Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:18 - ಕನ್ನಡ ಸತ್ಯವೇದವು C.L. Bible (BSI)

18 ಯಕೋಬನು ಬೆಳಗಿನ ಜಾವದಲ್ಲಿ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಆ ಕಲ್ಲನ್ನು ಸ್ಮಾರಕಸ್ತಂಭವಾಗಿ ನೆಟ್ಟನು. ಅದರ ಮೇಲೆ ಎಣ್ಣೆ ಹೊಯ್ದು ಅಭ್ಯಂಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾಕೋಬನು ಬೆಳಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನಿಲ್ಲಿಸಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೊತ್ತಾರೆ ಅವನು ಎದ್ದಾಗ ತಾನು ತಲೆಗಿಂಬಿಗೆ ಇಟ್ಟುಕೊಂಡಿದ್ದ ಕಲ್ಲನ್ನು ಕಂಬವಾಗಿ ನಿಲ್ಲಿಸಿ ಅದರ ತುದಿಯಲ್ಲಿ ಎಣ್ಣೇ ಹೊಯಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯಾಕೋಬನು ಮರುದಿನ ಮುಂಜಾನೆ ಬೇಗನೆ ಎದ್ದು, ತಾನು ಮಲಗಿಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಕಂಬವಾಗಿ ನೆಲದಲ್ಲಿ ನಿಲ್ಲಿಸಿದನು. ನಂತರ ಆ ಕಲ್ಲಿನ ಮೇಲೆ ಎಣ್ಣೆಯನ್ನು ಸುರಿದನು. ಹೀಗೆ ಅವನು ಆ ಕಲ್ಲನ್ನು ದೇವರ ನೆನಪಿಗಾಗಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯಾಕೋಬನು ಬೆಳಿಗ್ಗೆ ಎದ್ದು, ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು, ಅದನ್ನು ಸ್ತಂಭವಾಗಿ ನೆಟ್ಟು, ಅದರ ಮೇಲೆ ಎಣ್ಣೆಯನ್ನು ಹೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:18
16 ತಿಳಿವುಗಳ ಹೋಲಿಕೆ  

ಯಕೋಬನು ತನ್ನೊಡನೆ ದೇವರು ಮಾತನಾಡಿದ ಆ ಸ್ಥಳದಲ್ಲಿ ಕಲ್ಲಿನ ಸ್ತಂಭವೊಂದನ್ನು ನಿಲ್ಲಿಸಿ, ಅದರ ಮೇಲೆ ಪಾನಕಾ ಅಭಿಷೇಕಮಾಡಿ, ಎಣ್ಣೆಹೊಯ್ದು ಅಭ್ಯಂಗಿಸಿದನು.


ಆಗ ಯಕೋಬನು ಒಂದು ಕಲ್ಲನ್ನು ತೆಗೆದುಕೊಂಡು ಸ್ಮಾರಕಸ್ತಂಭವಾಗಿ ನಿಲ್ಲಿಸಿದನು.


ಯಕೋಬನು ಆಕೆಯ ಸಮಾಧಿಯ ಮೇಲೆ ಸ್ಮಾರಕಸ್ತಂಭವನ್ನು ನಿಲ್ಲಿಸಿದನು. ಅದು ಇಂದಿನವರೆಗೂ ರಾಖೇಲಳ ಸಮಾಧಿಸ್ತಂಭ ಎನಿಸಿಕೊಳ್ಳುತ್ತದೆ.


ಬೇತೇಲಿನಲ್ಲಿ ನಿನಗೆ ಕಾಣಿಸಿದ ದೇವರು ನಾನೇ, ಅಲ್ಲಿ ನೀನು ಕಲ್ಲಿನ ಮೇಲೆ ಎಣ್ಣೆ ಹೊಯ್ದು ಅಭ್ಯಂಗಿಸಿ, ನನಗೆ ಹರಕೆ ಮಾಡಿಕೊಂಡೆಯಲ್ಲವೆ? ಈಗ ಎದ್ದು ಈ ನಾಡನ್ನು ಬಿಟ್ಟು ನೀನು ಹುಟ್ಟಿದ ನಾಡಿಗೆ ಹಿಂದಿರುಗಿ ಹೋಗು’ ಎಂದು ತಿಳಿಸಿದನು,” ಎಂದನು.


ಆ ದಿನದಂದು ಈಜಿಪ್ಟಿನ ನಡುವೆ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವಿರುವುದು ಮತ್ತು ನಾಡಿನ ಗಡಿಯಲ್ಲಿ ಸ್ವಾಮಿಯ ಸ್ಥಂಭ ಇರುವುದು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ನಿನ್ನ ಆಜ್ಞೆಯನು ನಾನು ಅನುಸರಿಸುವಲ್ಲಿ I ಆಲಸಿಯಲ್ಲ, ಆಸಕ್ತ ನಾನು ಅದರಲ್ಲಿ II


ಅಬ್ಷಾಲೋಮನು ಇನ್ನೂ ಜೀವದಿಂದಿದ್ದಾಗ, ತನ್ನ ಹೆಸರನ್ನುಳಿಸುವ ಮಗ ಇಲ್ಲದ್ದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದನ್ನು ಇಂದಿನವರೆಗೂ ‘ಅಬ್ಷಾಲೋಮನ ಸ್ಮಾರಕಸ್ತಂಭ’ ಎಂದು ಕರೆಯಲಾಗುತ್ತದೆ.


ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಸರ್ವೇಶ್ವರ ಇಲ್ಲಿಯವರೆಗೆ ನಮಗೆ ಸಹಾಯ ಮಾಡಿದರು,” ಎಂದು ಹೇಳಿ ಅದಕ್ಕೆ, ‘ಎಬನೆಜೆರ್’ ಎಂದು ಹೆಸರಿಟ್ಟನು.


ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ಮೇಲೆ ಅದನ್ನೂ ಅದರ ಸಾಮಾನುಗಳನ್ನೂ ಹಾಗೂ ಬಲಿಪೀಠವನ್ನು ಅದರ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.


ಅಬ್ರಹಾಮನು ಮುಂಜಾನೆಯೇ ಎದ್ದು ತನ್ನ ಹೇಸರಗತ್ತೆಗೆ ತಡಿಹಾಕಿಸಿ ಹೋಮಬಲಿಗೆ ಬೇಕಾದ ಕಟ್ಟಿಗೆಯನ್ನು ಸಿಗಿದು ಸಿದ್ಧಮಾಡಿಕೊಂಡು ಸೇವಕರಿಬ್ಬರನ್ನು ಹಾಗೂ ತನ್ನ ಮಗ ಇಸಾಕನನ್ನು ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ಪ್ರಯಾಣಮಾಡುತ್ತಾ ಅವನು ಒಂದು ಸ್ಥಳಕ್ಕೆ ಬಂದು ಸೇರಿದನು. ಹೊತ್ತು ಮುಳುಗಿದ್ದ ಕಾರಣ ಆ ರಾತ್ರಿ ಅಲ್ಲಿಯೇ ಇಳಿದುಕೊಂಡನು. ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲೇ ಮಲಗಿಕೊಂಡನು.


ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಜೋರ್ಡನಿನ ಮಧ್ಯೆ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲೇ ಇವೆ.


ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು