Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:13 - ಕನ್ನಡ ಸತ್ಯವೇದವು C.L. Bible (BSI)

13 ಇಷ್ಮಾಯೇಲನ ಮಕ್ಕಳಿಗೂ ಅವರಿಂದ ಹುಟ್ಟಿದ ಕುಲಗಳಿಗೂ ಇಡಲಾಗಿದ್ದ ಹೆಸರುಗಳು ಇವು - ಮೊದಲು ಹುಟ್ಟಿದವನು ನೆಬಾಯೋತ್, ಆಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವುದೆಂದರೆ: ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್, ಮಿಬ್ಸಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವವಂದರೆ - ಮೊದಲು ಹುಟ್ಟಿದವನು ನೆಬಾಯೋತ್; ಆಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಷ್ಮಾಯೇಲನ ಗಂಡುಮಕ್ಕಳ ಹೆಸರುಗಳು: ಮೊದಲನೆ ಮಗನು ನೆಬಾಯೋತ್. ಆಮೇಲೆ ಹುಟ್ಟಿದವರು: ಕೇದಾರ್, ಅದ್ಬಯೇಲ್, ಮಿಬ್ಸಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಜನನದ ಪ್ರಕಾರ ಇಷ್ಮಾಯೇಲನ ಪುತ್ರರ ಹೆಸರುಗಳು ಇವೇ: ಇಷ್ಮಾಯೇಲನ ಚೊಚ್ಚಲ ಮಗನು ನೆಬಾಯೋತ್, ಕೇದಾರ್, ಅದ್ಬೆಯೇಲ್, ಮಿಬ್ಸಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:13
14 ತಿಳಿವುಗಳ ಹೋಲಿಕೆ  

ನಿನ್ನಲ್ಲಿ ಕೂಡುವುವು ಕೇದಾರಿನ ಸಕಲ ಮಂದೆಗಳು ಬಲಿಯರ್ಪಣೆಗೊದಗುವುವು ನೆಬಾಯೋತಿನ ಟಗರುಗಳು. ಏರುವುವು ನನಗೆ ಸಮರ್ಪಕವಾದ ಹೋಮವಾಗಿ ಬಲಿಪೀಠವನು. ಚಂದಗೊಳಿಸುವೆನು ನನ್ನ ಸುಂದರವಾದ ಆಲಯವನು.


ಘೋಷಿಸಲಿ ಮರುಭೂಮಿಯೂ ಅದರ ನಗರಗಳೂ ಕೇದಾರಿನವರೂ ಗ್ರಾಮನಿವಾಸಿಗಳೂ ಜಯಘೋಷಮಾಡಲಿ ಸೆಲ ಪಟ್ಟಣದವರೂ ಸಂತೋಷದಿಂದ ಹರ್ಷಧ್ವನಿಗೈಯಲಿ ಆ ಪರ್ವತದ ತುತ್ತತುದಿಗಳಿಂದ.


ಓ ಜೆರುಸಲೇಮಿನ ಮಹಿಳೆಯರೇ, ನಾನು ಕಪ್ಪಾಗಿರುವೆ ಕೇದಾರಿನ ಗುಡಾರಗಳಂತೆ ಆದರೂ ಚೆಲುವೆ ಸೊಲೊಮೋನನಾ ಪರದೆಗಳಂತೆ.


ಅಯ್ಯೋ ತಂಗಬೇಕಲ್ಲಾ ಮೇಷೆಕಿನವರ ಮಧ್ಯದಲಿ II ಅಕಟಾ ಇರಬೇಕಲ್ಲಾ ಕೇದಾರಿನ ಪಾಳೆಯಗಳಲಿ II


ಇಷ್ಮಾಯೇಲನ ಮಗಳು ಹಾಗು ನೆಬಾಯೋತನ ಸಹೋದರಿ ಬಾಸೆಮತಳನ್ನೂ ಮದುವೆ ಆಗಿದ್ದನು.


ಮಿಬ್ಸಾಮ್, ಮಿಷ್ಮಾ, ದೂಮಾ, ಮಸ್ಸಾ,


ಆದರೆ ನಿಮ್ಮಲ್ಲಿ ನನ್ನದೊಂದು ಬಿನ್ನಹಃ ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಮುರುವುಗಳನ್ನು ನನಗೆ ಕೊಡಲಿ,” ಎಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದುದರಿಂದ ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಸೋಲಿಸಿದ ಕೇದಾರನ್ನು ಮತ್ತು ಹಾಜೋರಿನ ರಾಷ್ಟ್ರಗಳನ್ನು ಕುರಿತ ಹೇಳಿಕೆ: “ಏಳಿ, ಕೇದಾರಿಗೆ ಹೋಗಿ, ಪೂರ್ವ ದೇಶದವರನ್ನು ಹಾಳುಮಾಡಿ,” ಎಂದು ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಆಜ್ಞೆಮಾಡಿದ್ದಾರೆ.


ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ. ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತತಿಯನ್ನು ಕೊಡುತ್ತೇನೆ. ಅವನು ಹನ್ನೆರಡು ಮಂದಿ ಅಧಿಪತಿಗಳಿಗೆ ಮೂಲಪಿತನಾಗುವನು. ಅವನ ಸಂತತಿಯನ್ನು ದೊಡ್ಡ ರಾಷ್ಟ್ರವನ್ನಾಗಿ ಮಾಡುತ್ತೇನೆ.


ತನಗೆ ಈಗಾಗಲೇ ಇದ್ದ ಹೆಂಡತಿಯರ ಜೊತೆಗೆ ಅಬ್ರಹಾಮನ ಮಗನಾದ ಇಷ್ಮಾಯೇಲನ ಬಳಿಗೆ ಹೋಗಿ, ಅವನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಮಹಲತ್ ಎಂಬಾಕೆಯನ್ನು ಮದುವೆಮಾಡಿಕೊಂಡನು.


“ಸೈಪ್ರಸ್ ದ್ವೀಪಗಳಿಗೆ ಹೋಗಿ ನೋಡಿ; ಕೇದಾರ್ ನಾಡಿಗೆ ಕಳಿಸಿ ವಿಚಾರಮಾಡಿ, ಇಂಥ ಕಾರ್ಯ ಎಲ್ಲಿಯಾದರು ನಡೆಯಿತೆ ಎಂದು ಚೆನ್ನಾಗಿ ಆಲೋಚಿಸಿರಿ.


“ಅರಾಬ್ಯರೂ, ಕೇದಾರಿನ ಪ್ರಮುಖರೂ ನಿನ್ನ ಕೈಕೆಳಗಣ ವರ್ತಕರು: ಕುರಿ, ಟಗರು, ಹೋತಗಳನ್ನು ನಿನಗಾಗಿ ಸಾಗಿಸಿಕೊಂಡು ಬರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು