Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:14 - ಕನ್ನಡ ಸತ್ಯವೇದವು C.L. Bible (BSI)

14 ನಿನ್ನ ಸಂತತಿ ಭೂಮಿಯ ಧೂಳಿನಂತೆ ಅಸಂಖ್ಯ ಆಗುವುದು; ನೀನು ಪೂರ್ವಪಶ್ಚಿಮ - ದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವೆ. ನಿನ್ನ ಮುಖಾಂತರ ಹಾಗೂ ನಿನ್ನ ಸಂತತಿಯ ಮುಖಾಂತರ ಜಗದ ಎಲ್ಲ ರಾಷ್ಟ್ರಗಳೂ ಆಶೀರ್ವಾದ ಪಡೆಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿನ್ನ ಸಂತತಿಯು ಭೂವಿುಯ ಧೂಳಿನಂತೆ ಅಸಂಖ್ಯವಾಗುವದು; ನೀನು ಪೂರ್ವಪಶ್ಚಿಮದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನ ಮೂಲಕವೂ ನಿನ್ನ ಸಂತತಿಯ ಮೂಲಕವೂ ಭೂವಿುಯ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಭೂಮಿಯ ಮೇಲೆ ಧೂಳಿನ ಕಣಗಳಿರುವಂತೆ ನಿನಗೆ ಅನೇಕಾನೇಕ ಸಂತತಿಗಳಿರುವರು. ಅವರು ಪೂರ್ವಪಶ್ಚಿಮಗಳಿಗೂ ಉತ್ತರದಕ್ಷಿಣಗಳಿಗೂ ಹರಡಿಕೊಳ್ಳುವರು. ನಿನ್ನ ಮೂಲಕವೂ ನಿನ್ನ ಸಂತತಿಯವರ ಮೂಲಕವೂ ಭೂಮಿಯ ಮೇಲಿರುವ ಎಲ್ಲಾ ಕುಲಗಳವರು ಆಶೀರ್ವಾದ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿನ್ನ ಸಂತತಿಯು ಭೂಮಿಯ ಧೂಳಿನಂತೆ ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣೋತ್ತರಗಳಿಗೆ ಹರಡಿಕೊಳ್ಳುವೆ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಜನರು ಆಶೀರ್ವಾದ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:14
26 ತಿಳಿವುಗಳ ಹೋಲಿಕೆ  

"ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”


ನಿನ್ನ ತಂದೆ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿದನು; ನನ್ನ ಆಜ್ಞಾವಿಧಿಗಳನ್ನೂ ನೇಮನಿಯಮಗಳನ್ನೂ ಕೈಗೊಂಡು ನಡೆದನು. ಆದುದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುತ್ತೇನೆ.


ದೇವರು ಪ್ರವಾದಿಗಳ ಮುಖಾಂತರ ಮಾಡಿದ ವಾಗ್ದಾನಗಳಿಗೂ ನಿಮ್ಮ ಪೂರ್ವಜರೊಂದಿಗೆ ಮಾಡಿದ ಒಡಂಬಡಿಕೆಗೂ ನೀವು ಉತ್ತರಾಧಿಕಾರಿಗಳು; ಪೂರ್ವಜ ಅಬ್ರಹಾಮನಿಗೆ, ‘ನಿನ್ನ ಸಂತತಿಯ ಮುಖಾಂತರ ವಿಶ್ವದ ಎಲ್ಲಾ ಜನಾಂಗಗಳು ಧನ್ಯರಾಗುವರು’ ಎಂದಿದ್ದಾರೆ ದೇವರು.


ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.


ಅವನಿಂದ ಮಹಾ ಬಲಿಷ್ಠವಾದ ರಾಷ್ಟ್ರವೊಂದು ಹುಟ್ಟಬೇಕಾಗಿದೆ. ಅವನ ಮುಖಾಂತರ ಜಗದ ಎಲ್ಲ ರಾಷ್ಟ್ರಗಳಿಗೆ ನನ್ನ ಆಶೀರ್ವಾದ ದೊರಕಬೇಕಾಗಿದೆ.


ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯಾತರನ್ನಾಗಿ ಮಾಡುತ್ತೇನೆ. ಭೂಮಿಯ ಧೂಳನ್ನು ಲೆಕ್ಕಿಸಲು ಸಾಧ್ಯವಾದಲ್ಲಿ ನಿನ್ನ ಸಂತಾನದವರನ್ನು ಲೆಕ್ಕಿಸಲು ಸಾಧ್ಯವಾದೀತು.


ಲೋಟನು ಅಬ್ರಾಮನನ್ನು ಬಿಟ್ಟುಹೋದ ಬಳಿಕ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ, “ನೀನು ಇರುವ ಸ್ಥಳದಿಂದಲೇ ದಕ್ಷಿಣೋತ್ತರ ಪೂರ್ವಪಶ್ಚಿಮಗಳ ಕಡೆಗೆ ಕಣ್ಣೆತ್ತಿ ನೋಡು.


ಹಾಗೆಯೇ, ದೇವರು ಅಬ್ರಹಾಮನಿಗೂ ಆತನ ಸಂತತಿಗೂ ವಾಗ್ದಾನಗಳನ್ನು ಮಾಡಿದರು. "ನಿನ್ನ ಸಂತತಿಗಳಿಗೆ" ಎಂದು ಹೇಳಿ ಅನೇಕರನ್ನು ಸೂಚಿಸದೆ “ನಿನ್ನ ಸಂತತಿಗೆ” ಎಂದು ಹೇಳಿ ಒಬ್ಬ ವ್ಯಕ್ತಿಯನ್ನೇ ಆ ವಾಗ್ದಾನದಲ್ಲಿ ಸೂಚಿಸಿದರು. ಆ ವ್ಯಕ್ತಿಯೇ ಕ್ರಿಸ್ತಯೇಸು.


ಈ ವಿಶ್ವಾಸದ ಮೂಲಕವೇ ಅನ್ಯಧರ್ಮೀಯರನ್ನು ಕೂಡ ದೇವರು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ, ಎಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆಯಲಾಗಿತ್ತು. ಈ ಕಾರಣದಿಂದಲೇ ಅಬ್ರಹಾಮನಿಗೆ, “ನಿನ್ನ ಮುಖಾಂತರವೇ ಎಲ್ಲಾ ಜನಾಂಗಗಳು ಆಶೀರ್ವಾದವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಮುಂಚಿತವಾಗಿ ತಿಳಿಸಲಾಯಿತು.


ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಪೂರ್ವ. ಪಶ್ಚಿಮ ದಿಕ್ಕುಗಳಿಂದ ಅನೇಕ ಜನರು ಬಂದು ಅಬ್ರಹಾಮ, ಇಸಾಕ, ಯಕೋಬರ ಸಮೇತ ಸ್ವರ್ಗಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು.


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು ಮಾಂಸಾಹಾರವನ್ನು ಮಾಡುವುದಕ್ಕೆ ಇಷ್ಟಪಟ್ಟರೆ ಮಾಡಬಹುದು.


ಯಕೋಬ್ಯರು ಧೂಳಿನಷ್ಟು ಅಸಂಖ್ಯ ಅವರನ್ನು ಲೆಕ್ಕಿಸಲು ಯಾರಿಂದ ಸಾಧ್ಯ? ಕಾಲ್ಭಾಗವನ್ನಾದರೂ ಹೇಳಲು ಯಾರಿಂದ ಸಾಧ್ಯ? ನಾ ಸಾಯಬೇಕು ಆ ಸಜ್ಜನರು ಸಾಯುವ ರೀತಿ ನನ್ನದಾಗಬೇಕು ಅವರಿಗಾಗುವ ಅಂತ್ಯಗತಿ.”


ನಿನಗೆ ಒಳ್ಳೆಯದನ್ನೇ ಮಾಡಿ ನಿನ್ನ ಸಂತತಿಯನ್ನು ಎಣಿಸಲಾಗದ ಕಡಲತೀರದ ಮರಳಿನಂತೆ ಹೆಚ್ಚಿಸುವೆನು, ಎಂದು ಹೇಳಿದವರು ನೀವೇ ಅಲ್ಲವೇ?”


ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಇಸ್ರಯೇಲರು ಪ್ರತಿಯೊಂದು ಕುಲದಲ್ಲಿ ಮುದ್ರೆಯೊತ್ತಿಸಿಕೊಂಡವರು ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಮಂದಿ. ಅವರ ಬಿಡಿ ಸಂಖ್ಯೆ ಹೀಗಿತ್ತು :


ನಿನ್ನ ಕಣ್ಣಿಗೆ ಕಾಣಿಸುವ ಈ ಪ್ರಾಂತ್ಯವನ್ನೆಲ್ಲಾ ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾಗಿ ಕೊಡುತ್ತೇನೆ.


ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರು.


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಆದರೆ ತಂದೆ ಅದಕ್ಕೆ ಒಪ್ಪದೆ, “ಗೊತ್ತು ಮಗನೇ, ನನಗೆ ಗೊತ್ತು; ಇವನಿಂದಲೂ ಒಂದು ರಾಷ್ಟ್ರ ಉತ್ಪತ್ತಿಯಾಗುವುದು; ಇವನೂ ಬಲಿಷ್ಠನಾಗುವನು. ಅವನಿಂದ ರಾಷ್ಟ್ರಗಳ ಸಮೂಹವೆ ಉತ್ಪತ್ತಿಯಾಗುವುದು,” ಎಂದು ಹೇಳಿದನು.


ಆ ಶಾಪಗ್ರಸ್ತ ವಸ್ತುಗಳಲ್ಲಿ ನೀವು ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು.


ಹೀಗೆ ಇರಲಾಗಿ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ ನುಡಿದದ್ದು ಸಾರ್ಥಕವಾಗಲಿ; ಧರೆಯ ಧೂಳಿನಷ್ಟು ಅಸಂಖ್ಯವಾದ ಜನಾಂಗದ ಮೇಲೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀರಿ.


ಏಕೆಂದರೆ ಹಬ್ಬಿಕೊಳ್ಳುವೆ ನೀನು ಎಡಬಲದೊಳು ಎಲ್ಲೆಲ್ಲು, ವಶಮಾಡಿಕೊಳ್ಳುವರು ನಿನ್ನ ಸಂತಾನದವರು ಜನಾಂಗಗಳನು. ಜನಭರಿತವಾಗುವಂತೆ ಮಾಡುವರು ಪಾಳುಬಿದ್ದ ಪಟ್ಟಣಗಳನು.


ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು