Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:11 - ಕನ್ನಡ ಸತ್ಯವೇದವು C.L. Bible (BSI)

11 ಸಂಜೆ, ಹೆಣ್ಣುಮಕ್ಕಳು ನೀರು ಹೊರುವುದಕ್ಕೆ ಬರುವ ವೇಳೆಗೆ, ಅವನು ಊರ ಹೊರಗಡೆ ಬಾವಿಯ ಬಳಿ ಒಂಟೆಗಳನ್ನು ಮಲಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸಾಯಂಕಾಲದಲ್ಲಿ ಸ್ತ್ರೀಯರು ನೀರು ತರುವುದಕ್ಕೆ ಹೋಗುವಾಗ ಅವನು ಊರಿನ ಹೊರಗಡೆ ಬಾವಿಯ ಹತ್ತಿರ ಒಂಟೆಗಳನ್ನು ಮಲಗಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸಾಯಂಕಾಲದಲ್ಲಿ ಸ್ತ್ರೀಯರು ನೀರುತರುವದಕ್ಕೆ ಹೋಗುವಾಗ ಅವನು ಊರಿನ ಹೊರಗಡೆ ಬಾವಿಯ ಹತ್ತಿರ ಒಂಟೆಗಳನ್ನು ಮಲಗಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವನು ಊರ ಹೊರಗಿದ್ದ ಬಾವಿಯ ಬಳಿಯಲ್ಲಿ ಒಂಟೆಗಳನ್ನು ಮಲಗಿಸಿದನು; ಪ್ರತಿಸಾಯಂಕಾಲ ಸ್ತ್ರೀಯರು ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ಆ ಬಾವಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಸ್ತ್ರೀಯರು ನೀರು ತರಲು ಬರುವ ಸಂಜೆಯ ಸಮಯವಾಗಿತ್ತು. ಅವನು ಪಟ್ಟಣದ ಹೊರಗೆ ನೀರಿನ ಬಾವಿಯ ಬಳಿಯಲ್ಲಿ ಒಂಟೆಗಳನ್ನು ಮಲಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:11
10 ತಿಳಿವುಗಳ ಹೋಲಿಕೆ  

ಅವರಿಬ್ಬರೂ ಗುಡ್ಡ ಹತ್ತಿ ದೇವಪುರುಷನಿದ್ದ ಪಟ್ಟಣವನ್ನು ಸಮೀಪಿಸಿದರು. ನೀರು ಸೇದುವುದಕ್ಕಾಗಿ ಹೊರಗೆ ಬಂದಿದ್ದ ಮಹಿಳೆಯರನ್ನು ಕಂಡು, “ದಾರ್ಶನಿಕರು ಊರಲ್ಲಿ ಇದ್ದಾರೋ?” ಎಂದು ಕೇಳಲು, ಅವರು “ಹೌದು” ಎಂದರು.


ಒಬ್ಬ ಸಮಾರಿಯದ ಮಹಿಳೆ ನೀರು ಸೇದಲು ಅಲ್ಲಿಗೆ ಬಂದಳು. ಆಗ ಯೇಸು, “ಕುಡಿಯಲು ಕೊಂಚ ನೀರು ಕೊಡು,” ಎಂದು ಕೇಳಿದರು.


ಒಂದು ದಿನ ಮೋಶೆ ಆ ನಾಡಿನ ಬಾವಿಯೊಂದರ ಬಳಿ ಕುಳಿತಿದ್ದನು. ಮಿದ್ಯಾನರ ಪೂಜಾರಿಯ ಏಳು ಮಂದಿ ಹೆಣ್ಣು ಮಕ್ಕಳು ಅಲ್ಲಿಗೆ ಬಂದರು. ತಮ್ಮ ತಂದೆಯ ಕುರಿಗಳಿಗೆ ನೀರು ಕುಡಿಸುವುದಕ್ಕಾಗಿ ನೀರು ಸೇದಿ ತೊಟ್ಟಿಗಳಲ್ಲಿ ತುಂಬುತ್ತಿದ್ದರು.


ಒಳ್ಳೆಯವನು ದನಕರುಗಳಿಗೂ ದಯೆ ತೋರುವನು; ಕೆಟ್ಟವನು ತೋರುವ ಕರುಣೆಯು ಕ್ರೂರತನವಾಗುವುದು.


“ನಾನು ಇಂದು ಈ ಊರಿನ ಬುಗ್ಗೆಯ ಬಳಿಗೆ ಬಂದೆ. ‘ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರಾ, ಇಗೋ, ನೀರಿನ ಬುಗ್ಗೆಯ ಬಳಿಯಲ್ಲೇ ನಿಂತಿದ್ದೇನೆ. ನೀವು ನನ್ನ ಪ್ರಯಾಣವನ್ನು ಸಫಲ ಮಾಡಿದ್ದಾದರೆ


ಕೂಡಲೆ ಅವನಿಗೆ ಆ ಅಡವಿಯಲ್ಲಿ ಬಾವಿಯೊಂದು ಕಾಣಿಸಿತು. ಅದರ ಬಳಿ ಮೂರು ಕುರಿಹಿಂಡು ಮಲಗಿದ್ದವು. ಕುರಿಗಳನ್ನು ನೀರು ಕುಡಿಸುವುದಕ್ಕಾಗಿ ಆ ಬಾವಿಗೆ ಹೊಡೆದುಕೊಂಡು ಬರುವುದು ವಾಡಿಕೆ. ಬಾವಿಯ ಮೇಲೆ ಮುಚ್ಚಿದ್ದ ಕಲ್ಲು ದೊಡ್ಡದಾಗಿತ್ತು.


ನಡೆದ ಸಂಗತಿ ಫರೋಹನಿಗೆ ಮುಟ್ಟಿತು. ಅವನು ಮೋಶೆಯನ್ನು ಕೊಲ್ಲಿಸಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆ ಫರೋಹನ ಬಳಿಯಿಂದ ಪಲಾಯನಗೈದು ಮಿದ್ಯಾನ್ ನಾಡನ್ನು ಸೇರಿದನು.


ಸೇದುವ ಬಾವಿಗಳ ಬಳಿ ಕುಳಿತು ಕೊಳ್ಳೆಹಂಚಿಕೊಳ್ಳುವವರ ಧ್ವನಿಯನಾಲಿಸು! ವರ್ಣಿಸುತಿಹರವರು ಸರ್ವೇಶ್ವರ ಸಾಧಿಸಿದ ನೀತಿಯನು, ತನ್ನ ಪ್ರಜೆ ಇಸ್ರಯೇಲ್ ಊರುಗಳಲ್ಲಾತನು ಸ್ಥಾಪಿಸಿದ ನ್ಯಾಯವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು