Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:14 - ಕನ್ನಡ ಸತ್ಯವೇದವು C.L. Bible (BSI)

14 ನಾನು ಯಾವ ಹುಡುಗಿ಼ಗೆ ‘ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ಕುಡಿಯುವುದಕ್ಕೆ ಕೊಡು’ ಎಂದು ಹೇಳುವಾಗ ‘ನೀನೂ ಕುಡಿ, ನಿನ್ನ ಒಂಟೆಗಳಿಗೂ ಕುಡಿಯ ಕೊಡುತ್ತೇನೆ’ ಎನ್ನುತ್ತಾಳೋ ಅವಳೇ ನಿಮ್ಮ ದಾಸ ಇಸಾಕನಿಗೆ ನೀವು ಚುನಾಯಿಸಿರುವ ಕನ್ಯೆಯಾಗಲಿ. ನನ್ನೊಡೆಯನ ಮೇಲೆ ನಿಮ್ಮ ದಯೆಯಿದೆ ಎಂದು ಇದರಿಂದ ಗೊತ್ತಾಗುವುದು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಯಾವ ಹುಡುಗಿಗೆ, ‘ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಹೇಳುವಾಗ, ‘ನೀನು ಕುಡಿಯಬಹುದು ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇಮಿಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯೆಯಿದೆ ಎಂದು ಇದರಿಂದ ನನಗೆ ಗೊತ್ತಾಗುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಯಾವ ಹುಡುಗಿಗೆ - ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವದಕ್ಕೆ ಕೊಡು ಎಂದು ಹೇಳುವಾಗ - ನೀನು ಕುಡಿಯಬಹುದು, ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ ಅನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇವಿುಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯವದೆ ಎಂದು ಇದರಿಂದ ನನಗೆ ಗೊತ್ತಾಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇಸಾಕನಿಗೆ ಯೋಗ್ಯಳಾದ ಕನ್ಯೆಯನ್ನು ಕಂಡುಕೊಳ್ಳಲು ನಾನು ಒಬ್ಬಳಿಗೆ, ‘ದಯವಿಟ್ಟು ನಿನ್ನ ಕೊಡವನ್ನು ಕೆಳಗಿಳಿಸಿ ಕುಡಿಯಲು ನೀರು ಕೊಡು’ ಎನ್ನುವೆ. ಆಕೆ ನನಗೆ, ‘ನೀನೂ ಕುಡಿ, ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎಂದರೆ ಆಕೆಯೇ ನಿನ್ನಿಂದ ಆಯ್ಕೆಗೊಂಡ ಯೋಗ್ಯ ಕನ್ಯೆಯೆಂದೂ ನೀನು ನನ್ನ ಒಡೆಯನಿಗೆ ಕರುಣೆ ತೋರಿದೆಯೆಂದೂ ನಾನು ತಿಳಿದುಕೊಳ್ಳುವೆ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ಯಾವ ಹುಡುಗಿಗೆ, ‘ನೀರು ಕುಡಿಯುವ ಹಾಗೆ ನಿನ್ನ ಕೊಡವನ್ನು ಇಳಿಸು,’ ಎಂದು ಕೇಳಿಕೊಂಡಾಗ, ‘ನೀನೂ ಕುಡಿ, ನಿನ್ನ ಒಂಟೆಗಳಿಗೆ ಸಹ ಕುಡಿಯುವುದಕ್ಕೆ ಕೊಡುತ್ತೇನೆ,’ ಎಂದು ಹೇಳುವಳೋ, ಆಕೆಯನ್ನೇ ನೀವು ನಿಮ್ಮ ಸೇವಕನಾದ ಇಸಾಕನಿಗೆ ನೇಮಕ ಮಾಡಿದ್ದೀರಿ ಮತ್ತು ಯಜಮಾನನಿಗೆ ದಯೆ ತೋರಿಸಿದ್ದೀರಿ, ಎಂದು ಇದರಿಂದ ನಾನು ತಿಳಿದುಕೊಳ್ಳುವೆನು,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:14
22 ತಿಳಿವುಗಳ ಹೋಲಿಕೆ  

ಇಗೋ, ಕಣದಲ್ಲಿ ಕುರಿಯ ತುಪ್ಪಟವನ್ನು ಇಡುತ್ತೇನೆ; ಅದರಲ್ಲಿ ಮಾತ್ರ ಮಂಜು ಬಿದ್ದು ನೆಲವೆಲ್ಲಾ ಒಣಗಿದ್ದರೆ ನೀವು ಹೇಳಿದಂತೆಯೇ ಇಸ್ರಯೇಲರನ್ನು ನನ್ನ ಮುಖಾಂತರ ರಕ್ಷಿಸುವಿರೆಂದು ತಿಳಿಯುವೆನು,” ಎಂದು ವಿಜ್ಞಾಪಿಸಿದನು.


ಗಿದ್ಯೋನನು: “ಸ್ವಾಮೀ, ದಯವಿರಲಿ; ನನ್ನೊಂದಿಗೆ ಮಾತಾಡುತ್ತಿರುವ ತಾವು ಸ್ವಾಮಿಯವರೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.


ಅದಕ್ಕೆ ಅಬ್ರಾಮನು, “ಸರ್ವೇಶ್ವರಾ, ಇದು ನನ್ನ ಸೊತ್ತು ಎಂದು ತಿಳಿದುಕೊಳ್ಳುವುದು ಹೇಗೆ?” ಎಂದನು.


“ನಿನ್ನ ದೇವರಾದ ಸರ್ವೇಶ್ವರನಿಂದ ಒಂದು ಗುರುತನ್ನು ಕೇಳಿಕೊ. ಅದು ಪಾತಾಳದಷ್ಟು ಆಳದಲ್ಲೇ ಇರಲಿ, ಆಕಾಶದಷ್ಟು ಎತ್ತರದಲ್ಲೇ ಇರಲಿ, ಕೇಳು.” ಎಂದರು.


ಮನೆಮಾರು, ಆಸ್ತಿಪಾಸ್ತಿ ಬರುತ್ತವೆ ಪಿತ್ರಾರ್ಜಿತವಾಗಿ; ವಿವೇಕಿಯಾದ ಹೆಂಡತಿ ಸಿಕ್ಕುವುದು ಸರ್ವೇಶ್ವರನ ಅನುಗ್ರಹವಾಗಿ.


ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಸರ್ವೇಶ್ವರ, ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದರು.


ಆಗ ಅವರು, “ದಯವಿಟ್ಟು ನಮ್ಮ ಪ್ರಯಾಣ ಸಫಲ ಆಗುವುದೋ ಇಲ್ಲವೋ ಎಂಬುದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು,” ಎಂದು ಬೇಡಿಕೊಂಡರು.


ಅವನು ಅಮಾಸನನ್ನು, “ಸಹೋದರಾ, ಕ್ಷೇಮವೇ?” ಎಂದು ಕೇಳಿ ಮುದ್ದಿಡುವುದಕ್ಕೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು, ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯನ್ನು ಇರಿದನು.


ಅವರು ‘ಹಾಗೆಯೇ ಆಗಲಿ’ ಎಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು; ಸಿಟ್ಟುಮಾಡಿದರೆ ಅವರಿಂದ ನನಗೆ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ.


"ಕುಡಿಯಪ್ಪಾ, ಮತ್ತು ನಿನ್ನ ಒಂಟೆಗಳಿಗೂ ನೀರು ತಂದುಕೊಡುತ್ತೇನೆ’ ಎನ್ನುವಳೋ ಅವಳೇ ಸರ್ವೇಶ್ವರ ಸ್ವಾಮಿಯಿಂದ ನನ್ನೊಡೆಯನ ಮಗನಿಗೆ ಚುನಾಯಿತಳಾದ ಕನ್ನಿಕೆಯಾಗಿರಲಿ' ಎಂದೆ,


ಇಗೋ, ನೀರಿನ ಬುಗ್ಗೆಯ ಬಳಿಯಲ್ಲೇ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ.


ಆತನು ಹೀಗೆ ಹೇಳಿಕೊಳ್ಳುತ್ತಿರುವಾಗಲೇ ರೆಬೆಕ್ಕಳು ಹೆಗಲ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು. ಆಕೆ, ಅಬ್ರಹಾಮನ ತಮ್ಮನಾದ ನಾಹೋರನಿಗೆ ಹೆಂಡತಿಯಾಗಿದ್ದ ಮಿಲ್ಕಳ ಮಗ ಬೆತೂವೇಲನ ಮಗಳು.


ಆಕೆ, “ಕುಡಿಯಪ್ಪಾ” ಎಂದು ಹೇಳಿ ಕೂಡಲೆ ಕೊಡವನ್ನು ಕೈಗಿಳಿಸಿ ಕುಡಿಯ ಕೊಟ್ಟಳು.


ಅವನು ಕುಡಿದಾದ ಮೇಲೆ, “ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರು ತಂದುಕೊಡುತ್ತೇನೆ,” ಎಂದು ಹೇಳಿ,


ನೀರಿಗೆ ಬರುವ ಯಾವ ಹುಡುಗಿಗೆ ‘ದಯವಿಟ್ಟು ನಿನ್ನ ಕೊಡದಿಂದ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ನನಗೆ ಕೊಡು’ ಎಂದು ನಾನು ಹೇಳುವಾಗ ಅವಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು