Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:18 - ಕನ್ನಡ ಸತ್ಯವೇದವು C.L. Bible (BSI)

18 ಬೆಳಸುವುದದು ಅತುಳ ಕಳೆಯನ್ನು, ಮುಳ್ಳುಗಿಡಗಳನ್ನು ತಿನ್ನಬೇಕಾಗುವುದು ನೀನು ಬೈಲಿನ ಬೆಳೆಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ಭೂವಿುಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಹುಟ್ಟುವವು. ಹೊಲದ ಬೆಳೆಯನ್ನು ಅನುಭವಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಭೂಮಿಯು ನಿನಗೋಸ್ಕರ ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸುವುದು. ಹೊಲದಲ್ಲಿ ಬೆಳೆಯುವ ಬೆಳೆಯನ್ನು ನೀನು ತಿನ್ನುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಭೂಮಿಯಲ್ಲಿ ಮುಳ್ಳುಗಿಡಗಳೂ ಕಳ್ಳಿಗಳೂ ಬೆಳೆಯುವುವು. ನೀನು ಹೊಲದ ಬೆಳೆಯನ್ನು ಉಣ್ಣುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:18
20 ತಿಳಿವುಗಳ ಹೋಲಿಕೆ  

ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳ ನಡುವೆ ಬಿದ್ದವು. ಆ ಪೊದೆಗಳು ಸಸ್ಯಗಳ ಸಮೇತ ಬೆಳೆದು, ಅವುಗಳನ್ನು ಅಡಗಿಸಿಬಿಟ್ಟವು.


ಆ ದಿನದಂದು ಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವ ಸಹಸ್ರ ದ್ರಾಕ್ಷಿಬಳ್ಳಿಗಳು ಬೆಳೆಯುವಂಥ ಪ್ರತಿಯೊಂದು ಪ್ರದೇಶದಲ್ಲೂ ಮುಳ್ಳುಪೊದೆಗಳು ಬೆಳೆದುಕೊಳ್ಳುವುವು.


ಹಸಿದವರು ಅವನ ಬೆಳೆಯನು ತಿಂದುಬಿಡುವರು ಮುಳ್ಳುಬೇಲಿ ಹಾಕಿದ್ದರೂ ಅದನು ತಿಂದುಬಿಡುವರು ಅವನ ಸೊತ್ತನು ನುಂಗಲು ಬಾಯ್ದೆರೆದು ಕಾದಿರುವರು.


ಆದರೆ, ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ಅಪ್ರಯೋಜಕವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ; ಕೊನೆಗದು ಬೆಂಕಿಗೆ ತುತ್ತಾಗುತ್ತದೆ.


ಜುದೇಯದವರಿಗೂ ಜೆರುಸಲೇಮಿನವರಿಗೂ ಸರ್ವೇಶ್ವರ ಹೇಳುವುದೇನೆಂದರೆ - “ಪಾಳುಬಿದ್ದ ನಿಮ್ಮ ಹೊಲಗದ್ದೆಗಳನ್ನು ಉತ್ತು ಹದಮಾಡಿ, ಮುಳ್ಳುಗಳ ನಡುವೆ ಬಿತ್ತಬೇಡಿ.


ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದರುಗಳು ಹುಟ್ಟಿಕೊಂಡಿವೆ. ಉಲ್ಲಾಸದಿಂದ ಕೂಡಿದ್ದ ಮನೆಗಳೂ ಲವಲವಿಕೆಯಿಂದ ತುಂಬಿದ್ದ ನಗರಗಳೂ ಶೂನ್ಯವಾಗಿವೆ, ಅರಮನೆ ಪಾಳುಬಿದ್ದಿದೆ.


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ವಕ್ರಬುದ್ಧಿಯುಳ್ಳವನ ಹಾದಿತುಂಬ ಮುಳ್ಳು, ಉರುಳು; ಅದರಿಂದ ದೂರವಿರುವನು ಪ್ರಾಣದಾಸೆಯುಳ್ಳವನು.


ಅದು ಬೆಳೆಯಲಿ ಮುಳ್ಳುಗಳನ್ನು ಗೋದಿಗೆ ಬದಲಾಗಿ ಹಣಜಿಹುಲ್ಲನು ಜವೆಗೋದಿಗೆ ಪ್ರತಿಯಾಗಿ.” ಇತಿ, ಯೋಬನ ಮಾತುಗಳು ಮುಗಿದವು.


ಮಿಶ್ರವಾದರೆ ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಮಧ್ಯೆಯಿಂದ ಹೊರಡಿಸುವುದೇ ಇಲ್ಲವೆಂಬುದು ನಿಮಗೆ ತಿಳಿದಿರಲಿ. ಆ ಜನರೇ ನಿಮಗೆ ಉರುಳೂ ಬೋನೂ ಆಗುವರು; ಪಕ್ಕೆಗೆ ಬಡಿಯುವ ಕೊರಡಾಗಿಯೂ ಇರಿಯುವ ಶೂಲವಾಗಿಯೂ ಕಣ್ಣಿಗೆ ಚುಚ್ಚುವ ಮುಳ್ಳಾಗಿಯೂ ಮಾರ್ಪಡುವರು. ಕಡೆಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ಈ ಚೆಲುವ ನಾಡಲ್ಲಿ ನೀವೇ ಇಲ್ಲದಂತಾಗುವಿರಿ.


ಜನರು ಗೋದಿಯನ್ನು ಬಿತ್ತಿದರು ಆದರೆ ಮುಳ್ಳುಗಿಡವನ್ನು ಕೊಯ್ದರು ! ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರು ಆದರೆ ಯಾವ ಲಾಭವೂ ಗಿಟ್ಟದೆಹೋಯಿತು. ತಮ್ಮ ಬೆಳೆಯ ವಿಷಯವಾಗಿ ಹೇಸಬೇಕಾಯಿತು ನನ್ನ ಕೋಪಾಗ್ನಿಯೆ ಇದಕ್ಕೆ ಕಾರಣವಾಯಿತು.”


ಅವುಗಳಲ್ಲಿ ಮುಳ್ಳುಗಿಡಗಳು ಹರಡಿಕೊಂಡಿದ್ದವು, ಕಳೆಗಳು ಮುಚ್ಚಿಕೊಂಡಿದ್ದವು, ಕಲ್ಲಿನಗೋಡೆ ಹಾಳಾಗಿತ್ತು.


ತೊಟ್ಟುಕೊಂಡಿರುವೆ ಬೆಳಕನೇ ಬಟ್ಟೆಯಂತೆ I ಹರಡಿಸಿರುವೆ ಆಗಸವನು ಗುಡಾರದಂತೆ II


ಇಳೆಯ ಮಾನವರನು ನೀ ಮಣ್ಣುಪಾಲಾಗಿಸುತಿಹೆ I ‘ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ’ ಎನ್ನುತಿಹೆ II


ಬರಿಗೈಯಲ್ಲಿ ಬಂದೆ ನಾನು ತಾಯಗರ್ಭದಿಂದ ಬರಿಗೈಯಲ್ಲಿ ಹಿಂತಿರುಗುವೆ ನಾನು ಇಲ್ಲಿಂದ ಸರ್ವೇಶ್ವರ ಕೊಟ್ಟ ಸರ್ವೇಶ್ವರ ತೆಗೆದುಕೊಂಡ ಆತನ ನಾಮಕ್ಕೆ ಸ್ತುತಿಸ್ತೋತ್ರ! ಎಂದನು.


ಒಬ್ಬನು ಎಂಥ ಆಹಾರವನ್ನಾದರೂ ಭುಜಿಸಬಹುದೆಂದು ಭಾವಿಸುತ್ತಾನೆ. ವಿಶ್ವಾಸದಲ್ಲಿ ಸ್ಥಿರವಿಲ್ಲದವನು ಸಸ್ಯಾಹಾರಿ ಆಗಿಯೇ ಇರುತ್ತಾನೆ.


ಅನಂತರ ಆದಾಮನಿಗೆ: “ತಿನ್ನಬಾರದೆಂದು ನಾ ವಿಧಿಸಿದ ಮರದ ಹಣ್ಣನ್ನು ತಿಂದೆ ನೀನು, ಕೇಳಿ ನಿನ್ನಾ ಮಡದಿಯ ಮಾತನ್ನು. ಇದಕಾರಣ ಹಾಕಿರುವೆನು ಶಾಪ ಹೊಲನೆಲಕ್ಕೆ ದುಡಿವೆ ನೀನು ಜೀವಮಾನವಿಡೀ ಅದರ ಕೃಷಿಗೆ.


ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."


ಅಲ್ಲಿ ಜನರು ಬಿಲ್ಲುಬಾಣಗಳನ್ನು ಹಿಡಿದು ಬೇಟೆಯಾಡುವರು. ನಾಡೆಲ್ಲ ಮುಳ್ಳುಪೊದೆಯಾಗಿ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು