Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:32 - ಕನ್ನಡ ಸತ್ಯವೇದವು C.L. Bible (BSI)

32 ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. “ಸರ್ವೇಶ್ವರ ನನ್ನ ದೀನ ಸ್ಥಿತಿಯನ್ನು ನೋಡಿದ್ದಾರೆ, ಇನ್ನು ಮುಂದೆ ಗಂಡ ನನ್ನನ್ನು ಪ್ರೀತಿಸುತ್ತಾನೆ,” ಎಂದುಕೊಂಡು ಆ ಮಗುವಿಗೆ ‘ರೂಬೇನ್’ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು - ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ; ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ರೂಬೇನೆಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಲೇಯಳು ಒಬ್ಬ ಮಗನನ್ನು ಹೆತ್ತಳು. ಆಕೆಯು ತನ್ನೊಳಗೆ, “ಯೆಹೋವನು ನನ್ನ ದುಃಖವನ್ನು ನೋಡಿದ್ದಾನೆ. ನನ್ನ ಗಂಡನು ನನ್ನನ್ನು ಪ್ರೀತಿಸುವುದಿಲ್ಲ. ಈಗಲಾದರೊ ಅವನು ನನ್ನನ್ನು ಪ್ರೀತಿಸಬಹುದು” ಎಂದು ಹೇಳಿ ಆ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಲೇಯಳು ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಿಜವಾಗಿ ಯೆಹೋವ ದೇವರು ನನ್ನ ಬಾಧೆಯನ್ನು ನೋಡಿದ್ದಾರೆ. ಆದ್ದರಿಂದ ನನ್ನ ಗಂಡನು ನನ್ನನ್ನು ಪ್ರೀತಿ ಮಾಡುವನು,” ಎಂದು ಹೇಳಿ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:32
24 ತಿಳಿವುಗಳ ಹೋಲಿಕೆ  

ಆಗ ನಾವು ನಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ಮೊರೆಯಿಟ್ಟೆವು; ಅವರು ಆಲಿಸಿ ನಮ್ಮ ದುರವಸ್ಥೆಯನ್ನೂ ಕಷ್ಟ ಉಪದ್ರವಗಳನ್ನೂ ನೋಡಿ,


ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.


ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ನೋಡಿದನಾತ ಅವರ ಕಷ್ಟಕಾರ್ಪಣ್ಯವನು I ಗಮನಿಸಿದನು ಅವರ ಆರ್ತನಾದವನು II


ನೋಡೆನ್ನ ಬಾಧೆ ಬವಣೆಗಳನು I ತೊಡೆದು ಹಾಕೆನ್ನ ಪಾಪಗಳನು II


ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು.


ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. “ನಾನು ಇವನನ್ನು ಸರ್ವೇಶ್ವರನಿಂದ ಬೇಡಿ ಪಡೆದೆ,” ಎಂದು ಹೇಳಿ ಆ ಮಗುವಿಗೆ ‘ಸಮುವೇಲ’ ಎಂದು ಹೆಸರಿಟ್ಟಳು.


“ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”


ರಾತ್ರಿಗೆ ಒಂದು ಚಾವಡಿಯಲ್ಲಿ ಇಳಿದುಕೊಂಡರು. ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಧಾನ್ಯಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದನು. ತಾನು ತಂದಿದ್ದ ಹಣ ಅದರ ಬಾಯಲ್ಲೇ ಇತ್ತು.


ಅಂತೆಯೇ ರೂಬೇನನು, “ಆ ಹುಡುಗನಿಗೆ ಯಾವ ಕೇಡೂ ಮಾಡಬೇಡಿ’ ಎಂದು ನಾನು ಹೇಳಲಿಲ್ಲವೆ? ನೀವು ಕೇಳದೆಹೋದಿರಿ. ಅವನ ರಕ್ತ ಈಗ ನಮ್ಮಿಂದ ಪ್ರಾಯಶ್ಚಿತ್ತ ಕೇಳುತ್ತಿದೆ,” ಎಂದ.


ನನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ಆಗಿರುವಂಥವರು ನನ್ನ ಕಡೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀವು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿರಿ. ದೇವರು ನನ್ನ ಕಷ್ಟದುಃಖವನ್ನೂ ನಾನು ಪಟ್ಟ ಪ್ರಯಾಸವನ್ನೂ ಗಮನಿಸಿದ್ದಾರೆ. ಆದ್ದರಿಂದಲೇ ನಿನ್ನೆಯ ರಾತ್ರಿ ನಿಮಗೆ ಎಚ್ಚರಿಕೆ ನೀಡಿದ್ದಾರೆ,” ಎಂದನು.


ಯಕೋಬನ ಮಕ್ಕಳಲ್ಲಿ ಹಿರಿಯವನಾದ ರೂಬೇನನ ವಂಶಜರು ಇವರು: (ರೂಬೇನ್ ತನ್ನ ತಂದೆಯ ಉಪಪತ್ನಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದರಿಂದ ಚೊಚ್ಚಲು ಮಗನ ಹಕ್ಕುಬಾಧ್ಯತೆಗಳನ್ನು ಕಳೆದುಕೊಂಡನು. ಆ ಹಕ್ಕುಗಳು ಜೋಸೆಫನಿಗೆ ಕೊಡಲ್ಪಟ್ಟವು;


ಹುಟ್ಟುವನು ಮಗನೊಬ್ಬನು ಗರ್ಭಿಣಿಯಾದ ನಿನಗೆ ಇಷ್ಮಾಯೇಲೆಂಬ ಹೆಸರನು ಇಡು ಅವನಿಗೆ ಕಾರಣ - ಸರ್ವೇಶ್ವರ ಕಿವಿಗೊಟ್ಟಿಹನು ನಿನ್ನ ಮೊರೆಗೆ.


ರೂಬೇನನು ಮರಳಿ ಆ ಬಾವಿಯ ಬಳಿಗೆ ಬಂದು ನೋಡಿದನು. ಅದರಲ್ಲಿ ಜೋಸೆಫನು ಇರಲಿಲ್ಲ.


ಇಸ್ರಯೇಲನು ಆ ನಾಡಿನಲ್ಲಿ ವಾಸವಾಗಿದ್ದಾಗ ರೂಬೇನ್ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗಮಿಸಿದನು, ಈ ಸಂಗತಿ ತಿಳಿದುಬಂದಾಗ ಇಸ್ರಯೇಲನಿಗೆ ಕಡುಕೋಪವಾಯಿತು.


ಹೀಗಿರಲು ಲೇಯಳ ಬಗ್ಗೆ ಯಕೋಬನಿಗೆ ಉದಾಸೀನ ಉಂಟಾಯಿತು. ಇದನ್ನು ಕಂಡು ಸರ್ವೇಶ್ವರಸ್ವಾಮಿ ಆಕೆಗೆ ತಾಯ್ತನವನ್ನು ಅನುಗ್ರಹಿಸಿದರು; ರಾಖೇಲಳು ಬಂಜೆಯಾಗೇ ಉಳಿದಳು.


ನಿಮಗೆ ಸಹಾಯಕರಾಗಿರಬೇಕಾದವರ ಹೆಸರುಗಳು ಇವು: ರೂಬೇನ್ ಕುಲದಿಂದ ಶೆದೇಯೂರನ ಮಗ ಎಲೀಚೂರ್.


ಯಕೋಬನ ಹನ್ನೆರಡು ಗಂಡು ಮಕ್ಕಳ ಹೆಸರು ಇವು: ಯಕೋಬನ ಚೊಚ್ಚಲಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್ - ಇವರು ಲೇಯಳಲ್ಲಿ ಹುಟ್ಟಿದವರು.


ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂಬೀ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು.


ಎಫ್ರಯಿಮಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ರೂಬೇನಿಗೆ ಒಂದು ಪಾಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು