Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:13 - ಕನ್ನಡ ಸತ್ಯವೇದವು C.L. Bible (BSI)

13 ಲಾಬಾನನು ತನ್ನ ಸೋದರಳಿಯ ಬಂದ ಸುದ್ದಿಯನ್ನು ಕೇಳಿ ಅವನನ್ನು ಎದುರುಗೊಳ್ಳಲು ಓಡಿಬಂದನು. ಯಕೋಬನನ್ನು ಅಪ್ಪಿಕೊಂಡು ಮುದ್ದಿಟ್ಟು, ಮನೆಗೆ ಕರೆದುಕೊಂಡು ಹೋದನು. ನಡೆದ ಸಂಗತಿಗಳನ್ನೆಲ್ಲ ಯಕೋಬನು ಲಾಬಾನನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನು ಬಂದಿರುವ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಲಾಬಾನನು ತನ್ನ ಸೋದರಳಿಯನು ಬಂದ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರಕೊಂಡು ಬಂದನು. ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಲಾಬಾನನು ತನ್ನ ತಂಗಿಯ ಮಗನಾದ ಯಾಕೋಬನ ವಿಷಯವನ್ನು ಕೇಳಿ ಭೇಟಿಯಾಗಲು ಓಡಿಬಂದನು. ಲಾಬಾನನು ಅವನನ್ನು ಅಪ್ಪಿಕೊಂಡು ಮುದ್ದಿಟ್ಟು ಮನೆಗೆ ಕರೆದುಕೊಂಡು ಬಂದನು. ಯಾಕೋಬನು ನಡೆದ ಪ್ರತಿಯೊಂದನ್ನೂ ಲಾಬಾನನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಲಾಬಾನನು ತನ್ನ ಸಹೋದರಿಯ ಮಗ ಯಾಕೋಬನ ಸುದ್ದಿಯನ್ನು ಕೇಳಿದಾಗ, ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:13
12 ತಿಳಿವುಗಳ ಹೋಲಿಕೆ  

ರೆಬೆಕ್ಕಳಿಗೆ ಲಾಬಾನ್‍ ಎಂಬ ಅಣ್ಣ ಇದ್ದನು.


ಪವಿತ್ರವಾದ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಎಲ್ಲಾ ಕ್ರೈಸ್ತಸಭೆಗಳವರು ನಿಮಗೆ ತಮ್ಮ ವಂದನೆಗಳನ್ನು ಕಳುಹಿಸಿದ್ದಾರೆ.


ಅನಂತರ ಅವರು ಅವನನ್ನು ತಬ್ಬಿಕೊಂಡು ಮುದ್ದಿಟ್ಟು ಬೀಳ್ಕೊಟ್ಟರು. ಅವರ ಕಣ್ಣಲ್ಲಾದರೋ ನೀರು ಧಾರಾಕಾರವಾಗಿ ಹರಿಯುತ್ತಿತ್ತು.


ನೀನು ನನಗೆ ಮುತ್ತಿಟ್ಟು ಸ್ವಾಗತಿಸಲಿಲ್ಲ; ಆದರೆ ಈಕೆ ಒಳಗೆ ಬಂದಾಗಿನಿಂದ ನನ್ನ ಪಾದಗಳಿಗೆ ಮುತ್ತಿಡುವುದನ್ನು ನಿಲ್ಲಿಸಿಲ್ಲ;


ಜನರೆಲ್ಲರು ನದಿ ದಾಟಿದರು. ಅರಸನು ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಮರಳಿದನು.


ಮೋಶೆ ಹೊರಗೆ ಬಂದು ತನ್ನ ಮಾವನನ್ನು ಎದುರುಗೊಂಡು, ವಂದಿಸಿ, ಮುದ್ದಿಟ್ಟನು. ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಅವರು ಡೇರೆಯೊಳಕ್ಕೆ ಹೋದರು.


ಇದಲ್ಲದೆ ಸರ್ವೇಶ್ವರ ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳಲು ಮರುಭೂಮಿಗೆ ತೆರಳು,” ಎಂದರು. ಅಂತೆಯೇ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.


ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಕಣ್ಣೀರಿಟ್ಟನು. ತರುವಾಯ ಅವರು ಅವನ ಸಂಗಡ ಮಾತನಾಡತೊಡಗಿದರು.


ನೆರೆಯವರ ವಿಷಯದಲ್ಲಿ ಜಾಣತನದಿಂದ ವರ್ತಿಸಿರಿ. ನಿಮಗಿರುವ ಸಮಯ ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳಿರಿ.


“ಸರ್ವೇಶ್ವರ ಸ್ವಾಮಿಯಿಂದ ಆಶೀರ್ವಾದ ಪಡೆದವನೇ, ಮನೆಗೆ ಬಾ; ಇಲ್ಲಿ ಹೊರಗೇಕೆ ನಿಂತಿರುವೆ? ನಿನಗೆ ಮನೆ ಸಿದ್ಧವಾಗಿದೆ; ಒಂಟೆಗಳಿಗೆ ಬೇಕಾದ ಸ್ಥಳವಿದೆ,” ಎಂದು ಕರೆದನು.


ಆದರೆ ಏಸಾವನು ಅವನನ್ನು ಎದುರುಗೊಳ್ಳಲು ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು.


ಆ ಮನುಷ್ಯ ಮನೆಗೆ ಬಂದಾಗ ಲಾಬಾನನು ಒಂಟೆಗಳ ಹೊರೆಯನ್ನು ಇಳಿಸಿ, ಅವುಗಳಿಗೆ ಹುಲ್ಲು ಮೇವನ್ನು ಕೊಡಿಸಿದನು. ಆ ಮನುಷ್ಯನ ಮತ್ತು ಅವನ ಸಂಗಡಿಗರ ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು