Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:3 - ಕನ್ನಡ ಸತ್ಯವೇದವು C.L. Bible (BSI)

3 “ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಲಿ; ನಿನಗೆ ಬಹಳ ಸಂತತಿಯನ್ನು ಕೊಡಲಿ; ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೆ ಅನೇಕ ಮಕ್ಕಳನ್ನು ಕೊಡುವಂತೆಯೂ ನೀನು ಮಹಾಜನಾಂಗದ ತಂದೆಯಾಗುವಂತೆಯೂ ನಾನು ಪ್ರಾರ್ಥಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಿ, ನೀನು ದೊಡ್ಡ ಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:3
23 ತಿಳಿವುಗಳ ಹೋಲಿಕೆ  

ಅವನು ಜೋಸೆಫನಿಗೆ, “ಸರ್ವವಲ್ಲಭರಾದ ದೇವರು ಕಾನಾನ್ ನಾಡಿನ ಲೂಜಿನಲ್ಲಿ ನನಗೆ ದರ್ಶನಕೊಟ್ಟು, ಆಶೀರ್ವದಿಸಿ -


ಇದಲ್ಲದೆ ಅವನಿಗೆ ದೇವರು, “ನಾನೇ ಸರ್ವವಲ್ಲಭನಾದ ದೇವರು; ನೀನು ವೃದ್ಧಿಯಾಗಿ ಬಹುಸಂತಾನವುಳ್ಳವನಾಗು. ನಿನ್ನಿಂದ ರಾಷ್ಟ್ರವೊಂದು ಉಂಟಾಗುವುದು, ಅನೇಕ ರಾಷ್ಟ್ರಗಳೂ ರಾಜರುಗಳೂ ನಿನ್ನಿಂದ ಹುಟ್ಟುವರು.


ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯಾತರನ್ನಾಗಿ ಮಾಡುತ್ತೇನೆ. ಭೂಮಿಯ ಧೂಳನ್ನು ಲೆಕ್ಕಿಸಲು ಸಾಧ್ಯವಾದಲ್ಲಿ ನಿನ್ನ ಸಂತಾನದವರನ್ನು ಲೆಕ್ಕಿಸಲು ಸಾಧ್ಯವಾದೀತು.


ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಹೀಗೆಂದರು - “ನೀವು ಅಭಿವೃದ್ಧಿಯಾಗಿ ಹೆಚ್ಚು ಮಕ್ಕಳನ್ನು ಪಡೆಯಿರಿ’; ಭೂಲೋಕದಲ್ಲೆಲ್ಲ ಹರಡಿಕೊಳ್ಳಿ.


ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ.


ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಬಿಡುವಂತೆ ಸರ್ವವಲ್ಲಭರಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಬೇಕಾದರೆ ಹಾಗೆಯೇ ಆಗಲಿ!” ಎಂದನು.


ಎರಡನೆಯ ಮಗನು ಹುಟ್ಟಿದಾಗ, ಯಾವ ದೇಶದಲ್ಲಿ ನನಗೆ ಸಂಕಷ್ಟವಿತ್ತೋ ಆ ದೇಶದಲ್ಲಿ ದೇವರು ನನಗೆ ಸಮೃದ್ಧಿಯನ್ನು ದಯಪಾಲಿಸಿದ್ದಾರೆ!” ಎಂದು ಆ ಮಗನಿಗೆ ‘ಎಫ್ರಾಯೀಮ್’ ಎಂದು ನಾಮಕರಣ ಮಾಡಿದನು.


“ಸಾವಿರ, ಹತ್ತು ಸಾವಿರ, ಸಂತತಿಯಾಗಲಿ, ಎಲೆ ತಂಗಿ ನಿನಗೆ; ವೈರಿಗಳ ನಗರಗಳು ಸ್ವಾಧೀನವಾಗಲಿ ನಿನ್ನ ಸಂತತಿಗೆ!”


ಆ ನಗರದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ; ಏಕೆಂದರೆ, ಸರ್ವಶಕ್ತ ದೇವರಾದ ಪ್ರಭುವೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ.


ಅಕ್ಕರೆಯಿಂದ ನಾನಾಗ ನಿಮ್ಮನ್ನು ಸ್ವಾಗತಿಸುವೆನು ತಂದೆಯಾಗಿರುವೆನು ನಾನು ನಿಮಗೆ ಪುತ್ರಪುತ್ರಿಯರಾಗಿರುವಿರಿ ನೀವು ನನಗೆ.” - ಎಂದು ನುಡಿದಿಹರು ಸರ್ವಶಕ್ತ ಪ್ರಭು.


ಪ್ರಭುವಿನಿಂದ ಬಂದ ಸೊತ್ತು - ಪುತ್ರಸಂತಾನ I ಕರುಳ ಕುಡಿಯು ಆತ ನೀಡುವ ಬಹುಮಾನ II


“ನಾನು ಸರ್ವೇಶ್ವರ, ಅಬ್ರಹಾಮ, ಇಸಾಕ ಹಾಗು ಯಕೋಬರಿಗೆ ನಾನು ‘ಸರ್ವಶಕ್ತನಾದ ದೇವರು ಎಂಬ ಹೆಸರುಳ್ಳವನಾಗಿ ಕಾಣಿಸಿಕೊಂಡನೇ ಹೊರತು ‘ಸರ್ವೇಶ್ವರ’ ಎಂಬ ನನ್ನ ಹೆಸರಿನಿಂದ ಅವರಿಗೆ ಗೋಚರವಾಗಲಿಲ್ಲ.


ಪ್ರಭುವೇ ಮನೆಮಠವನು ಕಟ್ಟದ ಹೊರತು I ಅದನು ಕಟ್ಟುವವರ ಪ್ರಯಾಸ ವ್ಯರ್ಥ II ಪ್ರಭುವೇ ಪಟ್ಟಣವನು ಕಟ್ಟಿದ ಹೊರತು I ಕಾವಲುಗಾರನು ಅದನು ಕಾಯುವುದು ವ್ಯರ್ಥ II


ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ. ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತತಿಯನ್ನು ಕೊಡುತ್ತೇನೆ. ಅವನು ಹನ್ನೆರಡು ಮಂದಿ ಅಧಿಪತಿಗಳಿಗೆ ಮೂಲಪಿತನಾಗುವನು. ಅವನ ಸಂತತಿಯನ್ನು ದೊಡ್ಡ ರಾಷ್ಟ್ರವನ್ನಾಗಿ ಮಾಡುತ್ತೇನೆ.


ನಿನ್ನ ತಂದೆ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿದನು; ನನ್ನ ಆಜ್ಞಾವಿಧಿಗಳನ್ನೂ ನೇಮನಿಯಮಗಳನ್ನೂ ಕೈಗೊಂಡು ನಡೆದನು. ಆದುದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುತ್ತೇನೆ.


ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.


ಆಗ ಇಸಾಕನು ಗಡಗಡನೆ ನಡುಗುತ್ತಾ, “ಹಾಗಾದರೆ ಬೇಟೆಯಾಡಿ ನನಗೆ ಊಟ ತಂದುಕೊಟ್ಟವನಾರು? ನೀನು ಬರುವುದಕ್ಕೆ ಮುಂಚೆ ಅವನು ತಂದುದನ್ನು ಊಟಮಾಡಿ ಅವನನ್ನೇ ಅಂತಿಮವಾಗಿ ಆಶೀರ್ವದಿಸಿಬಿಟ್ಟೆನು; ಅವನಿಗೆ ಮಾಡಿದ ಆಶೀರ್ವಾದ ಇನ್ನು ತಪ್ಪಲಾರದು,” ಎಂದನು.


‘ನಾನು ನಿನ್ನನ್ನು ಫಲಪ್ರದನನ್ನಾಗಿ ಮಾಡಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು; ಅನೇಕ ಜನರಿಗೆ ನಿನ್ನನ್ನು ಮೂಲಪುರುಷನನ್ನಾಗಿ ಮಾಡುವೆನು; ನಿನ್ನ ತರುವಾಯ ನಿನ್ನ ಸಂತತಿಗೆ ಈ ನಾಡನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು,’ ಎಂದು ಹೇಳಿದರು.


ಹೀಗಾಯಿತು ನಿನ್ನ ತ0ದೆಯ‍‍ ದೇವರಿ0ದ ಸಿಗಲಿ ನಿನಗಾತನ ಸಹಾಯ ಹೀಗಾಯಿತು ಸರ್ವವಲ್ಲಭ ದೇವರಿ0ದ. ದೊರಕಲಿ ನಿನಗಾತನ ಆಶೀರ್ವಾದ. ಮೇಲಣ ಆಕಾಶದಿ0ದ, ಕೆಳಗಣ ಸಾಗರ ಸೆಲೆಗಳಿ0ದ ಸ್ತನ್ಯದಿ0ದ, ಗರ್ಭದಿ0ದ, ಆತ ನೀಡುವ ವರದಾನ.


ಆದರೂ ಇಸ್ರಯೇಲನ ವಂಶವು ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯಿತು. ಅವರು ಶಕ್ತಿಶಾಲಿಗಳಾದರು. ಆ ದೇಶದಲ್ಲೆಲ್ಲಾ ತುಂಬಿಕೊಂಡರು.


ಸ್ವಲ್ಪ ಹೊತ್ತಾದ ಮೇಲೆ, ಇದ್ದಕ್ಕಿದ್ದ ಹಾಗೆ ಬೋವಜನು ಬೆತ್ಲೆಹೇಮಿನಿಂದ ಅಲ್ಲಿಗೆ ಬಂದನು. ಅವನು, “ಸರ್ವೇಶ್ವರಸ್ವಾಮಿ ನಿಮ್ಮೊಡನೆ ಇರಲಿ!” ಎಂದು ಕೆಲಸದಾಳುಗಳನ್ನು ವಂದಿಸಿದನು. ಅದಕ್ಕೆ ಅವರು, “ಸರ್ವೇಶ್ವರ ನಿಮ್ಮನ್ನೂ ಹರಸಲಿ!” ಎಂದು ಪ್ರತಿವಂದನೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು