Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:46 - ಕನ್ನಡ ಸತ್ಯವೇದವು C.L. Bible (BSI)

46 ಅನಂತರ ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಹೆಣ್ಣುಗಳ ದೆಸೆಯಿಂದ ನನ್ನ ಬಾಳು ಬೇಸರವಾಗಿದೆ. ಯಕೋಬನು ಕೂಡ ಈ ನಾಡಿನ ಹೆಣ್ಣನ್ನು ಆರಿಸಿಕೊಂಡು ಇಂಥ ಹಿತ್ತಿಯ ಹುಡುಗಿಯನ್ನೇ ಮದುವೆಮಾಡಿಕೊಂಡರೆ ನಾನು ಇನ್ನು ಬದುಕಿ ಪ್ರಯೋಜನ ಇಲ್ಲ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಗಿದೆ, ಯಾಕೋಬನೂ ಈ ದೇಶದಲ್ಲಿರುವ ಹಿತ್ತಿಯ ಸ್ತ್ರೀಯನ್ನು ಆರಿಸಿಕೊಂಡು ಮದುವೆ ಮಾಡಿಕೊಂಡರೆ, ನಾನು ಇನ್ನೂ ಬದುಕುವುದರಿಂದ ಪ್ರಯೋಜನವೇನು?” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ರೆಬೆಕ್ಕಳು ಇಸಾಕನಿಗೆ - ಹಿತ್ತಿಯರಾದ ಈ ಸ್ತ್ರೀಯರ ದೆಸೆಯಿಂದ ನನಗೆ ಬೇಸರವಾಯಿತು. ಯಾಕೋಬನೂ ಈ ದೇಶದವರಲ್ಲಿ ಹೆಣ್ಣನ್ನು ಆದುಕೊಂಡು ಇಂಥಾ ಹಿತ್ತಿಯ ಸ್ತ್ರೀಯನ್ನು ಮದುವೆಮಾಡಿಕೊಂಡರೆ ನಾನು ಇನ್ನೂ ಬದುಕುವದರಿಂದ ಪ್ರಯೋಜನವೇನು ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ನಂತರ ರೆಬೆಕ್ಕಳು ಇಸಾಕನಿಗೆ, “ನಿನ್ನ ಮಗನಾದ ಏಸಾವನು ಹಿತ್ತಿಯರ ಸ್ತ್ರೀಯರನ್ನು ಮದುವೆ ಮಾಡಿಕೊಂಡಿದ್ದಾನೆ. ಆ ಸ್ತ್ರೀಯರಿಂದ ನನಗೆ ಸಾಕಾಗಿ ಹೋಗಿದೆ; ಯಾಕೆಂದರೆ ಅವರು ನಮ್ಮ ಜನರಲ್ಲ. ಯಾಕೋಬನು ಸಹ ಇಂಥ ಸ್ತ್ರೀಯರಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡರೆ ನಾನು ಸಾಯುವುದೇ ಮೇಲು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ರೆಬೆಕ್ಕಳು ಇಸಾಕನಿಗೆ, “ಹಿತ್ತಿಯ ಸ್ತ್ರೀಯರ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ. ಇಂಥ ಹಿತ್ತಿಯ ಸ್ತ್ರೀಯರಲ್ಲಿ ಒಬ್ಬಳನ್ನು ತನ್ನ ಹೆಂಡತಿಯಾಗಿ ಯಾಕೋಬನು ಮದುವೆ ಮಾಡಿಕೊಂಡರೆ, ನಾನು ಬದುಕಿರುವುದು ವ್ಯರ್ಥ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:46
11 ತಿಳಿವುಗಳ ಹೋಲಿಕೆ  

“ನನ್ನ ಮಗ ಇಸಾಕನಿಗೆ ಹೆಣ್ಣನ್ನು ನಾನು ವಾಸಮಾಡುತ್ತಿರುವ ಕಾನಾನ್ಯರಿಂದ ತರಬಾರದು;


ಕಾನಾನ್ಯರ ಹೆಣ್ಣುಗಳು ತನ್ನ ತಂದೆ ಇಸಾಕನಿಗೆ ಹಿಡಿಸಲಿಲ್ಲ ಎಂಬುದನ್ನು ಅರಿತುಕೊಂಡ ಅವನು


ಆಹಾ! ಬಚ್ಚಿಡಲಾರೆಯಾ ನನ್ನನ್ನು ಪಾತಾಳದೊಳಗೆ? ಅಲ್ಲಿ ಮರೆಮಾಚಿಡಲಾರೆಯಾ ನಿನ್ನ ಕೋಪ ಇಳಿಯುವವರೆಗೆ? ಕಾಲವನ್ನು ಗೊತ್ತುಮಾಡಲಾರೆಯಾ ನನ್ನನು ನೆನೆಯುವುದಕೆ?


ಬದುಕು ನನಗೆ ಬೇಸರ; ನಿರಂತರ ಬಾಳು ನನಗೆ ಅನಿಷ್ಟ ನನ್ನ ದಿನಗಳು ನಿರರ್ಥಕ, ನನ್ನ ಗೊಡವೆ ನಿನಗೆ ಬೇಕಿಲ್ಲ.


ತರುವಾಯ ತಾನೊಬ್ಬನೇ, ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ದೂರಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. “ಸರ್ವೇಶ್ವರಾ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡಿ; ನನ್ನ ಪೂರ್ವಜರಿಗಿಂತ ನಾನು ಉತ್ತಮನಲ್ಲ,” ಎಂದು ದೇವರನ್ನು ಪ್ರಾರ್ಥಿಸಿದನು.


ನೀವು ಹೀಗೆ ಮಾಡುವುದಕ್ಕಿಂತಲೂ ನನ್ನನ್ನು ಈ ಕೂಡಲೆ ಕೊಂದುಹಾಕಿದರೆ ಉಪಕಾರವಾದೀತು; ನನಗಾಗುತ್ತಿರುವ ಸಂಕಟವನ್ನು ಸಹಿಸಲಾರೆ,” ಎಂದನು.


ಅದಕ್ಕೆ ದೇವರು: “ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು ಸರಿಯೇ?” ಎಂದು ಕೇಳಲು, ಯೋನನು, “ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?’ ಎಂದು ಉತ್ತರವಿತ್ತನು.


“ಆದುದರಿಂದ ಸರ್ವೇಶ್ವರಾ, ನನ್ನ ಪ್ರಾಣವನ್ನು ಹಿಂತೆಗೆದುಕೊಳ್ಳಿ. ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಮೊರೆಯಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು