Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:27 - ಕನ್ನಡ ಸತ್ಯವೇದವು C.L. Bible (BSI)

27 ಆ ಹುಡುಗರಿಬ್ಬರು ಬೆಳೆದರು. ಏಸಾವನು ಚೂಟಿಯಾದ ಬೇಟೆಗಾರನಾದ, ವನವಾಸಿಯಾದ, ಯಕೋಬನು ಸಾಧುಮನುಷ್ಯ, ಅವನದು ಗುಡಾರಗಳಲ್ಲಿ ವಾಸ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನೆಂಬವನು ಬೇಟೆಯಾಡುವದರಲ್ಲಿ ಜಾಣನಾದನು; ಅವನು ಅರಣ್ಯವಾಸಿ. ಯಾಕೋಬನು ಸಾಧುಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಬಾಲಕರು ಬೆಳೆದು ದೊಡ್ಡವರಾದರು. ಏಸಾವನು ಚತುರ ಬೇಟೆಗಾರನಾದನು. ಹೊಲದಲ್ಲಿರುವುದು ಅವನಿಗೆ ಪ್ರಿಯವಾಗಿತ್ತು. ಆದರೆ ಯಾಕೋಬನು ಸಾಧು ಮನುಷ್ಯನಾಗಿದ್ದನು. ಅವನು ತನ್ನ ಗುಡಾರದಲ್ಲಿರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆ ಹುಡುಗರು ಬೆಳೆದಾಗ ಏಸಾವನು ಬೇಟೆಯಾಡುವುದರಲ್ಲಿ ಜಾಣನಾಗಿದ್ದು, ಅಡವಿಯ ಮನುಷ್ಯನಾದನು. ಯಾಕೋಬನು ಗುಡಾರಗಳಲ್ಲಿ ವಾಸಮಾಡುವ ಸಾಧು ಮನುಷ್ಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:27
14 ತಿಳಿವುಗಳ ಹೋಲಿಕೆ  

ದೇವರು ವಾಗ್ದಾನ ಮಾಡಿದ ನಾಡಿಗೆ ಬಂದಾಗಲೂ ಆತನು ಅದೇ ವಿಶ್ವಾಸದ ನಿಮಿತ್ತ ಒಬ್ಬ ಅನ್ಯದೇಶಿಯನಂತೆ ಬಾಳಿದನು. ಡೇರೆಗಳಲ್ಲಿದ್ದುಕೊಂಡು ಒಬ್ಬ ಪ್ರವಾಸಿಗನಂತೆ ಜೀವಿಸಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯಸ್ಥರಾದ ಇಸಾಕನೂ ಯಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.


ಹುಡುಗನ ಸಂಗಡ ದೇವರಿದ್ದರು.


ದೇವರ ದೃಷ್ಟಿಯಲ್ಲಿ ದಿಟ್ಟ ಬೇಟೆಗಾರ. "ಪ್ರಭು ನಿನ್ನನ್ನು ನಿಮ್ರೋದನಂಥ ದಿಟ್ಟಬೇಟೆಗಾರನಾಗಿಸಲಿ" ಎಂಬ ನಾಣ್ನುಡಿ ಇಂದಿಗೂ ಇದೆ.


ನೋಹನ ಚರಿತ್ರೆಯಿದು: ಆತ ಸತ್ಪುರುಷ, ಅವನಂಥ ನಿರ್ದೋಷಿ ಆ ಕಾಲದಲ್ಲಿ ಯಾರೂ ಇರಲಿಲ್ಲ. ದೇವರೊಡನೆ ಆತ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಿದ್ದ.


ನಿರಪರಾಧಿಯನ್ನು ಲಕ್ಷಿಸು, ಸತ್ಪುರುಷನನು ವೀಕ್ಷಿಸು I ಶಾಂತಿಪ್ರಿಯನಿಗಿದೆ ಸಂತಾನವೃದ್ಧಿ, ಇದ ಗಮನಿಸು II


ಆಗ ಸರ್ವೇಶ್ವರ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ಆತನಿಗೆ ಸರಿಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಗನು,” ಎಂದು ಹೇಳಿದರು.


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


'ಚಿಕ್ಕಂದಿನಿಂದ ಇಂದಿನವರೆಗೂ ನಿಮ್ಮ ಸೇವಕರಾದ ನಾವು, ನಮ್ಮ ಪೂರ್ವಜರ ಪದ್ಧತಿಯಂತೆ ಮಂದೆ ಮೇಯಿಸುವವರು,’ ಎಂದು ಹೇಳಿರಿ. ಆಗ ಗೋಷೆನ್ ಪ್ರಾಂತ್ಯವನ್ನು ನಿಮ್ಮ ನಿವಾಸಕ್ಕೆ ನೇಮಿಸುವನು - ಏಕೆಂದರೆ ಕುರಿ ಕಾಯುವವರೆಂದರೆ ಈಜಿಪ್ಟಿಯರಿಗೆ ಹಿಡಿಸದು,” ಎಂದು ಹೇಳಿದನು.


ಬಾಳ ನಡೆಸುವೆ ಕತ್ತಿಕಠಾರಿಯಿಂದಲೇ ಕೂಲಿಯಾಳಾಗುವೆ ಸೋದರನಿಗೆ ಮುರಿಯುವೆ ಅವ ಹೊರಿಸಿದ ನೊಗವ ಸ್ವಾತಂತ್ರ್ಯಕ್ಕಾಗಿ ನೀ ಬಂಡಾಯ ಹೂಡಿದಾಗ,”


ಆಗ ಸರ್ವೇಶ್ವರ ಅವನಿಗೆ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ನಿಷ್ಕಾರಣವಾಗಿ ಆತನನ್ನು ನಾಶಮಾಡಲು ಬಿಡಬೇಕೆಂದು ನೀನು ನನ್ನನ್ನು ಪೀಡಿಸಿದೆ. ಆದರೂ ಆತನು ತನ್ನ ಸತ್ಯಸಂಧತೆಯನ್ನು ಬಿಡದೆ ಇದ್ದಾನೆ ನೋಡು,” ಎಂದರು.


ಮನೆ ಕಟ್ಟಬಾರದು, ಬೀಜಬಿತ್ತಬಾರದು, ತೋಟಮಾಡಬಾರದು, ಕೊಂಡು ಸೊತ್ತಾಗಿಸಿಕೊಳ್ಳಬಾರದು. ಜೀವಮಾನವೆಲ್ಲ ಗುಡಾರಗಳಲ್ಲೇ ವಾಸಿಸಬೇಕು. ಇದರಿಂದ ನೀವು ತಂಗುವ ನಾಡಿನಲ್ಲಿ ದೀರ್ಘಕಾಲ ಉಳಿಯುವಿರಿ,’ ಎಂದು ಆಜ್ಞಾಪಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು