Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:4 - ಕನ್ನಡ ಸತ್ಯವೇದವು C.L. Bible (BSI)

4 ಅದರಿಂದ ನನಗಿಷ್ಟವಾಗಿರುವ ಸವಿಯೂಟವನ್ನೂ ಅಣಿಮಾಡಿ ಬಡಿಸು. ಸಾವು ಬರುವುದಕ್ಕೆ ಮುಂಚೆ ನಾನು ನಿನ್ನನ್ನು ಮನಸಾರೆ ಆಶೀರ್ವದಿಸುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬೇಟೇ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸಿಕೊಡು; ಸಾವು ಬರುವದಕ್ಕಿಂತ ಮುಂಚೆ ನಾನು ನಿನ್ನನ್ನು ಆಶೀರ್ವದಿಸುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನಗೆ ಇಷ್ಟವಾದ ಅಡಿಗೆಯನ್ನು ತಯಾರಿಸಿ ತೆಗೆದುಕೊಂಡು ಬಾ. ನಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ಇಷ್ಟಪಡುವ ರುಚಿಯಾದ ಊಟವನ್ನೂ ಸಿದ್ಧಮಾಡಿ ತೆಗೆದುಕೊಂಡು ಬಾ. ಆಗ ಸಾಯುವುದಕ್ಕಿಂತ ಮುಂಚೆ ನಾನು ನಿನ್ನನ್ನು ಆಶೀರ್ವದಿಸುವಂತೆ ಅದನ್ನು ಊಟಮಾಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:4
23 ತಿಳಿವುಗಳ ಹೋಲಿಕೆ  

ವಿಶ್ವಾಸವಿದ್ದುದರಿಂದಲೇ ಇಸಾಕನು ಸಹ ಮುಂದೆ ಸಂಭವಿಸಬೇಕಾದ್ದನ್ನು ಸೂಚಿಸಿ, ಯಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.


ಅದಕ್ಕೆ ಜೋಸೆಫನು, “ಈ ದೇಶದಲ್ಲಿ ದೇವರು ನನಗೆ ಅನುಗ್ರಹಿಸಿದ ಮಕ್ಕಳು,” ಎಂದನು. ಆಗ ತಂದೆ ಯಕೋಬನು, “ಇವರನ್ನು ನಾನು ಆಶೀರ್ವದಿಸುತ್ತೇನೆ; ನನ್ನ ಹತ್ತಿರಕ್ಕೆ ಕರೆದುಕೊಂಡು ಬಾ,” ಎಂದನು.


ಇವೇ ಇಸ್ರಯೇಲಿನ ಹನ್ನೆರಡು ಕುಲಗೋತ್ರಗಳು; ಇದೇ ಅವರ ತಂದೆ ಕೊಟ್ಟ ಆಶೀರ್ವಾದ: ಒಂದೊಂದು ಕುಲಕ್ಕೆ ಅವನು ನುಡಿದ ಒಂದೊಂದು ಆಶೀರ್ವಚನ.


ಆಗ ಇಸಾಕನು, “ಊಟಮಾಡಲು ಆ ಬೇಟೆಮಾಂಸವನ್ನು ತಂದು ಬಡಿಸು, ಆಮೇಲೆ ನಿನ್ನನ್ನು ಆಶೀರ್ವದಿಸುತ್ತೇನೆ,” ಎಂದನು. ಅಂತೆಯೇ ಯಕೋಬನು ಹತ್ತಿರಕ್ಕೆ ತಂದು ಬಡಿಸಿದಾಗ ಇಸಾಕನು ಊಟಮಾಡಿದನು; ಕೊಟ್ಟ ದ್ರಾಕ್ಷಾರಸವನ್ನು ಕುಡಿದನು.


ಆಶೀರ್ವದಿಸುತ್ತಿದ್ದ ಹಾಗೆಯೇ ಅವರನ್ನು ಬೀಳ್ಕೊಟ್ಟರು. (ಮತ್ತು ಸ್ವರ್ಗಕ್ಕೆ ಒಯ್ಯಲ್ಪಟ್ಟರು).


ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.


ಇದಲ್ಲದೆ ಅವರನ್ನು ಆಶೀರ್ವದಿಸಿ ಕಳಿಸಿದನು. ಅವರು ತಮ್ಮ ತಮ್ಮ ನಿವಾಸಗಳಿಗೆ ಹೋದರು.


ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ನಗರವನ್ನು ಅವನಿಗೆ ಸೊತ್ತಾಗಿ ಕೊಟ್ಟನು.


ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸವನ್ನು ತೆಗೆದುಕೊಂಡು ಬಾ, ಅದರಿಂದ ನನಗೆ ಸವಿ ಊಟವನ್ನು ಅಣಿಮಾಡಿ ಬಡಿಸು; ಸಾವು ಬರುವುದಕ್ಕೆ ಮುಂಚೆ ನಾನು ನಿನ್ನನ್ನು ಸರ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಮನಸಾರೆ ಆಶೀರ್ವದಿಸುತ್ತೇನೆ,’ ಎಂದು ಹೇಳಿದ್ದನ್ನು ಕೇಳಿದ್ದೇನೆ.


“ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಲಿ; ನಿನಗೆ ಬಹಳ ಸಂತತಿಯನ್ನು ಕೊಡಲಿ; ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ;


ಅವನು ಕೂಡ ಸವಿ ಊಟವನ್ನು ಅಣಿಮಾಡಿ ತಂದೆಯ ಬಳಿಗೆ ತಂದು, “ಅಪ್ಪಾ, ಏಳಿ; ನಿನ್ನ ಮಗನಾದ ನಾನು ತಂದಿರುವ ಬೇಟೆಯ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸಿ,” ಎಂದು ಕೇಳಿಕೊಂಡನು.


ಇಸಾಕನು ಅವನ ಉಡುಗೆತೊಡಿಗೆಗಳ ಸುವಾಸನೆಯನ್ನು ಮೂಸಿನೋಡಿ, ಅವನಿಗೆ ಹೀಗೆಂದು ಆಶೀರ್ವಾದ ಮಾಡಿದನು - “ನನ್ನ ಸುಕುಮಾರನಿಂದೇಳುವ ಸುವಾಸನೆ ಸರ್ವೇಶ್ವರನಾಶೀರ್ವದಿಸಿದ ಮೊಗೆನೆಲದ ಸುವಾಸನೆಯಂತಿದೆ.


ಯಕೋಬನ ಕೈಗಳು ಅವನ ಅಣ್ಣನ ಕೈಗಳಂತೆ ರೋಮಮಯವಾಗಿ ಇದ್ದುದರಿಂದ ಇಸಾಕನು ಅವನ ಗುರುತನ್ನು ತಿಳಿಯಲಾರದೆ ಅವನನ್ನು ಆಶೀರ್ವದಿಸಿದನು.


“ಸಾವಿರ, ಹತ್ತು ಸಾವಿರ, ಸಂತತಿಯಾಗಲಿ, ಎಲೆ ತಂಗಿ ನಿನಗೆ; ವೈರಿಗಳ ನಗರಗಳು ಸ್ವಾಧೀನವಾಗಲಿ ನಿನ್ನ ಸಂತತಿಗೆ!”


“ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಆಶೀರ್ವಾದ ಅಬ್ರಾಮನಿಗಿರಲಿ; ನಿನ್ನ ಶತ್ರುಗಳನ್ನು ನಿನ್ನ ಕೈವಶಮಾಡಿದ ಆ ಪರಾತ್ಪರ ದೇವರಿಗೆ ಸ್ತೋತ್ರವಾಗಲಿ!”


ಇಸಾಕನು ತನ್ನ ಮಗ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿದ್ದಿತು. ಏಸಾವನು ಬೇಟೆಯಾಡಲು ಕಾಡಿಗೆ ಹೋಗಿದ್ದಾಗ,


ಮೇಕೆ ಮಂದೆಯ ಬಳಿಗೆ ಹೋಗಿ ಎರಡು ಒಳ್ಳೆಯ ಮೇಕೆಮರಿಗಳನ್ನು ಬೇಗನೆ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ಸವಿಯೂಟವನ್ನು ನಾನೇ ಅಣಿಮಾಡುತ್ತೇನೆ.


ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾದ ಸವಿ ಊಟವನ್ನು ಸಿದ್ಧಪಡಿಸಿದಳು.


ತಾನು ಸಿದ್ಧಮಾಡಿದ್ದ ಸವಿಯೂಟವನ್ನೂ ಸುಟ್ಟಿದ್ದ ರೊಟ್ಟಿಯನ್ನೂ ತನ್ನ ಮಗ ಯಕೋಬನ ಕೈಗೆ ಕೊಟ್ಟಳು.


ಯಕೋಬನು, “ನಾನೇ ನಿಮ್ಮ ಹಿರಿಯ ಮಗ ಏಸಾವನು; ನಿಮ್ಮ ಅಪ್ಪಣೆಯಂತೆ ಮಾಡಿಕೊಂಡು ಬಂದಿದ್ದೇನೆ. ಎದ್ದು ಕುಳಿತುಕೊಂಡು ನಾನು ತಂದಿರುವ ಬೇಟೆಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸಿ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು