Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:1 - ಕನ್ನಡ ಸತ್ಯವೇದವು C.L. Bible (BSI)

1 ಹಿಂದೆ ಅಬ್ರಹಾಮನ ಕಾಲದಲ್ಲಿ ಬಂದಿದ್ದ ಬರಗಾಲವು ಮತ್ತೊಮ್ಮೆ ಕಾನಾನ್ ನಾಡಿಗೆ ಬಂದಿತು. ಇಸಾಕನು ಫಿಲಿಷ್ಟಿಯರ ಅರಸ ಅಬೀಮೆಲೆಕನನ್ನು ಕಾಣಲು ಗೆರಾರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರಗಾಲವಲ್ಲದೆ ಇನ್ನೊಂದು ಬರಗಾಲವು ಕಾನಾನ್ ದೇಶಕ್ಕೆ ಬಂದಿತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಬ್ರಹಾಮನ ಕಾಲದಲ್ಲಿ ಬಂದ ಮೊದಲನೆಯ ಬರವಲ್ಲದೆ ಇನ್ನೂ ಒಂದು ಬರವು ಕಾನಾನ್‍ದೇಶಕ್ಕೆ ಬಂತು. ಆಗ ಇಸಾಕನು ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಗೆರಾರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಬ್ರಹಾಮನ ಕಾಲದಲ್ಲಿ ಬಂದಿದ್ದ ಕ್ಷಾಮದಂತೆ ಮತ್ತೊಂದು ಕ್ಷಾಮವು ಕಾನಾನ್ ದೇಶಕ್ಕೆ ಬಂದಿತು. ಆದ್ದರಿಂದ ಇಸಾಕನು ಫಿಲಿಷ್ಟಿಯರ ರಾಜನಾದ ಅಬೀಮೆಲೆಕನ ಬಳಿಗೆ ಹೋದನು. ಅಬೀಮೆಲೆಕನು ಗೆರಾರ್ ನಗರದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ, ದೇಶದಲ್ಲಿ ಮತ್ತೊಂದು ಬರವು ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:1
10 ತಿಳಿವುಗಳ ಹೋಲಿಕೆ  

ಕಾನಾನ್ ನಾಡಿನಲ್ಲಿ ಕ್ಷಾಮ ತಲೆದೋರಿತು. ಅದು ಘೋರವಾಗಿದ್ದುದರಿಂದ ಅಬ್ರಾಮನು ಕೆಲವು ಕಾಲ ಈಜಿಪ್ಟಿನಲ್ಲಿರಲು ಅಲ್ಲಿಗೆ ಇಳಿದುಹೋದನು.


ಅಬ್ರಹಾಮನು ಕಾಲವಾದ ಬಳಿಕ ಅವನ ಮಗ ಇಸಾಕನನ್ನು ದೇವರು ಆಶೀರ್ವದಿಸಿದರು. ಇಸಾಕನು ‘ಲಹೈರೋಯಿ’ ಎಂಬ ಬಾವಿಯ ಹತ್ತಿರ ವಾಸವಾಗಿದ್ದನು.


ಆಗ ಯಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯನ್ನೂ ಕೊಟ್ಟ. ಏಸಾವನು ತಿಂದು, ಕುಡಿದು, ಎದ್ದು ಹೋದ. ಜ್ಯೇಷ್ಠತನದ ಹಕ್ಕುಬಾಧ್ಯತೆಗೆ ಏಸಾವನು ಕೊಟ್ಟ ಮರ್ಯಾದೆ ಇಷ್ಟೇ!


ಕಾನಾನ್ ನಾಡಿನಲ್ಲೂ ಬರವಿತ್ತು. ಧಾನ್ಯ ಕೊಂಡುಕೊಳ್ಳಲು ಅಲ್ಲಿಂದ ಈಜಿಪ್ಟಿಗೆ ಬಂದವರಲ್ಲಿ ಯಕೋಬನ (ಇಸ್ರಯೇಲನ) ಮಕ್ಕಳೂ ಇದ್ದರು.


ಬರವು ಕಾನಾನಿನಲ್ಲಿ ಘೋರವಾಗಿತ್ತು.


ಮೋಶೆಗೆ ಸರ್ವೇಶ್ವರ ಸ್ವಾಮಿ ಹೇಳಿದ ಮಾತುಗಳಿವು: “ನೀನು ಈಜಿಪ್ಟಿನಿಂದ ಕರೆದುತಂದ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳಬಿಟ್ಟು ತೆರಳು. ನಾನು ಅಬ್ರಹಾಮ್, ಇಸಾಕ್, ಯಕೋಬ್ ಎಂಬುವರೊಡನೆ ಅವನ ಸಂತತಿಯವರಿಗೆ ಕೊಡುವುದಾಗಿ ಪ್ರಮಾಣ ಮಾಡಿದ ನಾಡಿಗೆ ಹೊರಟುಹೋಗು.


ಇಸ್ರಯೇಲ್ ನಾಡಿನಲ್ಲಿ ನ್ಯಾಯಸ್ಥಾಪಕರು ಆಳುತ್ತಿದ್ದಾಗ, ಒಮ್ಮೆ ಕಠಿಣವಾದ ಬರಗಾಲವು ತಲೆದೋರಿತು. ಈ ಕಾರಣ ಜುದೇಯ ಪ್ರಾಂತ್ಯದ ಬೆತ್ಲೆಹೇಮ್ ಎಂಬ ಊರಿನವನೊಬ್ಬನು ತನ್ನ ಪತ್ನಿ ಮತ್ತು ಪುತ್ರರಿಬ್ಬರನ್ನು ಕರೆದುಕೊಂಡು ಮೋವಾಬ್ ಎಂಬ ನಾಡಿಗೆ ವಲಸೆ ಹೋದನು.


ದಾವೀದನ ಕಾಲದಲ್ಲಿ ಮೂರು ವರ್ಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದಾಗ, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೂ ಅವನ ಮನೆಯವರ ಮೇಲೂ ರಕ್ತಾಪರಾಧ ಇರುತ್ತದೆ,” ಎಂಬ ಉತ್ತರ ದೊರಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು