Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:44 - ಕನ್ನಡ ಸತ್ಯವೇದವು C.L. Bible (BSI)

44 "ಕುಡಿಯಪ್ಪಾ, ಮತ್ತು ನಿನ್ನ ಒಂಟೆಗಳಿಗೂ ನೀರು ತಂದುಕೊಡುತ್ತೇನೆ’ ಎನ್ನುವಳೋ ಅವಳೇ ಸರ್ವೇಶ್ವರ ಸ್ವಾಮಿಯಿಂದ ನನ್ನೊಡೆಯನ ಮಗನಿಗೆ ಚುನಾಯಿತಳಾದ ಕನ್ನಿಕೆಯಾಗಿರಲಿ' ಎಂದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ‘ಕುಡಿಯಿರಿ ಮತ್ತು ನಿನ್ನ ಒಂಟೆಗಳಿಗೂ ನೀರು ತಂದು ಕೊಡುತ್ತೇನೆ ಅನ್ನುವಳೋ ಅವಳೇ ಯೆಹೋವನಿಂದ ನನ್ನ ದಣಿಯ ಮಗನಿಗೆ ನೇಮಕವಾದ ಕನ್ಯೆಯಾಗಿರಲಿ’ ಎಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಅವಳು - ಕುಡಿಯಪ್ಪಾ ಮತ್ತು ನಿನ್ನ ಒಂಟೆಗಳಿಗೂ ನೀರು ತಂದುಕೊಡುತ್ತೇನೆ ಅನ್ನುವಳೋ, ಅವಳೇ ಯೆಹೋವನಿಂದ ನನ್ನ ದಣಿಯ ಮಗನಿಗೆ ನೇಮಕವಾದ ಕನ್ನಿಕೆಯಾಗಿರಲಿ ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಅವಳು ನನಗೆ, “ನೀನೂ ನೀರನ್ನು ಕುಡಿ, ನಿನ್ನ ಒಂಟೆಗಳಿಗೂ ನೀರನ್ನು ತಂದುಕೊಡುವೆ” ಎಂದು ಹೇಳಿದರೆ, ನನ್ನ ಒಡೆಯನ ಮಗನಿಗೆ ಯೆಹೋವನು ಆರಿಸಿಕೊಂಡಿರುವ ಕನ್ನಿಕೆ ಇವಳೇ ಎಂಬುದಾಗಿ ತಿಳಿದುಕೊಳ್ಳುವೆ’ ಎಂದು ಪ್ರಾರ್ಥಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಆಕೆಯು ನನಗೆ, “ನೀನೂ ಕುಡಿ, ನಿನ್ನ ಒಂಟೆಗಳಿಗೂ ಸೇದಿ ಹಾಕುತ್ತೇನೆ,” ಎಂದು ನನಗೆ ಹೇಳಿದರೆ, ಆಕೆಯೇ ಯೆಹೋವ ದೇವರಿಂದ ನನ್ನ ಯಜಮಾನನ ಮಗನಿಗೆ ನೇಮಕವಾದ ಹೆಂಡತಿಯಾಗಿರಲಿ,’ ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:44
11 ತಿಳಿವುಗಳ ಹೋಲಿಕೆ  

ನಾನು ಯಾವ ಹುಡುಗಿ಼ಗೆ ‘ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ಕುಡಿಯುವುದಕ್ಕೆ ಕೊಡು’ ಎಂದು ಹೇಳುವಾಗ ‘ನೀನೂ ಕುಡಿ, ನಿನ್ನ ಒಂಟೆಗಳಿಗೂ ಕುಡಿಯ ಕೊಡುತ್ತೇನೆ’ ಎನ್ನುತ್ತಾಳೋ ಅವಳೇ ನಿಮ್ಮ ದಾಸ ಇಸಾಕನಿಗೆ ನೀವು ಚುನಾಯಿಸಿರುವ ಕನ್ಯೆಯಾಗಲಿ. ನನ್ನೊಡೆಯನ ಮೇಲೆ ನಿಮ್ಮ ದಯೆಯಿದೆ ಎಂದು ಇದರಿಂದ ಗೊತ್ತಾಗುವುದು,” ಎಂದುಕೊಂಡನು.


ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.


ಅತಿಥಿಸತ್ಕಾರ ಮಾಡುವುದನ್ನು ಮರೆಯದಿರಿ. ಅದನ್ನು ಮಾಡುವಾಗ ಅರಿಯದೆ ಕೆಲವರು ದೇವದೂತರನ್ನೇ ಉಪಚರಿಸಿದ್ದಾರೆ.


ಅವರು ಮಿತಿಮೀರಿದ ಕೇಶಾಲಂಕಾರ, ಆಭರಣಾಲಂಕಾರ, ವಸ್ತ್ರಾಲಂಕಾರಗಳಿಂದ ತಮ್ಮನ್ನೇ ಶೃಂಗರಿಸಿಕೊಳ್ಳುವುದರ ಬದಲು ದೈವಭಕ್ತೆಯರಾದ ಸ್ತ್ರೀಯರಿಗೆ ಲಕ್ಷಣವಾದ ಸತ್ಕಾರ್ಯಗಳಿಂದ ಅಲಂಕರಿಸಿಕೊಳ್ಳಲಿ.


ಆದರೆ ಧರ್ಮವಂತನು ಮಹತ್ಕಾರ್ಯಗಳಲ್ಲಿಯೇ ನಿರತನಾಗಿರುತ್ತಾನೆ.


ಮನೆಮಾರು, ಆಸ್ತಿಪಾಸ್ತಿ ಬರುತ್ತವೆ ಪಿತ್ರಾರ್ಜಿತವಾಗಿ; ವಿವೇಕಿಯಾದ ಹೆಂಡತಿ ಸಿಕ್ಕುವುದು ಸರ್ವೇಶ್ವರನ ಅನುಗ್ರಹವಾಗಿ.


ಮಡದಿಯನ್ನು ಪಡೆಯುವುದು ಪುಣ್ಯಪಡೆದ ಹಾಗೆ, ಅದು ಸರ್ವೇಶ್ವರನ ಅನುಗ್ರಹಪಡೆದ ಹಾಗೆ.


ಅದೃಷ್ಟದ ಚೀಟನ್ನು ಕುಲುಕಿ ಮಡಲಿಗೆ ಹಾಕಬಹುದು; ಆದರೆ ತೀರ್ಪು ಸರ್ವೇಶ್ವರನ ಕೈಯಲ್ಲಿರುವುದು.


ಆ ಎಲುಬನ್ನು ಮಹಿಳೆಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಬರಮಾಡಿದರು.


ನೀರಿಗೆ ಬರುವ ಯಾವ ಹುಡುಗಿಗೆ ‘ದಯವಿಟ್ಟು ನಿನ್ನ ಕೊಡದಿಂದ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ನನಗೆ ಕೊಡು’ ಎಂದು ನಾನು ಹೇಳುವಾಗ ಅವಳು,


ನಾನು ಹೀಗೆ ಮನಸ್ಸಿನಲ್ಲಿ ಹೇಳಿಕೊಳ್ಳುತ್ತಿರುವಾಗಲೇ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವುದನ್ನು ಕಂಡೆ. ಆಕೆ ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ, ‘ನನಗೆ ಕುಡಿಯುವುದಕ್ಕೆ ನೀರನ್ನು ಕೊಡಬೇಕಮ್ಮಾ’ ಎಂದು ಹೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು