Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:20 - ಕನ್ನಡ ಸತ್ಯವೇದವು C.L. Bible (BSI)

20 ಆ ಜಮೀನನ್ನೂ ಅದರಲ್ಲಿರುವ ಗವಿಯನ್ನೂ ಅಬ್ರಹಾಮನಿಗೆ ಸ್ವಂತ ಸ್ಮಶಾನಭೂಮಿಯಾಗಲೆಂದು ಸ್ವಾಧೀನಗೊಳಿಸಿದವರು ಆ ಹಿತ್ತಿಯರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹಿತ್ತಿಯರು ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ಸ್ವಂತವಾದ ಸ್ಮಶಾನ ಭೂಮಿಯನ್ನಾಗಿ ಅಬ್ರಹಾಮನಿಗೆ ಕೊಟ್ಟು ದೃಢಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹಿತ್ತಿಯರು ಆ ಭೂವಿುಯನ್ನೂ ಅದರಲ್ಲಿರುವ ಗವಿಯನ್ನೂ ಸ್ವಂತವಾದ ಶ್ಮಶಾನಭೂವಿುಯಾಗುವದಕ್ಕೆ ಅಬ್ರಹಾಮನಿಗೆ ಕೊಟ್ಟು ನಿರ್ಣಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಬ್ರಹಾಮನು ಆ ಜಮೀನನ್ನು ಮತ್ತು ಅದರಲ್ಲಿದ್ದ ಗವಿಯನ್ನು ಹಿತ್ತಿಯರಿಂದ ಕೊಂಡುಕೊಂಡನು. ಅದು ಅವನ ಆಸ್ತಿಯಾಯಿತು. ಅವನು ಅದನ್ನು ಸಮಾಧಿ ಸ್ಥಳವನ್ನಾಗಿ ಉಪಯೋಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆ ಹೊಲವೂ, ಅದರಲ್ಲಿರುವ ಗವಿಯೂ ಹಿತ್ತಿಯರಿಂದ ಅಬ್ರಹಾಮನಿಗೆ ಸ್ವಂತ ಸಮಾಧಿ ಎಂದು ಸ್ಥಿರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:20
14 ತಿಳಿವುಗಳ ಹೋಲಿಕೆ  

ಅವನು ಸತ್ತು ಪಿತೃಗಳ ಬಳಿ ಸೇರಿದಾಗ ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಮೋನನು ಅರಸನಾದನು.


ಅರಸರು ಅರೌನನಿಗೆ, “ಹಾಗಲ್ಲ, ನಾನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಸರ್ವೇಶ್ವರನಿಗೆ ಸುಮ್ಮನೆ ಸಿಕ್ಕಿದ್ದನ್ನು ಬಲಿದಾನವಾಗಿ ಅರ್ಪಿಸಲೊಲ್ಲೆನು,” ಎಂದು ಹೇಳಿ ಆ ಕಣವನ್ನೂ ಹೋರಿಗಳನ್ನೂ ಐವತ್ತು ಬೆಳ್ಳಿ ನಾಣ್ಯಕ್ಕೆ ಕೊಂಡುಕೊಂಡನು.


ಅವನ ಶವವನ್ನು ಕಾನಾನ್ ನಾಡಿಗೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲು ಇರುವ ಭೂಮಿ ಸಮೇತ, ಸ್ವಂತ ಸ್ಮಶಾನಭೂಮಿಗಾಗಿ ಕೊಂಡುಕೊಂಡಿದ್ದನು.


ನನ್ನ ತಂದೆಯವರು ತಾವು ಕಾನಾನ್ ನಾಡಿನಲ್ಲಿ ಸಿದ್ಧಮಾಡಿಕೊಂಡಿರುವ ಸ್ಥಳದಲ್ಲಿಯೇ ತಮಗೆ ಸಮಾಧಿಮಾಡಬೇಕೆಂದು ಸಾಯುವುದಕ್ಕೆ ಮೊದಲೇ ನನ್ನಿಂದ ಪ್ರಮಾಣ ಮಾಡಿಸಿದರು. ಆದ್ದರಿಂದ ನಾನು ಹೋಗಿ ತಂದೆಯನ್ನು ಸಮಾಧಿಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ವಿನಂತಿಸುತ್ತಿದ್ದೇನೆ,” ಎಂದನು.


ಅವನ ಮಕ್ಕಳಾದ ಇಸಾಕ್ - ಇಷ್ಮಾಯೇಲರು ಅವನನ್ನು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಹೊಲದಲ್ಲಿದ್ದ ಮಕ್ಪೇಲದ ಗವಿಯಲ್ಲಿ ಸಮಾಧಿಮಾಡಿದರು. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿದೆ.


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತ್ ಹುಟ್ಟಿದನು.


“ನಿಮ್ಮ ಮಧ್ಯೆ ನಾನೊಬ್ಬ ಹೊರನಾಡಿಗ, ಒಬ್ಬ ಪ್ರವಾಸಿ, ಮೃತಳಾಗಿರುವ ನನ್ನ ಪತ್ನಿಯನ್ನು ಸಮಾಧಿ ಮಾಡಲು ಸ್ವಲ್ಪ ಜಮೀನನ್ನು ನನ್ನ ಸ್ವಂತಕ್ಕೆ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ,” ಎಂದನು.


ಇದಾದ ಮೇಲೆ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಜಮೀನಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದನು.


ಅಬ್ರಹಾಮನೇ ಹಿತ್ತಿಯರಿಂದ ಕೊಂಡುಕೊಂಡ ಹೊಲ ಅದು. ಅದರಲ್ಲೇ ಅವನಿಗೂ ಅವನ ಹೆಂಡತಿ ಸಾರಳಿಗೂ ಸಮಾಧಿ ಆಯಿತು.


ಯಕೋಬನು ತನ್ನ ಮಕ್ಕಳಿಗೆ ಕೊಟ್ಟ ಆಜ್ಞೆ ಇದು: “ನಾನು ನನ್ನ ದಿವಂಗತ ಪೂರ್ವಜರನ್ನು ಸೇರುವ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ, ಪಿತೃಗಳ ಬಳಿಯಲ್ಲಿ ನನ್ನನ್ನು ಸಮಾಧಿಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು