ಆದಿಕಾಂಡ 28:14 - ಕನ್ನಡ ಸತ್ಯವೇದವು C.L. Bible (BSI)14 ನಿನ್ನ ಸಂತತಿ ಭೂಮಿಯ ಧೂಳಿನಂತೆ ಅಸಂಖ್ಯ ಆಗುವುದು; ನೀನು ಪೂರ್ವಪಶ್ಚಿಮ - ದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವೆ. ನಿನ್ನ ಮುಖಾಂತರ ಹಾಗೂ ನಿನ್ನ ಸಂತತಿಯ ಮುಖಾಂತರ ಜಗದ ಎಲ್ಲ ರಾಷ್ಟ್ರಗಳೂ ಆಶೀರ್ವಾದ ಪಡೆಯುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿನ್ನ ಸಂತತಿಯು ಭೂವಿುಯ ಧೂಳಿನಂತೆ ಅಸಂಖ್ಯವಾಗುವದು; ನೀನು ಪೂರ್ವಪಶ್ಚಿಮದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನ ಮೂಲಕವೂ ನಿನ್ನ ಸಂತತಿಯ ಮೂಲಕವೂ ಭೂವಿುಯ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಭೂಮಿಯ ಮೇಲೆ ಧೂಳಿನ ಕಣಗಳಿರುವಂತೆ ನಿನಗೆ ಅನೇಕಾನೇಕ ಸಂತತಿಗಳಿರುವರು. ಅವರು ಪೂರ್ವಪಶ್ಚಿಮಗಳಿಗೂ ಉತ್ತರದಕ್ಷಿಣಗಳಿಗೂ ಹರಡಿಕೊಳ್ಳುವರು. ನಿನ್ನ ಮೂಲಕವೂ ನಿನ್ನ ಸಂತತಿಯವರ ಮೂಲಕವೂ ಭೂಮಿಯ ಮೇಲಿರುವ ಎಲ್ಲಾ ಕುಲಗಳವರು ಆಶೀರ್ವಾದ ಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿನ್ನ ಸಂತತಿಯು ಭೂಮಿಯ ಧೂಳಿನಂತೆ ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣೋತ್ತರಗಳಿಗೆ ಹರಡಿಕೊಳ್ಳುವೆ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಜನರು ಆಶೀರ್ವಾದ ಹೊಂದುವರು. ಅಧ್ಯಾಯವನ್ನು ನೋಡಿ |
ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.