Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:21 - ಕನ್ನಡ ಸತ್ಯವೇದವು C.L. Bible (BSI)

21 ತರುವಾಯ ಯಕೋಬನು ಲಾಬಾನನಿಗೆ, “ನನ್ನ ಸೇವಾವಧಿ ಮುಗಿಯಿತು. ಆಕೆ ನನ್ನ ಹೆಂಡತಿಯಾಗುವಂತೆ ನನ್ನ ಸ್ವಾಧೀನಕ್ಕೆ ಕೊಡಿ,” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತರುವಾಯ ಯಾಕೋಬನು ಲಾಬಾನನಿಗೆ, “ನನಗೆ ಗೊತ್ತು ಮಾಡಿದ ಕಾಲವು ಪೂರ್ತಿಯಾದವು. ರಾಹೇಲಳನ್ನು ನನಗೆ ಮದುವೆಮಾಡಿ ನನ್ನ ಸ್ವಾಧೀನಕ್ಕೆ ಕೊಡು” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ತರುವಾಯ ಯಾಕೋಬನು ಲಾಬಾನನಿಗೆ - ಗೊತ್ತುಮಾಡಿದ ಕಾಲವು ಮುಗಿದು ಹೋಯಿತು; ಆಕೆಯನ್ನು ನನ್ನ ಹೆಂಡತಿಯಾಗುವಂತೆ ನನ್ನ ಸ್ವಾಧೀನಕ್ಕೆ ಕೊಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಏಳು ವರ್ಷಗಳಾದ ಮೇಲೆ ಯಾಕೋಬನು ಲಾಬಾನನಿಗೆ, “ನನಗೆ ರಾಹೇಲಳನ್ನು ಮದುವೆ ಮಾಡಿಕೊಡು. ನನ್ನ ಸೇವೆಯ ಕಾಲ ಮುಗಿದುಹೋಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ತರುವಾಯ ಯಾಕೋಬನು ಲಾಬಾನನಿಗೆ, “ನನ್ನ ಸೇವಾ ದಿನಗಳು ಪೂರ್ತಿಯಾದವು. ನಾನು ನನ್ನ ಹೆಂಡತಿಯೊಂದಿಗೆ ಬಾಳುವಂತೆ ಆಕೆಯನ್ನು ನನಗೆ ಕೊಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:21
9 ತಿಳಿವುಗಳ ಹೋಲಿಕೆ  

ಕೆಲವು ದಿನಗಳಾದ ಮೇಲೆ ಗೋದಿಯ ಸುಗ್ಗಿಯಲ್ಲಿ ಸಂಸೋನನು ಒಂದು ಹೋತಮರಿಯನ್ನು ತೆಗೆದುಕೊಂಡು ತನ್ನ ಹೆಂಡತಿಯನ್ನು ನೋಡುವುದಕ್ಕೆ ಹೋದನು. ಆಕೆಯ ತಂದೆ ಬಳಿಗೆ ಬಂದನು; “ನನ್ನ ಹೆಂಡತಿಯ ಒಳಗಿನ ಕೋಣೆಗೆ ಹೋಗಬಿಡು,” ಎಂದನು. ಅವನು, “ಹೋಗಕೂಡದು.


ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ.


ಆಕೆ ವೇಶ್ಯೆ ಎಂದೇ ಭಾವಿಸಿ, ದಾರಿಯಿಂದ ಓರೆಯಾಗಿ, ಆಕೆಯ ಬಳಿಗೆ ಹೋಗಿ, “ಸಂಭೋಗಕ್ಕೆ ಬರುತ್ತೀಯಾ?" ಎಂದು ಕರೆದನು. “ಬರಬೇಕಾದರೆ ಏನು ಕೊಡುತ್ತೀಯಾ?" ಎಂದಳು ಆಕೆ.


ಇಂಥ ಪರಿಸ್ಥಿತಿಯಲ್ಲೂ ಇಪ್ಪತ್ತು ವರ್ಷ ನಿಮ್ಮ ಮನೆಯಲ್ಲಿದ್ದು ನಿಮ್ಮಿಬ್ಬರ ಹೆಣ್ಣು ಮಕ್ಕಳಿಗಾಗಿ ಹದಿನಾಲ್ಕು ವರ್ಷ ಹಾಗೂ ನಿಮ್ಮ ಆಡುಕುರಿಗಳಿಗಾಗಿ ಆರು ವರ್ಷ ದುಡಿದಿದ್ದೇನೆ. ಹೀಗಿದ್ದರೂ ಹತ್ತು ಸಾರಿ ನೀವು ನನ್ನ ಸಂಬಳವನ್ನು ಬದಲಾಯಿಸಿದಿರಿ.


ಅಂತೆಯೇ ಯಕೋಬನು ರಾಖೇಲಳಿಗಾಗಿ ಏಳು ‌ವರ್ಷ‌ಕಾಲ ಸೇವೆಮಾಡಿದನು. ಆಕೆಯ ಮೇಲೆ ಅವನಿಗೆ ಬಹಳ ಪ್ರೀತಿಯಿದ್ದುದರಿಂದ ಅದು ಅವನಿಗೆ ಕೇವಲ ಕೆಲವೇ ದಿನಗಳಂತೆ ಕಾಣಿಸಿತು.


ಯಕೋಬನಿಗೆ ರಾಖೇಲಳ ಮೇಲೆ ಪ್ರೀತಿ. ಎಂತಲೇ, “ನಿಮ್ಮ ಕಿರಿಯ ಮಗಳು ರಾಖೇಲಳಿಗೋಸ್ಕರ ನಿಮ್ಮಲ್ಲಿ ಏಳು ವರುಷ ಸೇವೆಮಾಡುತ್ತೇನೆ,” ಎಂದು ಹೇಳಿದನು.


ಆದಾಮನು ತನ್ನ ಹೆಂಡತಿಯ ಜೊತೆ ಕೂಡಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತಳು. “ಸರ್ವೇಶ್ವರ ಸ್ವಾಮಿಯ ಅನುಗ್ರಹದಿಂದ ಒಂದು ಗಂಡುಮಗುವನ್ನು ಪಡೆದಿದ್ದೇನೆ” ಎಂದಳು.


ಆಗ ಲಾಬಾನನು ಊರಿನವರನ್ನೆಲ್ಲ ಕರೆಯಿಸಿ ಔತಣವನ್ನು ಏರ್ಪಡಿಸಿದನು.


“ಒಬ್ಬನು ತಾನು ಮದುವೆಮಾಡಿಕೊಂಡ ಹೆಂಡತಿಯನ್ನು ದ್ವೇಷಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು