವ ತನಕ ಬದುಕಬಹುದು. ಆದರೆ ಜೀವನದಲ್ಲಿ ಸುಖಾನುಭವ ಇಲ್ಲದೆ, ಉತ್ತರಕ್ರಿಯೆಯೂ ಇಲ್ಲದೆಹೋದರೆ ಏನು ಪ್ರಯೋಜನ? ಅವನಿಗಿಂತ ಗರ್ಭಸ್ರಾವದ ಪಿಂಡವೇ ಮೇಲು ಎಂದುಕೊಂಡೆ.


ನನ್ನನು ಮರಣಕ್ಕೆ ಗುರಿಮಾಡುವೆಯೆಂದು ತಿಳಿದಿದೆ ಸಮಸ್ತಜೀವಿಗಳು ತೆರಳುವ ಮಂದಿರಕ್ಕೆ ಸೇರಿಸುವೆಯೆಂದು ಗೊತ್ತೇ ಇದೆ.


ಇದೂ ಅಲ್ಲದೆ ಜೋಸೆಫನು ಆ ಇಸ್ರಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಕಾಪಾಡಲು ಬರುವರು; ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು,” ಎಂದು ಹೇಳಿ, “ಹಾಗೆಯೇ ಮಾಡುತ್ತೇನೆ,” ಎಂಬುದಾಗಿ ಅವರಿಂದ ಪ್ರಮಾಣ ಮಾಡಿಸಿದನು.


ಅವನ ಶವವನ್ನು ಕಾನಾನ್ ನಾಡಿಗೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲು ಇರುವ ಭೂಮಿ ಸಮೇತ, ಸ್ವಂತ ಸ್ಮಶಾನಭೂಮಿಗಾಗಿ ಕೊಂಡುಕೊಂಡಿದ್ದನು.


ನಾನು ಮೃತರಾದ ಪಿತೃಗಳೊಂದಿಗೆ ಸೇರಿಕೊಂಡಾಗ, ನನ್ನ ಶವವನ್ನು ಈಜಿಪ್ಟ್ ದೇಶದಿಂದ ತೆಗೆದುಕೊಂಡು ಹೋಗಿ, ಆ ಪಿತೃಗಳ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಬೇಕು. ಹಾಗೆ ಮಾಡುತ್ತೇನೆಂದು ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಪ್ರಮಾಣ ಮಾಡಬೇಕು" ಎಂದು ಕೇಳಿಕೊಂಡನು. ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ,” ಎಂದು ಪ್ರಮಾಣ ಮಾಡಿದನು.


ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."


ಅಬ್ರಹಾಮನಿಗೆ ಸ್ವಂತವೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆಯೇ ತೀರ್ಮಾನವಾಯಿತು.


ಆ ಜಮೀನನ್ನೂ ಅದರಲ್ಲಿರುವ ಗವಿಯನ್ನೂ ಅಬ್ರಹಾಮನಿಗೆ ಸ್ವಂತ ಸ್ಮಶಾನಭೂಮಿಯಾಗಲೆಂದು ಸ್ವಾಧೀನಗೊಳಿಸಿದವರು ಆ ಹಿತ್ತಿಯರೇ.


ಅವನು, “ಇಗೋ ಸಿದ್ಧನಿದ್ದೇನೆ,” ಎಂದ. ಯಕೋಬನು ಅವನಿಗೆ, "ನೀನು ಹೋಗಿ ನಿನ್ನ ಅಣ್ಣಂದಿರ ಹಾಗೂ ಆಡುಕುರಿಗಳ ಯೋಗಕ್ಷೇಮವನ್ನು ವಿಚಾರಿಸಿಕೊಂಡು ಬಾ,” ಎಂದು ಅಪ್ಪಣೆಕೊಟ್ಟು ಅವನನ್ನು ಹೆಬ್ರೋನ್ ಕಣಿವೆಯಿಂದ ಕಳಿಸಿಕೊಟ್ಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು