Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:18 - ಕನ್ನಡ ಸತ್ಯವೇದವು C.L. Bible (BSI)

18 ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತಮೇಲೆ ಫಿಲಿಷ್ಟಿಯರು ಮುಚ್ಚಿಹಾಕಿದ್ದರಿಂದ ಇಸಾಕನು ಅವುಗಳನ್ನು ಮರಳಿ ತೆಗೆಸಿ ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ನಂತರ ಫಿಲಿಷ್ಟಿಯರು ಮುಚ್ಚಿ ಹಾಕಿದ್ದರಿಂದ ಇಸಾಕನು ಅವುಗಳನ್ನು ತಿರುಗಿ ಅಗೆಸಿ, ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ಮೇಲೆ ಫಿಲಿಷ್ಟಿಯರು ಮುಚ್ಚಿಹಾಕಿದ್ದರಿಂದ ಇಸಾಕನು ಅವುಗಳನ್ನು ತಿರಿಗಿ ತೆಗಿಸಿ ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇದಕ್ಕೂ ಬಹುಕಾಲದ ಹಿಂದೆ, ಅಬ್ರಹಾಮನು ಅನೇಕ ಬಾವಿಗಳನ್ನು ತೋಡಿಸಿದ್ದನು. ಅಬ್ರಹಾಮನು ಸತ್ತುಹೋದ ಮೇಲೆ, ಫಿಲಿಷ್ಟಿಯರು ಆ ಬಾವಿಗಳಿಗೆ ಮಣ್ಣುಹಾಕಿ ಮುಚ್ಚಿದ್ದರು. ಇಸಾಕನು ಆ ಬಾವಿಗಳನ್ನು ಮತ್ತೆ ತೋಡಿಸಿ, ತನ್ನ ತಂದೆ ಕೊಟ್ಟಿದ್ದ ಹೆಸರುಗಳನ್ನೇ ಅವುಗಳಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ಇಸಾಕನು ತನ್ನ ತಂದೆ ಅಬ್ರಹಾಮನ ದಿನಗಳಲ್ಲಿ ಅಗೆದಂಥ ಬಾವಿಗಳನ್ನು ತಿರುಗಿ ಅಗೆದನು. ಏಕೆಂದರೆ ಅಬ್ರಹಾಮನು ಮರಣದ ನಂತರ ಫಿಲಿಷ್ಟಿಯರು ಅವುಗಳನ್ನು ಮುಚ್ಚಿದ್ದರು. ಅವುಗಳಿಗೆ ತನ್ನ ತಂದೆಯು ಕೊಟ್ಟ ಹೆಸರುಗಳ ಪ್ರಕಾರವೇ ಅವನು ಅವುಗಳಿಗೆ ಹೆಸರುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:18
10 ತಿಳಿವುಗಳ ಹೋಲಿಕೆ  

ಅಂದು ನಾಡಿನಲ್ಲಿ ವಿಗ್ರಹಗಳು ಹೆಸರಿಲ್ಲದಂತೆ ಮಾಡುವೆನು; ಅಷ್ಟೇ ಅಲ್ಲ, ಅವುಗಳನ್ನು ಯಾರೂ ನೆನಸಿಕೊಳ್ಳದಂತೆ ಮಾಡುವೆನು; ಅಲ್ಲದೆ ಪ್ರವಾದಿಯೆನಿಸಿಕೊಳ್ಳುವವರನ್ನೂ ಅಶುದ್ಧ ಆತ್ಮವನ್ನೂ ನಾಡಿನಿಂದ ತೊಲಗಿಸಿಬಿಡುವೆನು.


ಬಾಳ್‍ದೇವತೆಗಳ ಹೆಸರುಗಳನ್ನು ನಿನ್ನ ಬಾಯಿಂದ ತೊಲಗಿಸುವೆನು; ಇನ್ನೆಂದಿಗೂ ಅವುಗಳನ್ನು ನೀನು ಉಚ್ಛರಿಸದಂತೆ ಮಾಡುವೆನು.


ಅನ್ಯದೇವರನ್ನು ಬಯಸುವವರನ್ನು ಕಾದಿದೆ ಕಠಿಣ ಕಷ್ಟ I ಅವರಂತೆ ರಕ್ತಪಾನತರ್ಪಣೆ ಮಾಡಲೆನಗಿಲ್ಲ ಇಷ್ಟ I ಆ ದೇವರುಗಳ ನಾಮೋಚ್ಚಾರಣೆ ನನ್ನ ತುಟಿಗೆ ಅನಿಷ್ಟ II


ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಊರುಗಳನ್ನು ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.


ಹೀಗೆ ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದ ಕಾರಣ, ಆ ಸ್ಥಳಕ್ಕೆ ‘ಬೇರ್ಷೆಬ’ ಎಂದು ಹೆಸರಾಯಿತು.


ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲಾತ್ಕಾರದಿಂದ ಸ್ವಾಧೀನಪಡಿಸಿಕೊಂಡಿದ್ದರು.


ಅಂತೆಯೇ ಇಸಾಕನು ಅಲ್ಲಿಂದ ಹೊರಟು ಗೆರಾರ್ ತಗ್ಗಿನ ಬಯಲಿನಲ್ಲಿ ಗುಡಾರ ಹಾಕಿಕೊಂಡು ವಾಸಮಾಡಿದನು.


ಇಸಾಕನ ಕೆಲಸಗಾರರು ಆ ತಗ್ಗಿನಲ್ಲಿ ಅಗೆಯುತ್ತಿದ್ಪಾಗ ಅವರಿಗೆ ಸೆಲೆ ನೀರಿನ ಬಾವಿಯೊಂದು ಸಿಕ್ಕಿತು.


ಅವನಿಗೆ ಇಳಕಲಿನ ಪ್ರದೇಶದಲ್ಲೂ ತಪ್ಪಲ ಸೀಮೆಯಲ್ಲೂ ಅಲ್ಲದೆ ಅಡವಿಯಲ್ಲೂ ಪಶುಪ್ರಾಣಿಗಳ ದೊಡ್ಡಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ವ್ಯವಸಾಯದಲ್ಲಿ ಅವನಿಗೆ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿತೋಟಗಳ ಕೆಲಸಗಾರರನ್ನು ನೇಮಿಸಿದನು.


ಅದಕ್ಕೆ ಅಬ್ರಹಾಮನು, “ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ಈ ಏಳು ಕುರಿಮರಿಗಳನ್ನು ನನ್ನ ಕೈಯಿಂದ ನೀನು ಸ್ವೀಕರಿಸಬೇಕು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು