Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:20 - ಕನ್ನಡ ಸತ್ಯವೇದವು C.L. Bible (BSI)

20 ಅದೂ ಅಲ್ಲದೆ ಅವನು ಹೀಗೆಂದು ಹರಕೆ ಮಾಡಿಕೊಂಡನು; “ದೇವರು ನನ್ನ ಸಂಗಡವಿದ್ದು ನಾನು ಕೈಗೊಂಡ ಪ್ರಯಾಣದಲ್ಲಿ ನನ್ನನ್ನು ಕಾಪಾಡಿ, ಹೊಟ್ಟೆಗೆ ಊಟವನ್ನೂ ಮೈಗೆ ಬಟ್ಟೆಯನ್ನೂ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾಕೋಬನು ಅಲ್ಲಿ - ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ಆಹಾರವನ್ನೂ ಉಡುವದಕ್ಕೆ ವಸ್ತ್ರವನ್ನೂ ಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಂತರ ಯಾಕೋಬನು ಈ ಪ್ರಮಾಣವನ್ನು ಮಾಡಿದನು: “ದೇವರು ನನ್ನ ಸಂಗಡವಿದ್ದು ನಾನು ಹೋದಲ್ಲೆಲ್ಲ ನನ್ನನ್ನು ಕಾಪಾಡಿ ಊಟಕ್ಕೆ ಆಹಾರವನ್ನೂ, ಉಡಲು ಬಟ್ಟೆಗಳನ್ನೂ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಯಾಕೋಬನು ಪ್ರಮಾಣಮಾಡಿ, “ದೇವರು ನನ್ನ ಸಂಗಡ ಇದ್ದು, ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ, ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ ನನಗೆ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:20
29 ತಿಳಿವುಗಳ ಹೋಲಿಕೆ  

ನಮಗೆ ಊಟ, ಬಟ್ಟೆ ಇದ್ದರೆ ಅಷ್ಟೇ ಸಾಕು.


ನಿಮ್ಮ ಸೇವಕನಾದ ನಾನು ಸಿರಿಯಾದೇಶದ ಗೆಷೂರಿನಲ್ಲಿದ್ದಾಗ ಸರ್ವೇಶ್ವರ ನನ್ನನ್ನು ಮರಳಿ ಜೆರುಸಲೇಮಿಗೆ ಬರಮಾಡುವುದಾದರೆ ಅವರಿಗೆ ಒಂದು ವಿಶೇಷ ಆರಾಧನೆ ಮಾಡಿಸುವೆನೆಂದು ಹರಕೆ ಮಾಡಿದ್ದೆನು,” ಎಂದು ವಿಜ್ಞಾಪಿಸಿದನು.


ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ.


ದಹನ ಬಲಿಯನರ್ಪಿಸೆ ದೇಗುಲಕೆ ಧಾವಿಸುವೆ I ನಿನಗೆ ನಾ ಹೊತ್ತ ಹರಕೆಗಳನ್ನು ತೀರಿಸುವೆ II


ಬೇತೇಲಿನಲ್ಲಿ ನಿನಗೆ ಕಾಣಿಸಿದ ದೇವರು ನಾನೇ, ಅಲ್ಲಿ ನೀನು ಕಲ್ಲಿನ ಮೇಲೆ ಎಣ್ಣೆ ಹೊಯ್ದು ಅಭ್ಯಂಗಿಸಿ, ನನಗೆ ಹರಕೆ ಮಾಡಿಕೊಂಡೆಯಲ್ಲವೆ? ಈಗ ಎದ್ದು ಈ ನಾಡನ್ನು ಬಿಟ್ಟು ನೀನು ಹುಟ್ಟಿದ ನಾಡಿಗೆ ಹಿಂದಿರುಗಿ ಹೋಗು’ ಎಂದು ತಿಳಿಸಿದನು,” ಎಂದನು.


ಇದಾದ ಮೇಲೆ ಪೌಲನು ಕೊರಿಂಥದಲ್ಲಿ ಅನೇಕ ದಿನ ಇದ್ದನು. ಅನಂತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾಡಿದ್ದ ಹರಕೆಯ ಪ್ರಕಾರ ಕೆಂಖ್ರೆಯೆಂಬ ಸ್ಥಳದಲ್ಲಿ ಮುಂಡನ ಮಾಡಿಸಿಕೊಂಡನು.


ಸ್ಮರಿಸಿಕೊ ಪ್ರಭೂ, ಆತನು ಮಾಡಿದ ಶಪಥವನು I ಯಕೋಬ್ಯ ಘನದೇವನಿಗಾತ ಕೊಟ್ಟ ಈ ಮಾತನು II


ನಡೆದುಕೊಳ್ಳುವೆನು ಶಪಥ ಮಾಡಿರುವಂತೆ I ನಿನ್ನ ನೀತಿವಿಧಿಗಳನು ಪಾಲಿಪೆನು ಅದರಂತೆ II


ಹೇ ಜೆರುಸಲೇಮೇ, ನಿನ್ನ ಮಧ್ಯದೊಳು I ಆತನಿರುವ ಮಂದಿರದ ಅಂಗಳದೊಳು I ತೀರಿಸುವೆನು ಆತನ ಸಭೆಯ ಸಮ್ಮುಖದೊಳು I ಅರ್ಪಿಸುವೆನು ನಾ ಹೊತ್ತ ಆ ಹರಕೆಗಳನು II


ಆತನಿಗೆ ನಾ ಹೊತ್ತ ಹರಕೆಗಳನು I ಆತನ ಸಭೆಮುಂದೆಯೆ ತೀರಿಸುವೆನು II


ನಿಮ್ಮ ದೇವನಾದ ಸ್ವಾಮಿಗೆ ಸಲ್ಲಿಸಿರಿ ಹೊತ್ತ ಹರಕೆ I ಸುತ್ತಣರೆಲ್ಲರು ಸಮರ್ಪಿಸಲಿ ಭಯಂಕರನಿಗೆ ಕಾಣಿಕೆ II


ಸಲ್ಲಿಸುವೆನಾಗ ದಿನಬಿಡದೆ ನಿನಗೆ ಹರಕೆಗಳನು I ಸಂಕೀರ್ತಿಸುವೆನು ಸದಾ ನಿನ್ನ ಶ್ರೀನಾಮವನು II


ನಾ ಹೊತ್ತ ಹರಕೆಗಳಿಗೆ ದೇವಾ ನೀ ಲಕ್ಷ್ಯವಿತ್ತೆ I ನಿನ್ನ ಭಕ್ತರಿಗೆ ಸಿಗುವ ಭಾದ್ಯತೆಯ ನನಗೂ ಇತ್ತೆ II


ನಿನ್ನ ಮುಂದೆ ಜೀವನ್ ಜ್ಯೋತಿಯಲಿ ನಾ ನಡೆಯಮಾಡಿರುವೆ I ಮೃತ್ಯುವಿನಿಂದೆನ್ನ ಪ್ರಾಣವನು ನೀ ಮುಕ್ತಗೊಳಿಸಿರುವೆ I ಜಾರಿ ಬೀಳದಂತೆನ್ನ ಪಾದಗಳನು ಕಾದಿರಿಸಿರುವೆ II ಎಂದೇ ನಿನಗೆ ಹೊತ್ತ ಹರಕೆಗಳನು ಸಲ್ಲಿಸುವೆ I ಕೃತಜ್ಞತಾಬಲಿಗಳನು ದೇವಾ, ನಿನಗರ್ಪಿಸುವೆ II


ಸರ್ವೇಶ್ವರ ಸ್ವಾಮಿಯೇ ಈಜಿಪ್ಟಿನವರಿಗೆ ತಿಳಿಯಪಡಿಸುವರು. ಜನರು ಸ್ವಾಮಿಯನ್ನು ಅರಿತುಕೊಂಡು, ಯಜ್ಞನೈವೇದ್ಯಗಳನ್ನು ಕಾಣಿಕೆಯಾಗಿ ಸಮರ್ಪಿಸುವರು, ಹೊತ್ತ ಹರಕೆಗಳನ್ನು ನೆರವೇರಿಸುವರು.


ಪ್ರಭು, ನೀನೆ ಸ್ಪೂರ್ತಿ, ತುಂಬುಸಭೆಯಲಿ ನಾ ಮಾಳ್ಪ ಸ್ತುತಿಗೆ I ಭಕ್ತಜನರ ಮುಂದೆ ನಾ ಸಲ್ಲಿಸುವೆ, ನಿನಗೆ ಹೊತ್ತ ಹರಕೆ II


ಆ ದಿವಸ ಸೌಲನು ಇಸ್ರಯೇಲರಿಗೆ, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕಾಗಿ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತ,” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹಳವಾಗಿ ಬಳಲಿಹೋಗಿದ್ದರು. ಒಬ್ಬನಾದರೂ ಆಹಾರಪದಾರ್ಥವನ್ನು ರುಚಿಸಿರಲಿಲ್ಲ.


ಇವನನ್ನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟಿದ್ದೇನೆ. ಬದುಕಿರುವ ತನಕ ಇವನು ಅವರಿಗೇ ಪ್ರತಿಷ್ಠಿತನು,” ಎಂದು ಹೇಳಿದಳು. ಬಳಿಕ ಅವರು ಸರ್ವೇಶ್ವರಸ್ವಾಮಿಯನ್ನು ಆರಾಧಿಸಿದರು.


“ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”


ಗಮನಿಸು, ನಾನು ನಿನ್ನೊಂದಿಗೆ ಇರುತ್ತೇನೆ. ನೀನು ಎಲ್ಲಿಗೆ ಹೋದರೂ ನಿನ್ನನ್ನು ಕಾಪಾಡಿ ಈ ನಾಡಿಗೆ ಮರಳಿ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲ ನೆರವೇರಿಸದೆ ಬಿಡುವುದಿಲ್ಲ,” ಎಂದರು.


ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ಕಡೆಯೆಲ್ಲ ನನ್ನೊಂದಿಗಿದ್ದ ದೇವರಿಗೆ ಅಲ್ಲೊಂದು ಬಲಿಪೀಠವನ್ನು ಕಟ್ಟಿಸುತ್ತೇನೆ,” ಎಂದು ಹೇಳಿದನು.


ಆದರೆ ಯಾಬೇಚ, “ಸರ್ವೇಶ್ವರಾ, ನನ್ನನ್ನು ಆಶೀರ್ವದಿಸಿರಿ, ನನ್ನ ಭೂಮಿಯನ್ನು ವಿಸ್ತರಿಸಿರಿ. ನನ್ನೊಡನೆ ಇದ್ದು ನನಗೆ ನೋವನ್ನುಂಟುಮಾಡುವ ಎಲ್ಲಾ ದುಷ್ಟಶಕ್ತಿಗಳಿಂದ ನನ್ನನ್ನು ಕಾಪಾಡಿ,” ಎಂದು ಸರ್ವೇಶ್ಚರನಿಗೆ ಪ್ರಾರ್ಥಿಸಿದನು. ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಆಲಿಸಿ, ಕೇಳಿದ್ದನ್ನು ದಯಪಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು