Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:21 - ಕನ್ನಡ ಸತ್ಯವೇದವು C.L. Bible (BSI)

21 ಆ ಮನುಷ್ಯ, ತನ್ನ ಪ್ರಯಾಣವನ್ನು ಸರ್ವೇಶ್ವರ ಸಫಲಗೊಳಿಸಿದರೋ ಇಲ್ಲವೋ ಎಂದು ಯೋಚಿಸುತ್ತಾ ಏನೂ ಮಾತಾಡದೆ ಆಕೆಯನ್ನೇ ದೃಷ್ಟಿಸಿ ನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತನಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ, ಯೆಹೋವನು ತನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವುದಕ್ಕಾಗಿ ಕಾದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ - ಯೆಹೋವನು ನನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವದಕ್ಕಾಗಿ ಕಾದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಸೇವಕನು ಆಕೆಯನ್ನೇ ಗಮನಿಸುತ್ತಾ, ಯೆಹೋವನು ತನ್ನ ಪ್ರಾರ್ಥನೆಗೆ ಉತ್ತರ ಕೊಟ್ಟನೋ ಇಲ್ಲವೋ ಎಂದು ಖಚಿತಪಡಿಸಿಕೊಳ್ಳಲು ಕಾದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಯೆಹೋವ ದೇವರು ತನ್ನ ಪ್ರಯಾಣನ್ನು ಸಫಲ ಮಾಡಿದರೋ ಏನೋ, ಎಂದು ತಿಳಿದುಕೊಳ್ಳುವುದಕ್ಕೆ ಆ ಮನುಷ್ಯನು ಆಕೆಯನ್ನು ಗಮನಿಸುತ್ತಾ, ಆಶ್ಚರ್ಯಪಟ್ಟು ಮೌನವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:21
13 ತಿಳಿವುಗಳ ಹೋಲಿಕೆ  

ಪರ್ಯಾಲೋಚಿಸಲಿವುಗಳನು ಬುದ್ಧಿವಂತರು I ಗ್ರಹಿಸಲಿ ಪ್ರಭುವಿನಚಲ ಪ್ರೀತಿಯನಾ ಜನರು II


“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರಾ, ಈ ದಿನ ನಾನು ಬಂದ ಕಾರ್ಯವನ್ನು ಕೈಗೂಡಿಸಿ, ನನ್ನೊಡೆಯ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಪ್ರಾರ್ಥಸುತ್ತೇನೆ.


ಬಳಿಕ ಯೇಸು ತಂದೆತಾಯಿಗಳೊಡನೆ ನಜರೇತಿಗೆ ಬಂದರು. ಅಲ್ಲಿ ಅವರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದರು. ಈ ವಿಷಯಗಳನ್ನೆಲ್ಲಾ ತಾಯಿ ಮರಿಯಳು ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.


ಮರಿಯಳಾದರೋ ಈ ವಿಷಯಗಳನ್ನೆಲ್ಲಾ ಮನಸ್ಸಿನಲ್ಲಿಯೇ ಇಟ್ಟುಕೊಂಡು ಆಲೋಚಿಸುತ್ತಾ ಬಂದಳು.


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗಾತ ಎಸಗಿದ ಅತಿಶಯಗಳನು II


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗೆ ಆತನೆಸಗಿದ ಅತಿಶಯಗಳನು II


ಕೃತಜ್ಞತೆಯಿಂದ ಸಲ್ಲಿಸಿರಿ ಪ್ರಭುವಿಗೆ ಸ್ತುತಿಯನು I ಆತನ ಪ್ರೀತಿ ಶಾಶ್ವತ, ಆತನು ಒಳ್ಳೆಯವನು II


ಅವನು ಅವರಿಗೆ, “ಸರ್ವೇಶ್ವರ ನನ್ನ ಪ್ರಯಾಣವನ್ನು ಸಫಲಮಾಡಿದ್ದಾರೆ. ನನ್ನನ್ನು ತಡೆಯಬೇಡಿ; ನನ್ನ ಒಡೆಯನ ಬಳಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದನು.


ಕೊಡದ ನೀರನ್ನು ತೊಟ್ಟಿಗೆ ಹೊಯ್ದು ಮತ್ತೆ ನೀರು ತರುವುದಕ್ಕೆ ಬಾವಿಗೆ ಓಡಿದಳು. ಹೀಗೆ ಅವನ ಎಲ್ಲ ಒಂಟೆಗಳಿಗೂ ತಂದುಕೊಟ್ಟಳು.


“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರ ಸ್ವಾಮಿಗೆ ಸ್ತೋತ್ರಸಲ್ಲಲಿ! ಅವರು ನನ್ನೊಡೆಯನ ಮೇಲಿಟ್ಟಿದ್ದ ಅಚಲ ಪ್ರೀತಿ ಪ್ರಾಮಾಣಿಕತೆಯನ್ನು ಕೈಬಿಟ್ಟಿಲ್ಲ. ನನ್ನೊಡೆಯನ ಬಂಧುಬಳಗದವರ ಮನೆಗೆ ನನ್ನನ್ನು ನೆಟ್ಟಗೆ ಕರೆತಂದಿದ್ದಾರೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು