Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:54 - ಕನ್ನಡ ಸತ್ಯವೇದವು C.L. Bible (BSI)

54 ಅವನು ಮತ್ತು ಅವನ ಸಂಗಡ ಬಂದಿದ್ದವರು ಊಟ ಉಪಚಾರಗಳನ್ನು ಮುಗಿಸಿಕೊಂಡು ರಾತ್ರಿಯನ್ನು ಅಲ್ಲೇ ಕಳೆದರು. ಬೆಳಿಗ್ಗೆ ಎದ್ದು, “ನನ್ನೊಡೆಯನ ಬಳಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದ ಆ ಸೇವಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಬಳಿಕ ಅವನೂ ಅವನ ಸಂಗಡ ಬಂದ ಸೇವಕರೂ ಊಟ ಉಪಚಾರಗಳನ್ನು ಮುಗಿಸಿಕೊಂಡು ರಾತ್ರಿಯೆಲ್ಲಾ ಅಲ್ಲೇ ಇದ್ದರು. ಬೆಳಗ್ಗೆ ಎದ್ದಾಗ ಅವನು, “ನನ್ನ ದಣಿಯ ಬಳಿಗೆ ಹೊರಡುವುದಕ್ಕೆ ನನಗೆ ಅಪ್ಪಣೆಯಾಗಲಿ” ಎಂದು ಕೇಳಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಬಳಿಕ ಅವನೂ ಅವನ ಸಂಗಡ ಬಂದ ಮನುಷ್ಯರೂ ಊಟ ಉಪಚಾರಗಳನ್ನು ತೀರಿಸಿಕೊಂಡು ರಾತ್ರಿಯೆಲ್ಲಾ ಅಲ್ಲೇ ಇದ್ದರು. ಬೆಳಿಗ್ಗೆ ಎದ್ದಾಗ ಅವನು - ನನ್ನ ದಣಿಯ ಬಳಿಗೆ ಹೊರಡುವದಕ್ಕೆ ನನಗೆ ಅಪ್ಪಣೆಯಾಗಲಿ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಆ ಸೇವಕನು ಮತ್ತು ಅವನ ಸಂಗಡಿಗರು ಅಲ್ಲಿ ಇಳಿದುಕೊಂಡು ಊಟಮಾಡಿದರು. ಅವರು ಮರುದಿನ ಮುಂಜಾನೆ ಎದ್ದು, “ಈಗ ನಾವು ನಮ್ಮ ಒಡೆಯನ ಬಳಿಗೆ ಹೋಗುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 ತರುವಾಯ ಅವನೂ, ಅವನ ಸಂಗಡ ಇದ್ದ ಜನರೂ ಊಟಮಾಡಿ, ಕುಡಿದು, ರಾತ್ರಿಯನ್ನು ಅಲ್ಲೇ ಕಳೆದರು. ಬೆಳಿಗ್ಗೆ ಎದ್ದ ಮೇಲೆ ಅವನು, “ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:54
10 ತಿಳಿವುಗಳ ಹೋಲಿಕೆ  

ಅವನು ಅವರಿಗೆ, “ಸರ್ವೇಶ್ವರ ನನ್ನ ಪ್ರಯಾಣವನ್ನು ಸಫಲಮಾಡಿದ್ದಾರೆ. ನನ್ನನ್ನು ತಡೆಯಬೇಡಿ; ನನ್ನ ಒಡೆಯನ ಬಳಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದನು.


ಆಗ ಅವರು ತಂಗಿ ರೆಬೆಕ್ಕಳನ್ನೂ ಆಕೆಯ ದಾದಿಯನ್ನೂ ಅಬ್ರಹಾಮನ ಸೇವಕನ ಮತ್ತು ಅವನ ಸಂಗಡಿಗರ ಜೊತೆಗೆ ಸಾಗಕಳುಹಿಸಿದರು, ಅಲ್ಲದೆ ರೆಬೆಕ್ಕಳನ್ನು ಹೀಗೆಂದು ಹರಸಿದರು:


ಹಿಂದಿನ ಕಾಲ ಈ ಕಾಲಕ್ಕಿಂತ ಮೇಲಾದುದಕ್ಕೆ ಕಾರಣ ಕೇಳಬೇಡ; ಇದು ಬುದ್ಧಿವಂತನು ಕೇಳುವ ಪ್ರಶ್ನೆಯಲ್ಲ.


ತನ್ನ ಕೆಲಸದಲ್ಲಿ ನಿಪುಣನಾದವನನ್ನು ಗುರುತುಹಚ್ಚು; ಅಂಥವನು ರಾಜರನ್ನಲ್ಲದೆ ನೀಚರನ್ನು ಸೇವಿಸಲಾರನು.


ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ, ನಾನು ಅರಸರ ಬಳಿಗೆ ಓಡಿಹೋಗಿ ಸರ್ವೇಶ್ವರಸ್ವಾಮಿ ವೈರಿಗಳಿಗೆ ಮುಯ್ಯಿತೀರಿಸಿದ್ದಾರೆಂಬ ಶುಭವರ್ತಮಾನವನ್ನು ತಿಳಿಸುತ್ತೇನೆ,” ಎಂದನು.


ತನ್ನ ಅಣ್ಣತಮ್ಮಂದಿರಿಗೆ, “ದಾರಿಯಲ್ಲಿ ಜಗಳವಾಡಬೇಡಿ” ಎಂದು ಬುದ್ಧಿ ಹೇಳಿ, ಅವರನ್ನು ಬೀಳ್ಕೊಟ್ಟನು. ಅವರು ಹೊರಟುಹೋದರು.


ರಾಖೇಲಳು ಜೋಸೆಫನನ್ನು ಹೆತ್ತ ಬಳಿಕ ಯಕೋಬನು ಲಾಬಾನನಿಗೆ, “ನನಗೆ ಅಪ್ಪಣೆಯಾಗಬೇಕು, ನಾನು ಸ್ವಂತ ಊರಿಗೂ ನಾಡಿಗೂ ಹಿಂದಿರುಗಬೇಕಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು