Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:27 - ಕನ್ನಡ ಸತ್ಯವೇದವು C.L. Bible (BSI)

27 ಇಸಾಕನು, “ನೀವು ನನ್ನ ಮೇಲೆ ಹಗೆತನ ತಾಳಿ ನಿಮ್ಮ ಬಳಿಯಿಂದ ಕಳುಹಿಸಿಬಿಟ್ಟಿರಲ್ಲವೆ? ಈಗ ನನ್ನ ಬಳಿಗೆ ಏಕೆ ಬಂದಿರಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನೀವು, “ನನ್ನನ್ನು ದ್ವೇಷಿಸಿ ನಿಮ್ಮ ಬಳಿಯಿಂದ ಕಳುಹಿಸಿ ಬಿಟ್ಟಿರಲ್ಲಾ; ಈಗ ನನ್ನ ಬಳಿಗೆ ಯಾಕೆ ಬಂದಿರಿ” ಎಂದು ಅವರನ್ನು ಕೇಳಿದ್ದಕ್ಕೆ ಅವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನೀವು ನನ್ನನ್ನು ದ್ವೇಷಿಸಿ ನಿಮ್ಮ ಬಳಿಯಿಂದ ಕಳುಹಿಸಿಬಿಟ್ಟಿರಲ್ಲಾ; ಈಗ ನನ್ನ ಬಳಿಗೆ ಯಾಕೆ ಬಂದಿರಿ ಎಂದು ಅವರನ್ನು ಕೇಳಿದ್ದಕ್ಕೆ ಅವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಇಸಾಕನು, “ನೀನು ನನ್ನನ್ನು ನೋಡಲು ಬಂದದ್ದೇಕೆ? ಮೊದಲು, ನೀನು ನನ್ನೊಡನೆ ಸ್ನೇಹದಿಂದ ಇರಲಿಲ್ಲ. ಅಲ್ಲದೆ ನಿನ್ನ ದೇಶವನ್ನು ಬಿಟ್ಟುಹೋಗುವಂತೆ ನೀನು ನನ್ನನ್ನು ಬಲವಂತ ಮಾಡಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಇಸಾಕನು ಅವರಿಗೆ, “ನನ್ನ ಬಳಿಗೆ ನೀವು ಏಕೆ ಬಂದಿದ್ದೀರಿ? ನೀವು ನನ್ನನ್ನು ಹಗೆಮಾಡಿ, ನಿಮ್ಮ ಬಳಿಯಿಂದ ನನ್ನನ್ನು ಕಳುಹಿಸಿಬಿಟ್ಟಿರಲ್ಲಾ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:27
9 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಅಬೀಮೆಲೆಕನು ಇಸಾಕನಿಗೆ, “ನೀನು ನಮಗಿಂತ ಅಧಿಕ ಬಲಿಷ್ಠನಾಗಿಬಿಟ್ಟೆ; ಆದುದರಿಂದ ನಮ್ಮನ್ನು ಬಿಟ್ಟು ಹೊರಟುಹೋಗಬೇಕು” ಎಂದು ಹೇಳಿದನು.


ಅವನು ಅವರಿಗೆ, “ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಅಟ್ಟಿಬಿಟ್ಟವರು ನೀವೇ ಅಲ್ಲವೇ? ನಿಮಗೆ ಕಷ್ಟಬಂದಾಗ ನನ್ನ ಬಳಿಗೆ ಏಕೆ ಬಂದಿರಿ?” ಎಂದನು.


ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.


“ ‘ನಮ್ಮ ನ್ಯಾಯತೀರಿಸುವ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?’ ಎಂದು ಇಸ್ರಯೇಲರಿಂದ ತಿರಸ್ಕೃತನಾದವನೇ ಆ ಮೋಶೆ. ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡ ತಮ್ಮ ದೂತನ ಮೂಲಕ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ನೇಮಿಸಿದ್ದು ಇವನನ್ನೇ.


ಆಗ ಆಕ್ರಮಣ ಮಾಡುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ‘ನಮ್ಮ ನ್ಯಾಯತೀರಿಸಲು ನಿನಗೆ ಅಧಿಕಾರವನ್ನು ಕೊಟ್ಟವರು ಯಾರು?


ಅನಂತರ ತನ್ನ ತಂದೆ ಯಕೋಬನೂ ಅವನ ಬಂಧುಬಳಗದವರೂ ಈಜಿಪ್ಟಿಗೆ ಬರುವಂತೆ ಜೋಸೆಫನು ಹೇಳಿಕಳುಹಿಸಿದನು.


“ಈ ಪಿತಾಮಹರು ಜೋಸೆಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗೆ ಇದ್ದು,


ಅವನಿಗೆ ದನಕುರಿಗಳೂ ಆಳುಕಾಳುಗಳೂ ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.


ಅದಕ್ಕೆ ಅವರು, “ಸರ್ವೇಶ್ವರ ನಿನ್ನ ಸಂಗಡ ಇದ್ದಾರೆಂಬುದು ನಮಗೆ ಚೆನ್ನಾಗಿ ಕಂಡುಬಂದಿದೆ. ನೀನೂ ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾದ ಒಪ್ಪಂದ ಮಾಡಿಕೊಳ್ಳಬೇಕೆಂದು ತೀರ್ಮಾನಿಸಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು