Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:15 - ಕನ್ನಡ ಸತ್ಯವೇದವು C.L. Bible (BSI)

15 ಗಮನಿಸು, ನಾನು ನಿನ್ನೊಂದಿಗೆ ಇರುತ್ತೇನೆ. ನೀನು ಎಲ್ಲಿಗೆ ಹೋದರೂ ನಿನ್ನನ್ನು ಕಾಪಾಡಿ ಈ ನಾಡಿಗೆ ಮರಳಿ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲ ನೆರವೇರಿಸದೆ ಬಿಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ನಾನು ನಿನ್ನ ಸಂಗಡ ಇದ್ದು ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನನ್ನು ಕಾಪಾಡಿ ತಿರಿಗಿ ಈ ದೇಶಕ್ಕೆ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸಿದ ಹೊರತು ಬಿಡುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನಾನು ನಿನ್ನ ಸಂಗಡವಿದ್ದು ನೀನು ಹೋಗುವ ಪ್ರತಿಯೊಂದು ಸ್ಥಳದಲ್ಲಿಯೂ ನಿನ್ನನ್ನು ಕಾಪಾಡುವೆನು; ನಿನ್ನನ್ನು ಈ ಸ್ಥಳಕ್ಕೆ ಮತ್ತೆ ಕರೆದುಕೊಂಡು ಬರುವೆನು. ನಾನು ವಾಗ್ದಾನ ಮಾಡಿದ್ದನ್ನು ನೆರವೇರಿಸುವ ತನಕ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇಗೋ, ನಾನು ನಿನ್ನ ಸಂಗಡ ಇದ್ದು, ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಈ ದೇಶಕ್ಕೆ ನಿನ್ನನ್ನು ತಿರುಗಿ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವವರೆಗೆ ನಿನ್ನನ್ನು ಬಿಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:15
48 ತಿಳಿವುಗಳ ಹೋಲಿಕೆ  

ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ನಿನಗೆ ವಿರುದ್ಧವಾಗಿ ಅವರು ಯುದ್ಧಮಾಡುವರು; ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗಿರುವೆನು. ಇದು ಸರ್ವೇಶ್ವರನಾದ ನನ್ನ ನುಡಿ".


ನೀವು ಶೂರರಾಗಿ ಧೈರ್ಯದಿಂದಿರಿ; ಅವರಿಗೆ ಅಂಜಬೇಡಿ, ಕಳವಳಪಡಬೇಡಿ. ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇರುತ್ತಾರೆ; ಅವರು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ,” ಎಂದು ಹೇಳಿದನು.


ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.


ಆಗ ಸರ್ವೇಶ್ವರ ಸ್ವಾಮಿ ಅವನಿಗೆ, “ನಿನ್ನ ತಂದೆ ತಾತಂದಿರ ನಾಡಿಗೂ ನಿನ್ನ ಬಂಧುಬಳಗದವರ ಬಳಿಗೂ ಹಿಂದಿರುಗು. ನಾನು ನಿನ್ನೊಂದಿಗೆ ಇರುತ್ತೇನೆ,” ಎಂದು ಹೇಳಿದರು.


ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”


ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


ನಮ್ಮ ದೇವರಾದ ಸರ್ವೇಶ್ವರ ನಮ್ಮ ಪೂರ್ವಜರೊಂದಿಗೆ ಇದ್ದ ಹಾಗೆ ನಮ್ಮೊಂದಿಗೂ ಇರಲಿ! ಅವರು ನಮ್ಮನ್ನು ಕೈಬಿಡದಿರಲಿ, ತಳ್ಳದಿರಲಿ;


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ಬಳಿಕ ಯಕೋಬನು ಜೋಸೆಫನಿಗೆ, “ನನಗೆ ಮರಣ ಸಮೀಪಿಸಿದೆ; ಆದರೆ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ಪಿತೃಗಳ ನಾಡಿಗೆ ಮರಳಿ ಬರಮಾಡುವರು.


ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಸರ್ವೇಶ್ವರ ಅವನಿಗೆ, “ನಾನು ನಿನ್ನೊಂದಿಗೆ ಇರುವುದರಿಂದ ನೀನು ಮಿದ್ಯಾನ್ಯರೆಲ್ಲರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸದೆಬಡಿಯುವೆ,” ಎಂದರು.


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II


ಆದರೂ ಸರ್ವೇಶ್ವರ, ಜೋಸೆಫನ ಸಂಗಡ ಇದ್ದರು. ಅವನಿಗೆ ಅಪಾರ ಪ್ರೀತಿ ತೋರಿಸಿ, ಅವನಿಗೆ ಸೆರೆಯಜಮಾನನ ದಯೆ ದೊರಕುವಂತೆ ಮಾಡಿದರು.


ಸರ್ವೇಶ್ವರ ಸ್ವಾಮಿ ಜೋಸೆಫನ ಸಂಗಡ ಇದ್ದ ಕಾರಣ, ಅವನು ಏಳಿಗೆಯಾಗಿ ತನ್ನ ಈಜಿಪ್ಟಿನ ದಣಿಯ ಮನೆಯಲ್ಲಿ ಒಬ್ಬ ಸೇವಕನಾದ.


ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಇದಲ್ಲದೆ ಯಕೋಬನು ದೇವರನ್ನು ಹೀಗೆಂದು ಪ್ರಾರ್ಥಿಸಿದನು: “ಸ್ವಾಮಿ ಸರ್ವೇಶ್ವರಾ, ನನ್ನ ತಂದೆ ತಾತಂದಿರಾದ ಇಸಾಕ, ಅಬ್ರಹಾಮರ ದೇವರೇ, ಸ್ವಂತ ನಾಡಿಗೆ, ಬಂಧುಬಳಗದವರ ಬಳಿಗೆ ಹಿಂದಿರುಗಬೇಕೆಂದು ನನಗೆ ನೀವೇ ಆಜ್ಞಾಪಿಸಿದಿರಿ: 'ನಿನಗೆ ಒಳ್ಳೆಯದನ್ನೇ ಮಾಡುತ್ತೇನೆ' ಎಂದು ವಾಗ್ದಾನ ಮಾಡಿದವರು ನೀವೇ ಅಲ್ಲವೆ?


ನಾನೇ ನಿನ್ನೊಂದಿಗೆ ಈಜಿಪ್ಟಿಗೆ ಬರುವೆನು. ಅಲ್ಲಿಂದ ನಿನ್ನನ್ನು ನಿಶ್ಚಯವಾಗಿ ವಾಪಸ್ಸು ಕರೆದುಕೊಂಡು ಬರುವೆನು. ನೀನು ಸಾಯುವ ಕಾಲದಲ್ಲಿ ಜೋಸೆಫನು ಹಾಜರಿದ್ದು ನಿನ್ನ ಕಣ್ಣುಗಳನ್ನು ಮುಚ್ಚುವನು,” ಎಂದರು.


ಹುಡುಗನ ಸಂಗಡ ದೇವರಿದ್ದರು.


ಅಲ್ಲಿ ಅವರಿಗೆ, “ನನ್ನ ವಿಷಯದಲ್ಲಿ ನಿಮ್ಮ ತಂದೆಯ ಮನೋಭಾವ ಮೊದಲಿದ್ದಂತೆ ಇಲ್ಲವೆಂದು ಕಂಡುಬಂದಿದೆ. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾರೆ.


ಬೇತೇಲಿನಲ್ಲಿ ನಿನಗೆ ಕಾಣಿಸಿದ ದೇವರು ನಾನೇ, ಅಲ್ಲಿ ನೀನು ಕಲ್ಲಿನ ಮೇಲೆ ಎಣ್ಣೆ ಹೊಯ್ದು ಅಭ್ಯಂಗಿಸಿ, ನನಗೆ ಹರಕೆ ಮಾಡಿಕೊಂಡೆಯಲ್ಲವೆ? ಈಗ ಎದ್ದು ಈ ನಾಡನ್ನು ಬಿಟ್ಟು ನೀನು ಹುಟ್ಟಿದ ನಾಡಿಗೆ ಹಿಂದಿರುಗಿ ಹೋಗು’ ಎಂದು ತಿಳಿಸಿದನು,” ಎಂದನು.


ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ಕಡೆಯೆಲ್ಲ ನನ್ನೊಂದಿಗಿದ್ದ ದೇವರಿಗೆ ಅಲ್ಲೊಂದು ಬಲಿಪೀಠವನ್ನು ಕಟ್ಟಿಸುತ್ತೇನೆ,” ಎಂದು ಹೇಳಿದನು.


“ಸರ್ವೇಶ್ವರ ಸ್ವಾಮಿ ನಿಮಗೂ ನಿಮ್ಮ ಪೂರ್ವಜರಿಗೂ ಕೊಟ್ಟ ವಾಗ್ದಾನದ ಮೇರೆಗೆ ನಿಮ್ಮನ್ನು ಕಾನಾನ್ಯರ ನಾಡಿಗೆ ಬರಮಾಡಿ ಆ ನಾಡನ್ನು ನಿಮಗೆ ಕೊಟ್ಟನಂತರ


ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ!


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.


ಆಗ, ನಿಮ್ಮ ದೇವರಾದ ಸರ್ವೇಶ್ವರ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ನಿಮ್ಮನ್ನು ಚದುರಿಸಿದ ಎಲ್ಲ ದೇಶಗಳಿಂದ ಮತ್ತೆ ಕೂಡಿಸುವರು.


ಸರ್ವೇಶ್ವರ ತಾವೇ ನಿನ್ನ ಮುಂದುಗಡೆ ಹೋಗುವರು; ಅವರೇ ನಿನ್ನ ಸಂಗಡ ಇರುವರು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ. ಅಂಜಬೇಡ; ಧೈರ್ಯದಿಂದಿರು,” ಎಂದು ಹೇಳಿದನು.


ರಾಖೇಲಳು ಜೋಸೆಫನನ್ನು ಹೆತ್ತ ಬಳಿಕ ಯಕೋಬನು ಲಾಬಾನನಿಗೆ, “ನನಗೆ ಅಪ್ಪಣೆಯಾಗಬೇಕು, ನಾನು ಸ್ವಂತ ಊರಿಗೂ ನಾಡಿಗೂ ಹಿಂದಿರುಗಬೇಕಾಗಿದೆ.


ಯಕೋಬ್, ಇಸಾಕ್ ಹಾಗು ಅಬ್ರಹಾಮ್ ಇವರಿಗೆ ಮಾಡಿದ ವಾಗ್ದಾನಗಳನ್ನು ನೆನಪಿಗೆ ತಂದುಕೊಳ್ಳುವೆನು. ಅವುಗಳನ್ನು ನೆರವೇರಿಸುವೆನು. ಅವರ ಸ್ವಂತ ನಾಡನ್ನು ಕರುಣೆಯಿಂದ ಜ್ಞಾಪಿಸಿಕೊಳ್ಳುವೆನು.


ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನೇ ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದೇ ಅವರ ಪೂರ್ವಜರನ್ನು ಎಲ್ಲ ಜನಾಂಗಗಳ ಕಣ್ಮುಂದೆಯೇ ಈಜಿಪ್ಟಿನಿಂದ ಬರಮಾಡಿದೆನು. ನಾನು ಸರ್ವೇಶ್ವರ.”


ನೀನು ಹೋದೆಡೆಯೆಲ್ಲಾ ನಿನ್ನ ಕಾಯುವುದಕ್ಕೆ I ಕೊಟ್ಟಿಹನಾತ ಕಟ್ಟಳೆ ತನ್ನ ದೂತರಿಗೆ II


ಬದಲಿಗೆ, ‘ಇಸ್ರಯೇಲರನ್ನು ಉತ್ತರ ದೇಶದಿಂದ ಹಾಗು ಅವರನ್ನು ತಾನು ತಳ್ಳಿಬಿಟ್ಟಿದ್ದ ಎಲ್ಲ ಸೀಮೆಗಳಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ನಾನು ಅವರ ಪೂರ್ವಜರಿಗೆ ದಯಪಾಲಿಸಿದ ನಾಡಿಗೆ ಅವರನ್ನು ಮರಳಿ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು